<p><strong>ಬಾಗಲಕೋಟೆ</strong>: ಭ್ರೂಣಹತ್ಯೆ ಪ್ರಕರಣಗಳು, ಶಿಶುಗಳ ಮರಣ ಪ್ರಮಾಣ ಹೆಚ್ಚಿರುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ಜಿಲ್ಲೆಯನ್ನು ಕಾಡುತ್ತಿವೆ. ಆಸ್ಪತ್ರೆಗಳು ಸೋರುತ್ತಿವೆ. ವೈದ್ಯರು ಸೇರಿದಂತೆ ಸಿಬ್ಬಂದಿ ಸಮಸ್ಯೆ ಎದುರಿಸುತ್ತಿವೆ. ಈ ಸಮಸ್ಯೆಗಳ ನಡುವೆ ಅಧಿಕಾರಿಗಳ ಕಿತ್ತಾಟ ಬೇರೆ. ಇವೆಲ್ಲಕ್ಕೂ ಚಿಕಿತ್ಸೆ ನೀಡಿ, ಆರೋಗ್ಯ ಇಲಾಖೆ ರಕ್ಷಿಸಬೇಕಿದೆ.</p>.<p>ಜಿಲ್ಲೆಯಲ್ಲಿ ಈಗಾಗಲೇ ಏಳು ಭ್ರೂಣಹತ್ಯೆ ಪ್ರಕರಣಗಳು ದಾಖಲಾಗಿವೆ. ಮಹಾಲಿಂಗಪುರದಲ್ಲಿ ಒಬ್ಬರೇ ಆರೋಪಿ ಮೂರನೇ ಬಾರಿಗೆ ಸಿಕ್ಕಿಬಿದ್ದಿದ್ದಾರೆ. ಎರಡನೇ ಬಾರಿ ಪ್ರಕರಣ ಮರುಕಳಿಸಿದಾಗಲೇ ಎಚ್ಚೆತ್ತುಕೊಳ್ಳಬೇಕಾದ ಇಲಾಖೆ ಗಾಢ ನಿದ್ರೆಯಲ್ಲಿದ್ದರಿಂದಲೇ ಪ್ರಕರಣಗಳು ಮರು ಕಳಿಸುತ್ತಲೇ ಇವೆ.</p>.<p>ಬಹುತೇಕ ಪ್ರಕರಣಗಳಲ್ಲಿ ಸಾವು, ಸಾರ್ವಜನಿಕರು ದೂರು ನೀಡಿದ ನಂತರವಷ್ಟೇ ಪ್ರಕರಣಗಳು ಬೆಳಕಿಗೆ ಬರುತ್ತವೆ. ಹಾಗಾದರೆ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ಅಧಿಕಾರಿಗಳು ಏನು ಮಾಡುತ್ತಿದ್ದರು. ಅವರಿಗೆ ಹೇಗೆ ಗೊತ್ತಾಗಲಿಲ್ಲ ಎಂಬ ಪ್ರಶ್ನೆ ಏಳುತ್ತದೆ.</p>.<p>ಶಿಶುಗಳ ಮರಣ ಪ್ರಮಾಣವೂ ಜಿಲ್ಲೆಯಲ್ಲಿ ಹೆಚ್ಚಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆಯದಿರುವುದು, ಪೌಷ್ಟಿಕ ಆಹಾರದ ಕೊರತೆ ಸೇರಿದಂತೆ ಹಲವು ಕಾರಣಗಳಿವೆ. ಮಾತೃಪೂರ್ಣ ಯೋಜನೆ ಪೂರ್ಣ ಪ್ರಮಾಣದಲ್ಲಿ ಫಲಾನುಭವಿಗಳಿಗೆ ತಲುಪದ್ದರಿಂದ ಗರ್ಭಿಣಿಯರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.</p>.<p>ಒಂದು ಕಾಲದಲ್ಲಿ ಎಚ್ಐವಿ/ಏಡ್ಸ್ ಬಾಧಿತರ ಸಂಖ್ಯೆ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿರುತ್ತಿತ್ತು. ಈಗ ಅದರ ಪ್ರಮಾಣ ಕಡಿಮೆಯಾಗಿದ್ದರೂ, ಹೊಸ ಪ್ರಕರಣಗಳು ವರದಿಯಾಗುತ್ತಲೇ ಇವೆ. ಎಚ್ಐವಿ ಹರಡುವ ಅಕ್ರಮ ತಾಣಗಳಿಗೆ ಪೂರ್ಣ ಪ್ರಮಾಣದಲ್ಲಿ ಬೀಗ ಬೀಳದಿರುವುದೇ ಪ್ರಕರಣಗಳು ವರದಿಯಾಗುತ್ತಿರುವುದಕ್ಕೆ ಕಾರಣ.