<p><strong>ಬಾಗಲಕೋಟೆ: </strong>ಮಹಾರಾಷ್ಟ್ರದಿಂದ ರೈಲಿನಲ್ಲಿ ಕರ್ನಾಟಕಕ್ಕೆ ಬಂದು ಬಾಗಲಕೋಟೆ ಹಾಗೂ ಅಕ್ಕಪಕ್ಕದ ಜಿಲ್ಲೆಗಳಲ್ಲಿಅಪರಾಧ ಕೃತ್ಯಗಳ ನಡೆಸುತ್ತಿದ್ದ ಔರಂಗಾಬಾದ್ನ ಕುಖ್ಯಾತ ದರೋಡೆಕೋರರ ತಂಡ ಬಾದಾಮಿ ಪೊಲೀಸರ ಬಲೆಗೆ ಬಿದ್ದಿದೆ.</p>.<p>ಬಾದಾಮಿ–ರಾಮದುರ್ಗ ರಾಜ್ಯ ಹೆದ್ದಾರಿಯಲ್ಲಿರುವಕಾಕನೂರಿನ ಶಾಲೆಯ ಬಳಿ ಇಬ್ಬರು ಬಾಲಾಪರಾಧಿಗಳು ಸೇರಿದಂತೆ ಆರು ಮಂದಿಯ ತಂಡ ತಡರಾತ್ರಿ ದರೋಡೆ ನಡೆಸಲು ಸಿದ್ಧತೆ ನಡೆಸಿತ್ತು ಎನ್ನಲಾಗಿದೆ. ಈ ಬಗ್ಗೆ ತಮಗೆ ದೊರೆತ ಖಚಿತ ಮಾಹಿತಿ ಆಧರಿಸಿ ಸರ್ಕಲ್ ಇನ್ಸ್ಪೆಕ್ಟರ್ ರಮೇಶ ಹಾನಾಪುರ, ಸಬ್ಇನ್ಸ್ಪೆಕ್ಟರ್ ನೇತ್ರಾವತಿ ಪಾಟೀಲ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿತ್ತು.ಈ ಕಾರ್ಯಾಚರಣೆಯಲ್ಲಿ ಗುಳೇದಗುಡ್ಡ ಠಾಣೆ ಪಿಎಸ್ಐ ಕೂಡ ಇದ್ದರು ಎಂದು ತಿಳಿದುಬಂದಿದೆ.</p>.<p><strong>ಗದ್ದನಕೇರಿ ಕ್ರಾಸ್ ಪ್ರಕರಣದಲ್ಲಿ ಭಾಗಿ?:</strong>ಸಮೀಪದ ಗದ್ದನಕೇರಿ ಕ್ರಾಸ್ನಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ದೇವದಾಸ್ ಮನೆಯ ದರೋಡೆಯಲ್ಲಿ ಈ ತಂಡದ ಸದಸ್ಯನೊಬ್ಬ ಭಾಗಿಯಾದ್ದಾನೆ ಎನ್ನಲಾಗಿದೆ. ದರೋಡೆ ವೇಳೆ ದೇವದಾಸ್ ಹಾಗೂ ಅವರ ಪತ್ನಿ ದರೋಡೆಕೋರರಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಅವರು ಈಗಲೂ ತೀವ್ರ ಚಿಕಿತ್ಸಾ ಘಟಕದಲ್ಲಿಯೇ ಇದ್ದಾರೆ.</p>.<p>ಔರಂಗಾಬಾದ್ ಹಾಗೂ ಬೀಡ್ ಜಿಲ್ಲೆಗಳ ಮೂರು ತಂಡಗಳು ಸುಲಿಗೆ, ದರೋಡೆಯನ್ನೇ ವೃತ್ತಿಯಾಗಿಸಿಕೊಂಡಿದ್ದು, ಈ ಭಾಗದಲ್ಲಿ ಸಕ್ರಿಯವಾಗಿವೆ. ಇವರು ಪರಸ್ಪರ ಸಂಪರ್ಕದಲ್ಲಿದ್ದು, ಅಪರಾಧ ಕೃತ್ಯಗಳಲ್ಲಿ ಒಬ್ಬರಿಗೊಬ್ಬರು ನೆರವಾಗುತ್ತಿದ್ದರು. ಗದ್ದನಕೇರಿ ಕ್ರಾಸ್ನಲ್ಲಿ ನಡೆದ ದರೋಡೆ ಕೃತ್ಯದಲ್ಲಿ ಇನ್ನೊಂದು ತಂಡ ಭಾಗಿಯಾಗಿದೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಇದು ತನಿಖೆಯಲ್ಲಿ ಮಹತ್ವದ ಮೈಲುಗಲ್ಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p><strong>ದರೋಡೆಗೆ ಸಿದ್ಧತೆ:</strong>ಕಾಕನೂರು ಬಳಿ ಹೆದ್ದಾರಿಯಲ್ಲಿ ವಾಹನ ಸವಾರರ ದರೋಡೆಗೆ ಸಿದ್ಧತೆ ನಡೆಸಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಆರೋಪಿಗಳ ಬಳಿ ಚಾಕು, ರಾಡು, ಹಗ್ಗ ಸೇರಿದಂತೆ ಮಾರಕಾಸ್ತ್ರಗಳ ವಶಪಡಿಸಿಕೊಂಡಿದ್ದರು.