<p><strong>ಬಾಗಲಕೋಟೆ</strong>: ಇಳಕಲ್ ವಿಜಯ ಮಹಾಂತೇಶ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ, ಬಾಹ್ಯಾಕಾಶ ವಿಜ್ಞಾನಿ ಎಸ್. ನಂಬಿ ನಾರಾಯಣನ್, ಉದ್ಯಮಿ ಮಹೇಶ ಬೆಲ್ಲದ ಅವರಿಗೆ ಜಮಖಂಡಿಯಲ್ಲಿರುವ ಬಾಗಲಕೋಟ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ಗೆ ಆಯ್ಕೆ ಮಾಡಲಾಗಿದೆ.</p><p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಆನಂದ ದೇಶಪಾಂಡೆ, ಗುರುಮಹಾಂತ ಸ್ವಾಮೀಜಿ ಅವರು ದಾರ್ಶನಿಕರಾಗಿ ವ್ಯಸನ ಮುಕ್ತ ಸಮಾಜ, ಸಾಮಾಜಿಕ ಸುಧಾರಣೆಗಳಿಗೆ ಮಾಡಿರುವ ಕಾರ್ಯ ಗುರುತಿಸಿ, ಎಸ್. ನಂಬಿ ನಾರಾಯಣನ್ ಅವರಿಗೆ</p><p>ಭಾರತೀಯ ಬಾಹ್ಯಾಕಾಶಕ್ಕೆ ನೀಡಿದ ಕೊಡುಗೆಗಾಗಿ ನೀಡಲಾಗುತ್ತಿದೆ ಎಂದರು.</p><p>ಮಹೇಶ ಬೆಲ್ಲದ ಅವರಿಗೆ ಟೆಕ್ ಉದ್ಯಮ, ಸಾಮಾಜಿಕ ಸೇವೆ, ಗುಣಮಟ್ಟದ ಶಿಕ್ಷಣಕ್ಕೆ ನೀಡಿದ ಕೊಡುಗೆ ಗುರುತಿಸಿ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾದೆ ಎಂದರು.</p><p>ಏ.24 ರಂದು ಬೆಳಿಗ್ಗೆ 11.30ಕ್ಕೆ ಬಿಎಲ್ಡಿಇ ದರ್ಬಾರ್ ಹಾಲ್ನಲ್ಲಿ ನಡೆಯುವ ಒಂದನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಇಳಕಲ್ ವಿಜಯ ಮಹಾಂತೇಶ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ, ಬಾಹ್ಯಾಕಾಶ ವಿಜ್ಞಾನಿ ಎಸ್. ನಂಬಿ ನಾರಾಯಣನ್, ಉದ್ಯಮಿ ಮಹೇಶ ಬೆಲ್ಲದ ಅವರಿಗೆ ಜಮಖಂಡಿಯಲ್ಲಿರುವ ಬಾಗಲಕೋಟ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ಗೆ ಆಯ್ಕೆ ಮಾಡಲಾಗಿದೆ.</p><p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಆನಂದ ದೇಶಪಾಂಡೆ, ಗುರುಮಹಾಂತ ಸ್ವಾಮೀಜಿ ಅವರು ದಾರ್ಶನಿಕರಾಗಿ ವ್ಯಸನ ಮುಕ್ತ ಸಮಾಜ, ಸಾಮಾಜಿಕ ಸುಧಾರಣೆಗಳಿಗೆ ಮಾಡಿರುವ ಕಾರ್ಯ ಗುರುತಿಸಿ, ಎಸ್. ನಂಬಿ ನಾರಾಯಣನ್ ಅವರಿಗೆ</p><p>ಭಾರತೀಯ ಬಾಹ್ಯಾಕಾಶಕ್ಕೆ ನೀಡಿದ ಕೊಡುಗೆಗಾಗಿ ನೀಡಲಾಗುತ್ತಿದೆ ಎಂದರು.</p><p>ಮಹೇಶ ಬೆಲ್ಲದ ಅವರಿಗೆ ಟೆಕ್ ಉದ್ಯಮ, ಸಾಮಾಜಿಕ ಸೇವೆ, ಗುಣಮಟ್ಟದ ಶಿಕ್ಷಣಕ್ಕೆ ನೀಡಿದ ಕೊಡುಗೆ ಗುರುತಿಸಿ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾದೆ ಎಂದರು.</p><p>ಏ.24 ರಂದು ಬೆಳಿಗ್ಗೆ 11.30ಕ್ಕೆ ಬಿಎಲ್ಡಿಇ ದರ್ಬಾರ್ ಹಾಲ್ನಲ್ಲಿ ನಡೆಯುವ ಒಂದನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>