</p>.<p>ಜಿಲ್ಲೆಯ ಹಲವಾರು ಸರ್ಕಾರಿ ಆಸ್ಪತ್ರೆಗಳು ಮೂಲ ಸೌಲಭ್ಯಗಳ ಕೊರತೆ ಎದುರಿಸುತ್ತಿವೆ. ಸಿಬ್ಬಂದಿ ಸಮಸ್ಯೆ ರಾಜ್ಯಮಟ್ಟದ್ದಾದರೂ, ಇವರು ಸಿಬ್ಬಂದಿಯಲ್ಲಿಯೂ ಹಲವರು ಕೆಲಸ ಸರ್ಕಾರದಲ್ಲಿ, ಸೇವೆ ಖಾಸಗಿ ಆಸ್ಪತ್ರೆಗಳಲ್ಲಿ ಎಂಬ ನೀತಿ ಮುಂದುವರಿಸಿಕೊಂಡು ಬಂದಿದ್ದಾರೆ.</p>.<p>ಬೆಡ್ಗಳ ಕೊರತೆ, ದುರಸ್ತಿಗೊಳ್ಳದ ಯಂತ್ರಗಳು, ಸೋರುವ ಕಟ್ಟಡಗಳು ಸೇರಿದಂತೆ ಹಲವು ಸಮಸ್ಯೆಗಳಿವೆ. ಅವುಗಳಿಗೆ ಪರಿಹಾರ ನೀಡುವ ಕೆಲಸ ಆಗಲಿ ಎಂದು ಜಿಲ್ಲೆಯ ಜನತೆ ಶುಕ್ರವಾರ ಜಿಲ್ಲೆಗೆ ಭೇಟಿ ನೀಡಲಿರುವ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರಿಂದ ನಿರೀಕ್ಷಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಭ್ರೂಣಹತ್ಯೆ ಪ್ರಕರಣಗಳು, ಶಿಶುಗಳ ಮರಣ ಪ್ರಮಾಣ ಹೆಚ್ಚಿರುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ಜಿಲ್ಲೆಯನ್ನು ಕಾಡುತ್ತಿವೆ. ಆಸ್ಪತ್ರೆಗಳು ಸೋರುತ್ತಿವೆ. ವೈದ್ಯರು ಸೇರಿದಂತೆ ಸಿಬ್ಬಂದಿ ಸಮಸ್ಯೆ ಎದುರಿಸುತ್ತಿವೆ. ಈ ಸಮಸ್ಯೆಗಳ ನಡುವೆ ಅಧಿಕಾರಿಗಳ ಕಿತ್ತಾಟ ಬೇರೆ. ಇವೆಲ್ಲಕ್ಕೂ ಚಿಕಿತ್ಸೆ ನೀಡಿ, ಆರೋಗ್ಯ ಇಲಾಖೆ ರಕ್ಷಿಸಬೇಕಿದೆ.</p>.<p>ಜಿಲ್ಲೆಯಲ್ಲಿ ಈಗಾಗಲೇ ಏಳು ಭ್ರೂಣಹತ್ಯೆ ಪ್ರಕರಣಗಳು ದಾಖಲಾಗಿವೆ. ಮಹಾಲಿಂಗಪುರದಲ್ಲಿ ಒಬ್ಬರೇ ಆರೋಪಿ ಮೂರನೇ ಬಾರಿಗೆ ಸಿಕ್ಕಿಬಿದ್ದಿದ್ದಾರೆ. ಎರಡನೇ ಬಾರಿ ಪ್ರಕರಣ ಮರುಕಳಿಸಿದಾಗಲೇ ಎಚ್ಚೆತ್ತುಕೊಳ್ಳಬೇಕಾದ ಇಲಾಖೆ ಗಾಢ ನಿದ್ರೆಯಲ್ಲಿದ್ದರಿಂದಲೇ ಪ್ರಕರಣಗಳು ಮರು ಕಳಿಸುತ್ತಲೇ ಇವೆ.</p>.