<p><strong>ಬಾಗಲಕೋಟೆ:</strong> ಕಥೆಗಾರ ಅಬ್ಬಾಸ ಮೇಲಿನಮನಿ (66) ತೀವ್ರ ಹೃದಯಾಘಾತದಿಂದ ಸೋಮವಾರ ಚಿತ್ರದುರ್ಗದ ಪುತ್ರಿಯ ನಿವಾಸದಲ್ಲಿ ನಿಧನರಾದರು.</p>.<p>ಗುಳೇದಗುಡ್ಡದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಚಾರ್ಯರಾಗಿ ನಿವೃತ್ತರಾಗಿದ್ದ ಅಬ್ಬಾಸ, ಕಥೆಗಾರನಾಗಿ ನಾಡಿನ ಸಾರಸ್ವತ ಲೋಕದಲ್ಲಿ ಗುರುತಿಸಿಕೊಂಡಿದ್ದರು.</p>.<p>ಕೃಷ್ಣಾ ತೀರದ ಜನರ ಬದುಕು, ಸಾಮಾಜಿಕ, ಸಾಂಸ್ಕೃತಿಕ ವೈಶಿಷ್ಟ್ಯ, ವೈರುಧ್ಯ ಹಾಗೂ ತಲ್ಲಣಗಳನ್ನು ತಮ್ಮ ಕಥೆಗಳಲ್ಲಿ ಬಹು ಸೂಕ್ಷ್ಮವಾಗಿ ಕಟ್ಟಿಕೊಡುತ್ತಿದ್ದ ಅಬ್ಬಾಸ ಮೇಲಿನಮನಿ, ವೃತ್ತಿಯಲ್ಲಿ ಶಿಕ್ಷಕರಾಗಿ ಅಪಾರ ಶಿಷ್ಯ ಬಳಗವನ್ನು ಹೊಂದಿದ್ದಾರೆ.</p>.<p>ಇಲ್ಲಿಯವರೆಗೆ ಒಂಬತ್ತು ಕಥಾ ಸಂಕಲನ, ಮೂರು ಕವನ ಸಂಕಲನ, ಮೂರು ಕಥಾ ಸಂಪುಟ, ಒಂದು ಕಾದಂಬರಿ, ಮೂರು ಲೇಖನಗಳ ಸಂಗ್ರಹ ಹಾಗೂ ಒಂಬತ್ತು ಸಂಪಾದಿತ ಕೃತಿಗಳನ್ನು ರಚಿಸಿದ್ದಾರೆ.</p>.<p>ಮಾಸ್ತಿ ಕಥಾ ಪ್ರಶಸ್ತಿ, ಡಾ. ಗೊರೂರು ಸಾಹಿತ್ಯ ಪ್ರಶಸ್ತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿಗಳು ಸೇರಿದಂತೆ ಹಲವು ಪ್ರಶಸ್ತಿಗಳು ಅಬ್ಬಾಸ ಅವರಿಗೆ ಸಂದಿವೆ.</p>.<p>ಪ್ರಜಾವಾಣಿಯ ಸಾಪ್ತಾಹಿಕ ಪುರವಣಿ, ಸುಧಾ, ಮಯೂರ ಸೇರಿದಂತೆ ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಅಬ್ಬಾಸ ಮೇಲಿನಮನಿ ಅವರ ಕಥೆಗಳು ಪ್ರಕಟವಾಗಿವೆ.</p>.<p>ಚಿತ್ರದುರ್ಗದಿಂದ ಪಾರ್ಥೀವ ಶರೀರವನ್ನು ಇಲ್ಲಿನ ನವನಗರದ ಮೂರನೇ ಸೆಕ್ಟರ್ ನಲ್ಲಿರುವ ಮನೆಗೆ ರಾತ್ರಿ ತರಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<p>ಅಬ್ಬಾಸ ಮೇಲಿನಮನಿ ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಕಥೆಗಾರ ಅಬ್ಬಾಸ ಮೇಲಿನಮನಿ (66) ತೀವ್ರ ಹೃದಯಾಘಾತದಿಂದ ಸೋಮವಾರ ಚಿತ್ರದುರ್ಗದ ಪುತ್ರಿಯ ನಿವಾಸದಲ್ಲಿ ನಿಧನರಾದರು.</p>.<p>ಗುಳೇದಗುಡ್ಡದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಚಾರ್ಯರಾಗಿ ನಿವೃತ್ತರಾಗಿದ್ದ ಅಬ್ಬಾಸ, ಕಥೆಗಾರನಾಗಿ ನಾಡಿನ ಸಾರಸ್ವತ ಲೋಕದಲ್ಲಿ ಗುರುತಿಸಿಕೊಂಡಿದ್ದರು.</p>.<p>ಕೃಷ್ಣಾ ತೀರದ ಜನರ ಬದುಕು, ಸಾಮಾಜಿಕ, ಸಾಂಸ್ಕೃತಿಕ ವೈಶಿಷ್ಟ್ಯ, ವೈರುಧ್ಯ ಹಾಗೂ ತಲ್ಲಣಗಳನ್ನು ತಮ್ಮ ಕಥೆಗಳಲ್ಲಿ ಬಹು ಸೂಕ್ಷ್ಮವಾಗಿ ಕಟ್ಟಿಕೊಡುತ್ತಿದ್ದ ಅಬ್ಬಾಸ ಮೇಲಿನಮನಿ, ವೃತ್ತಿಯಲ್ಲಿ ಶಿಕ್ಷಕರಾಗಿ ಅಪಾರ ಶಿಷ್ಯ ಬಳಗವನ್ನು ಹೊಂದಿದ್ದಾರೆ.</p>.<p>ಇಲ್ಲಿಯವರೆಗೆ ಒಂಬತ್ತು ಕಥಾ ಸಂಕಲನ, ಮೂರು ಕವನ ಸಂಕಲನ, ಮೂರು ಕಥಾ ಸಂಪುಟ, ಒಂದು ಕಾದಂಬರಿ, ಮೂರು ಲೇಖನಗಳ ಸಂಗ್ರಹ ಹಾಗೂ ಒಂಬತ್ತು ಸಂಪಾದಿತ ಕೃತಿಗಳನ್ನು ರಚಿಸಿದ್ದಾರೆ.</p>.<p>ಮಾಸ್ತಿ ಕಥಾ ಪ್ರಶಸ್ತಿ, ಡಾ. ಗೊರೂರು ಸಾಹಿತ್ಯ ಪ್ರಶಸ್ತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿಗಳು ಸೇರಿದಂತೆ ಹಲವು ಪ್ರಶಸ್ತಿಗಳು ಅಬ್ಬಾಸ ಅವರಿಗೆ ಸಂದಿವೆ.</p>.<p>ಪ್ರಜಾವಾಣಿಯ ಸಾಪ್ತಾಹಿಕ ಪುರವಣಿ, ಸುಧಾ, ಮಯೂರ ಸೇರಿದಂತೆ ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಅಬ್ಬಾಸ ಮೇಲಿನಮನಿ ಅವರ ಕಥೆಗಳು ಪ್ರಕಟವಾಗಿವೆ.</p>.<p>ಚಿತ್ರದುರ್ಗದಿಂದ ಪಾರ್ಥೀವ ಶರೀರವನ್ನು ಇಲ್ಲಿನ ನವನಗರದ ಮೂರನೇ ಸೆಕ್ಟರ್ ನಲ್ಲಿರುವ ಮನೆಗೆ ರಾತ್ರಿ ತರಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<p>ಅಬ್ಬಾಸ ಮೇಲಿನಮನಿ ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>