</p>.<p><strong>ವಿಶೇಷ ಗಸ್ತು ತಂಡ ರಚನೆ:</strong>ಗದ್ದನಕೇರಿ ಕ್ರಾಸ್ನಲ್ಲಿ ನಡೆದ ದರೋಡೆ ಹಾಗೂ ಜಿಲ್ಲೆಯ ವಿವಿಧೆಡೆ ಕಳ್ಳತನ ಪ್ರಕರಣಗಳು ಹೆಚ್ಚಾದ ಕಾರಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಮೂರು ವಿಶೇಷ ಗಸ್ತು ತಂಡಗಳ ರಚನೆ ಮಾಡಿದ್ದರು.</p>.<p>ಕೊರೊನಾ ಲಾಕ್ಡೌನ್ ನಂತರ ಏನೂ ಕೆಲಸವಿಲ್ಲದೇ ಈ ತಂಡಗಳು ರಾಜ್ಯದಲ್ಲಿ ದರೋಡೆ, ಕಳ್ಳತನ ಕೃತ್ಯಕ್ಕೆ ಇಳಿದಿದ್ದವು. ವಾಹನಗಳಲ್ಲಿ ಬಂದರೆ ನಾಕಾಬಂದಿಗೆ ಒಳಪಡಬಹುದು. ಪೊಲೀಸರಿಗೆ ಸಿಕ್ಕಿಬೀಳಬಹುದು ಎಂದು ಈ ತಂಡಗಳ ಸದಸ್ಯರು ರೈಲಿನಲ್ಲಿ ಬಂದು ಕೃತ್ಯ ನಡೆಸಿ ತೆರಳುತ್ತಿದ್ದರು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ಮಹಾರಾಷ್ಟ್ರದಿಂದ ರೈಲಿನಲ್ಲಿ ಕರ್ನಾಟಕಕ್ಕೆ ಬಂದು ಬಾಗಲಕೋಟೆ ಹಾಗೂ ಅಕ್ಕಪಕ್ಕದ ಜಿಲ್ಲೆಗಳಲ್ಲಿಅಪರಾಧ ಕೃತ್ಯಗಳ ನಡೆಸುತ್ತಿದ್ದ ಔರಂಗಾಬಾದ್ನ ಕುಖ್ಯಾತ ದರೋಡೆಕೋರರ ತಂಡ ಬಾದಾಮಿ ಪೊಲೀಸರ ಬಲೆಗೆ ಬಿದ್ದಿದೆ.</p>.<p>ಬಾದಾಮಿ–ರಾಮದುರ್ಗ ರಾಜ್ಯ ಹೆದ್ದಾರಿಯಲ್ಲಿರುವಕಾಕನೂರಿನ ಶಾಲೆಯ ಬಳಿ ಇಬ್ಬರು ಬಾಲಾಪರಾಧಿಗಳು ಸೇರಿದಂತೆ ಆರು ಮಂದಿಯ ತಂಡ ತಡರಾತ್ರಿ ದರೋಡೆ ನಡೆಸಲು ಸಿದ್ಧತೆ ನಡೆಸಿತ್ತು ಎನ್ನಲಾಗಿದೆ. ಈ ಬಗ್ಗೆ ತಮಗೆ ದೊರೆತ ಖಚಿತ ಮಾಹಿತಿ ಆಧರಿಸಿ ಸರ್ಕಲ್ ಇನ್ಸ್ಪೆಕ್ಟರ್ ರಮೇಶ ಹಾನಾಪುರ, ಸಬ್ಇನ್ಸ್ಪೆಕ್ಟರ್ ನೇತ್ರಾವತಿ ಪಾಟೀಲ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿತ್ತು.ಈ ಕಾರ್ಯಾಚರಣೆಯಲ್ಲಿ ಗುಳೇದಗುಡ್ಡ ಠಾಣೆ ಪಿಎಸ್ಐ ಕೂಡ ಇದ್ದರು ಎಂದು ತಿಳಿದುಬಂದಿದೆ.</p>.