<p>ಬಹುತೇಕ ಪ್ರಕರಣಗಳಲ್ಲಿ ಸಾವು, ಸಾರ್ವಜನಿಕರು ದೂರು ನೀಡಿದ ನಂತರವಷ್ಟೇ ಪ್ರಕರಣಗಳು ಬೆಳಕಿಗೆ ಬರುತ್ತವೆ. ಹಾಗಾದರೆ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ಅಧಿಕಾರಿಗಳು ಏನು ಮಾಡುತ್ತಿದ್ದರು. ಅವರಿಗೆ ಹೇಗೆ ಗೊತ್ತಾಗಲಿಲ್ಲ ಎಂಬ ಪ್ರಶ್ನೆ ಏಳುತ್ತದೆ.</p>.<p>ಶಿಶುಗಳ ಮರಣ ಪ್ರಮಾಣವೂ ಜಿಲ್ಲೆಯಲ್ಲಿ ಹೆಚ್ಚಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆಯದಿರುವುದು, ಪೌಷ್ಟಿಕ ಆಹಾರದ ಕೊರತೆ ಸೇರಿದಂತೆ ಹಲವು ಕಾರಣಗಳಿವೆ. ಮಾತೃಪೂರ್ಣ ಯೋಜನೆ ಪೂರ್ಣ ಪ್ರಮಾಣದಲ್ಲಿ ಫಲಾನುಭವಿಗಳಿಗೆ ತಲುಪದ್ದರಿಂದ ಗರ್ಭಿಣಿಯರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.</p>.<p>ಒಂದು ಕಾಲದಲ್ಲಿ ಎಚ್ಐವಿ/ಏಡ್ಸ್ ಬಾಧಿತರ ಸಂಖ್ಯೆ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿರುತ್ತಿತ್ತು. ಈಗ ಅದರ ಪ್ರಮಾಣ ಕಡಿಮೆಯಾಗಿದ್ದರೂ, ಹೊಸ ಪ್ರಕರಣಗಳು ವರದಿಯಾಗುತ್ತಲೇ ಇವೆ. ಎಚ್ಐವಿ ಹರಡುವ ಅಕ್ರಮ ತಾಣಗಳಿಗೆ ಪೂರ್ಣ ಪ್ರಮಾಣದಲ್ಲಿ ಬೀಗ ಬೀಳದಿರುವುದೇ ಪ್ರಕರಣಗಳು ವರದಿಯಾಗುತ್ತಿರುವುದಕ್ಕೆ ಕಾರಣ.</p>.<p>ಜಿಲ್ಲೆಯ ಹಲವಾರು ಸರ್ಕಾರಿ ಆಸ್ಪತ್ರೆಗಳು ಮೂಲ ಸೌಲಭ್ಯಗಳ ಕೊರತೆ ಎದುರಿಸುತ್ತಿವೆ. ಸಿಬ್ಬಂದಿ ಸಮಸ್ಯೆ ರಾಜ್ಯಮಟ್ಟದ್ದಾದರೂ, ಇವರು ಸಿಬ್ಬಂದಿಯಲ್ಲಿಯೂ ಹಲವರು ಕೆಲಸ ಸರ್ಕಾರದಲ್ಲಿ, ಸೇವೆ ಖಾಸಗಿ ಆಸ್ಪತ್ರೆಗಳಲ್ಲಿ ಎಂಬ ನೀತಿ ಮುಂದುವರಿಸಿಕೊಂಡು ಬಂದಿದ್ದಾರೆ.</p>.<p>ಬೆಡ್ಗಳ ಕೊರತೆ, ದುರಸ್ತಿಗೊಳ್ಳದ ಯಂತ್ರಗಳು, ಸೋರುವ ಕಟ್ಟಡಗಳು ಸೇರಿದಂತೆ ಹಲವು ಸಮಸ್ಯೆಗಳಿವೆ. ಅವುಗಳಿಗೆ ಪರಿಹಾರ ನೀಡುವ ಕೆಲಸ ಆಗಲಿ ಎಂದು ಜಿಲ್ಲೆಯ ಜನತೆ ಶುಕ್ರವಾರ ಜಿಲ್ಲೆಗೆ ಭೇಟಿ ನೀಡಲಿರುವ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರಿಂದ ನಿರೀಕ್ಷಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>