<p><strong>ಬಾಗಲಕೋಟೆ:</strong> ನಗರದ ತರಕಾರಿ ಮಾರುಕಟ್ಟೆ ಬಳಿ ಶುಕ್ರವಾರ ಮಧ್ಯಾಹ್ನ ಕಲ್ಲು ತೂರಾಟ ಮಾಡಲಾಗಿದೆ.</p><p>ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ, ಕುಮಾರಸ್ವಾಮಿ ಹಿರೇಮಠ ಮತ್ತಿತರರ ಮುಖಂಡತ್ವದಲ್ಲಿ ಸಭೆ ನಡೆದಿತ್ತು.</p><p>ಸಭೆ ಮುಗಿಸಿಕೊಂಡ ಯುವಕರ ದಂಡು ತರಕಾರಿ ಮಾರುಕಟ್ಟೆಯತ್ತ ಬಂದಿತು. ಆ ವೇಳೆ ಕಲ್ಲು ತೂರಾಟ ನಡೆದಿದೆ.</p><p>ಕಲ್ಲು ತೂರಾಟ ಮಾಡಿದ ಯುವಕರನ್ನು ಚದರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ.</p><p><strong>ಅಂಗಡಿಗಳು ಬಂದ್:</strong> ತರಕಾರಿ ಮಾರುಕಟ್ಟೆ ಸುತ್ತಮುತ್ತಲಿನ ಪ್ರದೇಶದಲ್ಲಿ ಅಂಗಡಿಗಳು ಬಂದ್ ಆಗಿದ್ದವು.</p><p>ಗುರುವಾರ ರಾತ್ರಿ ಶಿವಾಜಿ ಜಯಂತಿ ಮೆರವಣಿಗೆ ತೆರಳುವ ವೇಳೆ ಪಂಕಾ ಮಸೀದಿ ಬಳಿ ಕಲ್ಲು ತೂರಾಟ ನಡೆದಿತ್ತು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಢ ಸಿದ್ದಾರ್ಥ ಗೋಯಲ್ ಅವರ ತಲೆಗೆ ಗಾಯವಾಗಿತ್ತು.</p><p><strong>ಬಿಗುವಿನ ವಾತಾವರಣೆ:</strong> ನಗರದಲ್ಲಿ ಬಿಗುವಿನ ವಾತಾವರಣವಿದೆ. ಇಂದಿನಿಂದ ಫೆ.24ರವರೆಗೆ ನಿಷೇಧಾಜ್ಞೆ ವಿಧಿಸಿದ್ದರೂ, ಯುವಕರು ಗುಂಪಾಗಿ ತಿರುಗಾಡುತ್ತಿದ್ದಾರೆ.</p><p>ಅಲ್ಲಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸುವ ಮೂಲಕ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆhttps://www.prajavani.net/district/bagalkot/stone-pelting-case-section-one-forty-four-imposed-in-bagalkote-3790123</p>.ಬಾಗಲಕೋಟೆ ಕಲ್ಲು ತೂರಾಟ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ನಗರದ ತರಕಾರಿ ಮಾರುಕಟ್ಟೆ ಬಳಿ ಶುಕ್ರವಾರ ಮಧ್ಯಾಹ್ನ ಕಲ್ಲು ತೂರಾಟ ಮಾಡಲಾಗಿದೆ.</p><p>ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ, ಕುಮಾರಸ್ವಾಮಿ ಹಿರೇಮಠ ಮತ್ತಿತರರ ಮುಖಂಡತ್ವದಲ್ಲಿ ಸಭೆ ನಡೆದಿತ್ತು.</p><p>ಸಭೆ ಮುಗಿಸಿಕೊಂಡ ಯುವಕರ ದಂಡು ತರಕಾರಿ ಮಾರುಕಟ್ಟೆಯತ್ತ ಬಂದಿತು. ಆ ವೇಳೆ ಕಲ್ಲು ತೂರಾಟ ನಡೆದಿದೆ.</p><p>ಕಲ್ಲು ತೂರಾಟ ಮಾಡಿದ ಯುವಕರನ್ನು ಚದರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ.</p><p><strong>ಅಂಗಡಿಗಳು ಬಂದ್:</strong> ತರಕಾರಿ ಮಾರುಕಟ್ಟೆ ಸುತ್ತಮುತ್ತಲಿನ ಪ್ರದೇಶದಲ್ಲಿ ಅಂಗಡಿಗಳು ಬಂದ್ ಆಗಿದ್ದವು.</p><p>ಗುರುವಾರ ರಾತ್ರಿ ಶಿವಾಜಿ ಜಯಂತಿ ಮೆರವಣಿಗೆ ತೆರಳುವ ವೇಳೆ ಪಂಕಾ ಮಸೀದಿ ಬಳಿ ಕಲ್ಲು ತೂರಾಟ ನಡೆದಿತ್ತು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಢ ಸಿದ್ದಾರ್ಥ ಗೋಯಲ್ ಅವರ ತಲೆಗೆ ಗಾಯವಾಗಿತ್ತು.</p><p><strong>ಬಿಗುವಿನ ವಾತಾವರಣೆ:</strong> ನಗರದಲ್ಲಿ ಬಿಗುವಿನ ವಾತಾವರಣವಿದೆ. ಇಂದಿನಿಂದ ಫೆ.24ರವರೆಗೆ ನಿಷೇಧಾಜ್ಞೆ ವಿಧಿಸಿದ್ದರೂ, ಯುವಕರು ಗುಂಪಾಗಿ ತಿರುಗಾಡುತ್ತಿದ್ದಾರೆ.</p><p>ಅಲ್ಲಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸುವ ಮೂಲಕ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆhttps://www.prajavani.net/district/bagalkot/stone-pelting-case-section-one-forty-four-imposed-in-bagalkote-3790123</p>.ಬಾಗಲಕೋಟೆ ಕಲ್ಲು ತೂರಾಟ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>