<p><strong>ಗದ್ದನಕೇರಿ ಕ್ರಾಸ್ ಪ್ರಕರಣದಲ್ಲಿ ಭಾಗಿ?:</strong>ಸಮೀಪದ ಗದ್ದನಕೇರಿ ಕ್ರಾಸ್ನಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ದೇವದಾಸ್ ಮನೆಯ ದರೋಡೆಯಲ್ಲಿ ಈ ತಂಡದ ಸದಸ್ಯನೊಬ್ಬ ಭಾಗಿಯಾದ್ದಾನೆ ಎನ್ನಲಾಗಿದೆ. ದರೋಡೆ ವೇಳೆ ದೇವದಾಸ್ ಹಾಗೂ ಅವರ ಪತ್ನಿ ದರೋಡೆಕೋರರಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಅವರು ಈಗಲೂ ತೀವ್ರ ಚಿಕಿತ್ಸಾ ಘಟಕದಲ್ಲಿಯೇ ಇದ್ದಾರೆ.</p>.<p>ಔರಂಗಾಬಾದ್ ಹಾಗೂ ಬೀಡ್ ಜಿಲ್ಲೆಗಳ ಮೂರು ತಂಡಗಳು ಸುಲಿಗೆ, ದರೋಡೆಯನ್ನೇ ವೃತ್ತಿಯಾಗಿಸಿಕೊಂಡಿದ್ದು, ಈ ಭಾಗದಲ್ಲಿ ಸಕ್ರಿಯವಾಗಿವೆ. ಇವರು ಪರಸ್ಪರ ಸಂಪರ್ಕದಲ್ಲಿದ್ದು, ಅಪರಾಧ ಕೃತ್ಯಗಳಲ್ಲಿ ಒಬ್ಬರಿಗೊಬ್ಬರು ನೆರವಾಗುತ್ತಿದ್ದರು. ಗದ್ದನಕೇರಿ ಕ್ರಾಸ್ನಲ್ಲಿ ನಡೆದ ದರೋಡೆ ಕೃತ್ಯದಲ್ಲಿ ಇನ್ನೊಂದು ತಂಡ ಭಾಗಿಯಾಗಿದೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಇದು ತನಿಖೆಯಲ್ಲಿ ಮಹತ್ವದ ಮೈಲುಗಲ್ಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p><strong>ದರೋಡೆಗೆ ಸಿದ್ಧತೆ:</strong>ಕಾಕನೂರು ಬಳಿ ಹೆದ್ದಾರಿಯಲ್ಲಿ ವಾಹನ ಸವಾರರ ದರೋಡೆಗೆ ಸಿದ್ಧತೆ ನಡೆಸಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಆರೋಪಿಗಳ ಬಳಿ ಚಾಕು, ರಾಡು, ಹಗ್ಗ ಸೇರಿದಂತೆ ಮಾರಕಾಸ್ತ್ರಗಳ ವಶಪಡಿಸಿಕೊಂಡಿದ್ದರು.</p>.<p><strong>ವಿಶೇಷ ಗಸ್ತು ತಂಡ ರಚನೆ:</strong>ಗದ್ದನಕೇರಿ ಕ್ರಾಸ್ನಲ್ಲಿ ನಡೆದ ದರೋಡೆ ಹಾಗೂ ಜಿಲ್ಲೆಯ ವಿವಿಧೆಡೆ ಕಳ್ಳತನ ಪ್ರಕರಣಗಳು ಹೆಚ್ಚಾದ ಕಾರಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಮೂರು ವಿಶೇಷ ಗಸ್ತು ತಂಡಗಳ ರಚನೆ ಮಾಡಿದ್ದರು.</p>.<p>ಕೊರೊನಾ ಲಾಕ್ಡೌನ್ ನಂತರ ಏನೂ ಕೆಲಸವಿಲ್ಲದೇ ಈ ತಂಡಗಳು ರಾಜ್ಯದಲ್ಲಿ ದರೋಡೆ, ಕಳ್ಳತನ ಕೃತ್ಯಕ್ಕೆ ಇಳಿದಿದ್ದವು. ವಾಹನಗಳಲ್ಲಿ ಬಂದರೆ ನಾಕಾಬಂದಿಗೆ ಒಳಪಡಬಹುದು. ಪೊಲೀಸರಿಗೆ ಸಿಕ್ಕಿಬೀಳಬಹುದು ಎಂದು ಈ ತಂಡಗಳ ಸದಸ್ಯರು ರೈಲಿನಲ್ಲಿ ಬಂದು ಕೃತ್ಯ ನಡೆಸಿ ತೆರಳುತ್ತಿದ್ದರು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>