<p><strong>ಬಾಗಲಕೋಟೆ:</strong> ‘ಪರಿಶ್ರಮ ಮತ್ತು ನಿರಂತರ ಅಭ್ಯಾಸದಿಂದ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಬಾಗಲಕೋಟೆ ವಿಶ್ವವಿದ್ಯಾಲಯದ ಹಾಕಿ ಮತ್ತು ಕ್ರಿಕೆಟ್ ತಂಡಕ್ಕೆ ತಲಾ ಇಬ್ಬರು ಆಯ್ಕೆಯಾಗಿದ್ದು, ವಿಶ್ವವಿದ್ಯಾಲಯದ ಬ್ಲೂ ಆಗಿದ್ದಾರೆ’ ಎಂದು ಪ್ರಾಚಾರ್ಯ ಅರುಣಕುಮಾರ ಗಾಳಿ ಹೇಳಿದರು.</p>.<p>ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ವಿಭಾಗದ ಆಶ್ರಯದಲ್ಲಿ ಶುಕ್ರವಾರ ಕಾಲೇಜಿನ ಆವರಣದಲ್ಲಿ ಕಾಲೇಜಿನ ಕ್ರೀಡಾಪಟುಗಳಾದ ವಿಶಾಲ ಲಮಾಣಿ, ಯಶವಂತ ನಾಯಕ (ಹಾಕಿ), ಭೂಪತಿ ಲಮಾಣಿ, ನಾಗರಾಜ ಲಕ್ಕುಂಡಿ (ಕ್ರಿಕೆಟ್) ಅವರಿಗೆ ಸನ್ಮಾನಿಸಿ ಅವರು ಮಾತನಾಡಿದರು.</p>.<p>ವಿಶ್ವವಿದ್ಯಾಲಯ ಮಟ್ಟದ ಕ್ರೀಡೆಯಲ್ಲಿ ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ಮೂಲಕ ಕಾಲೇಜಿನ ಕೀರ್ತಿ ಬೆಳಗಿಸಿದ್ದಾರೆ. ವಿದ್ಯಾರ್ಥಿಗಳು ಕ್ರೀಡಾ ಮನೋಭಾವದೊಂದಿಗೆ ಆದರ್ಶ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.</p>.<p>ಕ್ರೀಡಾ ವಿಭಾಗದ ನಿರ್ದೇಶಕ ನೀಲಪ್ಪ ಕುರಿ ಮಾತನಾಡಿ, ಪದವಿ ಕಲಿಯುವ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿರುವ ಸಾಕಷ್ಟು ಅವಕಾಶ ಬಳಸಿಕೊಂಡು ಸಾಧಕರಾಗಬೇಕು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ‘ಪರಿಶ್ರಮ ಮತ್ತು ನಿರಂತರ ಅಭ್ಯಾಸದಿಂದ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಬಾಗಲಕೋಟೆ ವಿಶ್ವವಿದ್ಯಾಲಯದ ಹಾಕಿ ಮತ್ತು ಕ್ರಿಕೆಟ್ ತಂಡಕ್ಕೆ ತಲಾ ಇಬ್ಬರು ಆಯ್ಕೆಯಾಗಿದ್ದು, ವಿಶ್ವವಿದ್ಯಾಲಯದ ಬ್ಲೂ ಆಗಿದ್ದಾರೆ’ ಎಂದು ಪ್ರಾಚಾರ್ಯ ಅರುಣಕುಮಾರ ಗಾಳಿ ಹೇಳಿದರು.</p>.<p>ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ವಿಭಾಗದ ಆಶ್ರಯದಲ್ಲಿ ಶುಕ್ರವಾರ ಕಾಲೇಜಿನ ಆವರಣದಲ್ಲಿ ಕಾಲೇಜಿನ ಕ್ರೀಡಾಪಟುಗಳಾದ ವಿಶಾಲ ಲಮಾಣಿ, ಯಶವಂತ ನಾಯಕ (ಹಾಕಿ), ಭೂಪತಿ ಲಮಾಣಿ, ನಾಗರಾಜ ಲಕ್ಕುಂಡಿ (ಕ್ರಿಕೆಟ್) ಅವರಿಗೆ ಸನ್ಮಾನಿಸಿ ಅವರು ಮಾತನಾಡಿದರು.</p>.<p>ವಿಶ್ವವಿದ್ಯಾಲಯ ಮಟ್ಟದ ಕ್ರೀಡೆಯಲ್ಲಿ ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ಮೂಲಕ ಕಾಲೇಜಿನ ಕೀರ್ತಿ ಬೆಳಗಿಸಿದ್ದಾರೆ. ವಿದ್ಯಾರ್ಥಿಗಳು ಕ್ರೀಡಾ ಮನೋಭಾವದೊಂದಿಗೆ ಆದರ್ಶ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.</p>.<p>ಕ್ರೀಡಾ ವಿಭಾಗದ ನಿರ್ದೇಶಕ ನೀಲಪ್ಪ ಕುರಿ ಮಾತನಾಡಿ, ಪದವಿ ಕಲಿಯುವ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿರುವ ಸಾಕಷ್ಟು ಅವಕಾಶ ಬಳಸಿಕೊಂಡು ಸಾಧಕರಾಗಬೇಕು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>