<p><strong>ಬಾಗಲಕೋಟೆ:</strong> ಮದ್ಯ ಕುಡಿದರೆ ಜೀವನ ಸಾಗಿಸುವುದು ತೊಂದರೆಯಾಗುತ್ತದೆ ಎಂದು ಬುದ್ದಿವಾದ ಹೇಳಿದ ಪತ್ನಿಯನ್ನು ಕೊಲೆ ಮಾಡಿದ ಅಪರಾಧಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎನ್.ವಿ. ವಿಜಯ್, ಜೀವಾವಧಿ ಶಿಕ್ಷೆ, ದಂಡ ವಿಧಿಸಿ ತೀರ್ಪು ನೀಡಿದ್ದಾರೆ.</p>.<p>ಬೀಳಗಿ ತಾಲ್ಲೂಕಿನ ಬೂದಿಹಾಳ ಗ್ರಾಮದ ಮಲ್ಲಪ್ಪ ಹೆರಕಲ್ ಶಿಕ್ಷೆಗೆ ಒಳಗಾದ ವ್ಯಕ್ತಿ.</p>.<p>ಮಲ್ಲಪ್ಪ ದಿನಾಲು ಕುಡಿದು ಬರುತ್ತಿದ್ದ. ಮಲ್ಲಪ್ಪನಿಗೆ ಆತನ ಪತ್ನಿ ಪಾರ್ವತಿ, ‘ಸಣ್ಣ ಸಣ್ಣ ಮಕ್ಕಳಿವೆ. ನಿತ್ಯ ಕುಡಿದರೆ ಜೀವನ ಸಾಗಿಸುವುದು ಕಷ್ಟವಾಗುತ್ತದೆ’ ಎಂದು ಬುದ್ಧಿವಾದ ಹೇಳಿದ್ದರು.</p>.<p>ಪತ್ನಿಗೆ ಚಿತ್ರ ಹಿಂಸೆ ಮಾಡಿ ಕೊಡಲಿಯಿಂದ ಹೊಡದು ಕೊಲೆ ಮಾಡಿದ್ದಾನೆ. ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ಇನ್ಸ್ಪೆಕ್ಟರ್ ಶಿವಾನಂದ ಕಮತಗಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.</p>.<p>ವಿಚಾರಣೆ ನಡೆಸಿದ ನ್ಯಾಯಾಧೀಶರು ಮಲ್ಲಪ್ಪನಿಗೆ ಜೀವಾವಧಿ ಶಿಕ್ಷೆ, ₹5 ಸಾವಿರ ದಂಡ ವಿಧಿಸಿದ್ದಾರೆ. ನೋಂದವರಿಗೆ ₹4 ಲಕ್ಷ ಪರಿಹಾರ ನೀಡುವಂತೆ ಆದೇಶಿಸಲಾಗಿದೆ. ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕ ವಿ.ಜಿ.ಹೆಬಸೂರ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಮದ್ಯ ಕುಡಿದರೆ ಜೀವನ ಸಾಗಿಸುವುದು ತೊಂದರೆಯಾಗುತ್ತದೆ ಎಂದು ಬುದ್ದಿವಾದ ಹೇಳಿದ ಪತ್ನಿಯನ್ನು ಕೊಲೆ ಮಾಡಿದ ಅಪರಾಧಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎನ್.ವಿ. ವಿಜಯ್, ಜೀವಾವಧಿ ಶಿಕ್ಷೆ, ದಂಡ ವಿಧಿಸಿ ತೀರ್ಪು ನೀಡಿದ್ದಾರೆ.</p>.<p>ಬೀಳಗಿ ತಾಲ್ಲೂಕಿನ ಬೂದಿಹಾಳ ಗ್ರಾಮದ ಮಲ್ಲಪ್ಪ ಹೆರಕಲ್ ಶಿಕ್ಷೆಗೆ ಒಳಗಾದ ವ್ಯಕ್ತಿ.</p>.<p>ಮಲ್ಲಪ್ಪ ದಿನಾಲು ಕುಡಿದು ಬರುತ್ತಿದ್ದ. ಮಲ್ಲಪ್ಪನಿಗೆ ಆತನ ಪತ್ನಿ ಪಾರ್ವತಿ, ‘ಸಣ್ಣ ಸಣ್ಣ ಮಕ್ಕಳಿವೆ. ನಿತ್ಯ ಕುಡಿದರೆ ಜೀವನ ಸಾಗಿಸುವುದು ಕಷ್ಟವಾಗುತ್ತದೆ’ ಎಂದು ಬುದ್ಧಿವಾದ ಹೇಳಿದ್ದರು.</p>.<p>ಪತ್ನಿಗೆ ಚಿತ್ರ ಹಿಂಸೆ ಮಾಡಿ ಕೊಡಲಿಯಿಂದ ಹೊಡದು ಕೊಲೆ ಮಾಡಿದ್ದಾನೆ. ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ಇನ್ಸ್ಪೆಕ್ಟರ್ ಶಿವಾನಂದ ಕಮತಗಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.</p>.<p>ವಿಚಾರಣೆ ನಡೆಸಿದ ನ್ಯಾಯಾಧೀಶರು ಮಲ್ಲಪ್ಪನಿಗೆ ಜೀವಾವಧಿ ಶಿಕ್ಷೆ, ₹5 ಸಾವಿರ ದಂಡ ವಿಧಿಸಿದ್ದಾರೆ. ನೋಂದವರಿಗೆ ₹4 ಲಕ್ಷ ಪರಿಹಾರ ನೀಡುವಂತೆ ಆದೇಶಿಸಲಾಗಿದೆ. ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕ ವಿ.ಜಿ.ಹೆಬಸೂರ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>