<p>ಬಾಗಲಕೋಟೆ: ‘ಬೆಲೆ ಏರಿಕೆ ಮೂಲಕ ಜನರ ಜೇಬಿಗೆ ಕತ್ತರಿ ಹಾಕುತ್ತಿರುವ ಬಿಜೆಪಿಯ ಜೇಬುಗಳ್ಳರ ಬಗ್ಗೆ ಜನ ಎಚ್ಚರದಿಂದ ಇರಬೇಕು’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ಸಿಂಗ್ ಸುರ್ಜೆವಾಲಾ ಹೇಳಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು, ‘ಮೂರ್ಖರ ದಿನ ನಮ್ಮ ಸಂಸ್ಕೃತಿ ಅಲ್ಲದಿದ್ದರೂ ಮೋದಿ ಸರ್ಕಾರ ಏ.1ರಿಂದ ಜನರನ್ನು ಮೂರ್ಖರಾಗಿಸುವ ಕೆಲಸಕ್ಕೆ ಕೈ ಹಾಕಿದೆ’ ಎಂದು ಆರೋಪಿಸಿದರು.</p>.<p>‘ವಾಣಿಜ್ಯ ಬಳಕೆ ಸಿಲಿಂಡರ್ ದರ ₹200 ಹೆಚ್ಚಿಸಲಾಗಿದೆ. ಪೆಟ್ರೋಲ್, ಡೀಸೆಲ್ನ ಬೆಲೆ ಏರುತ್ತಲೇ ಇದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ತೆರಿಗೆ ಹೆಚ್ಚಿಸಲಾಗಿದೆ. ಐದು ವರ್ಷಗಳಲ್ಲಿ ಕರ್ನಾಟಕ ಒಂದರಿಂದಲೇ ₹43 ಸಾವಿರ ಕೋಟಿ ಟೋಲ್ ತೆರಿಗೆ ಸಂಗ್ರಹ ಆಗಿದೆ ಎಂದು ಹೇಳಿದರು.</p>.<p>‘ಬಾಗಲಕೋಟೆ, ದಾವಣಗೆರೆಯ ಚುನಾವಣೆ ಎರಡು ಸಿದ್ಧಾಂತಗಳ ಮೇಲೆ ನಡೆದಿದೆ. ಕಾಂಗ್ರೆಸ್ನ ಮಾರ್ಗ ಅಭಿವೃದ್ಧಿ, ಜನಕಲ್ಯಾಣ, ಜನಶಕ್ತಿಯದಾದರೆ, ಬಿಜೆಪಿಯದ್ದು ದ್ವೇಷ, ವಿಘಟನೆ, ವಿನಾಶದಿಂದ ಕೂಡಿದೆ. ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರ ಬದುಕಿಗೆ ಶಕ್ತಿ ಬಂದಿದೆ’ ಎಂದರು.</p>.<p>‘ಸಿ.ಎಂ ಸಿದ್ದರಾಮಯ್ಯ ಸೂಟ್ಕೇಸ್ನೊಂದಿಗೆ ಬಾಗಲಕೋಟೆಗೆ ಬಂದಿದ್ದಾರೆ’ ಎಂಬ ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ವಿಜಯೇಂದ್ರ ಅವರು ಮೊದಲು ಯತ್ನಾಳ ವಿಷಯದ ಕಡೆಗೆ ಗಮನಹರಿಸಲಿ’ ಎಂದು ವ್ಯಂಗ್ಯವಾಡಿದರು.</p>.<p>ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮಾತನಾಡಿ, ‘15ನೇ ಹಣಸಕಾಸು ಆಯೋಗದ ಶಿಫಾರಸಿನ ಮೇರೆಗೆ ರಾಜ್ಯಕ್ಕೆ ಕೊಡಬೇಕಿದ್ದ ₹ 15,583 ಕೋಟಿಯನ್ನು ಕೇಂದ್ರ ಸರ್ಕಾರ ನೀಡಿಲ್ಲ. ರಾಜ್ಯಕ್ಕೆ ಅನ್ಯಾಯ ಮಾಡುತ್ತಲೇ ಬರುತ್ತಿದೆ. ಇದಕ್ಕೆ ಬಿಜೆಪಿಯವರು ಉತ್ತರಿಸಬೇಕು’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-19-2082209586</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ‘ಬೆಲೆ ಏರಿಕೆ ಮೂಲಕ ಜನರ ಜೇಬಿಗೆ ಕತ್ತರಿ ಹಾಕುತ್ತಿರುವ ಬಿಜೆಪಿಯ ಜೇಬುಗಳ್ಳರ ಬಗ್ಗೆ ಜನ ಎಚ್ಚರದಿಂದ ಇರಬೇಕು’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ಸಿಂಗ್ ಸುರ್ಜೆವಾಲಾ ಹೇಳಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು, ‘ಮೂರ್ಖರ ದಿನ ನಮ್ಮ ಸಂಸ್ಕೃತಿ ಅಲ್ಲದಿದ್ದರೂ ಮೋದಿ ಸರ್ಕಾರ ಏ.1ರಿಂದ ಜನರನ್ನು ಮೂರ್ಖರಾಗಿಸುವ ಕೆಲಸಕ್ಕೆ ಕೈ ಹಾಕಿದೆ’ ಎಂದು ಆರೋಪಿಸಿದರು.</p>.<p>‘ವಾಣಿಜ್ಯ ಬಳಕೆ ಸಿಲಿಂಡರ್ ದರ ₹200 ಹೆಚ್ಚಿಸಲಾಗಿದೆ. ಪೆಟ್ರೋಲ್, ಡೀಸೆಲ್ನ ಬೆಲೆ ಏರುತ್ತಲೇ ಇದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ತೆರಿಗೆ ಹೆಚ್ಚಿಸಲಾಗಿದೆ. ಐದು ವರ್ಷಗಳಲ್ಲಿ ಕರ್ನಾಟಕ ಒಂದರಿಂದಲೇ ₹43 ಸಾವಿರ ಕೋಟಿ ಟೋಲ್ ತೆರಿಗೆ ಸಂಗ್ರಹ ಆಗಿದೆ ಎಂದು ಹೇಳಿದರು.</p>.<p>‘ಬಾಗಲಕೋಟೆ, ದಾವಣಗೆರೆಯ ಚುನಾವಣೆ ಎರಡು ಸಿದ್ಧಾಂತಗಳ ಮೇಲೆ ನಡೆದಿದೆ. ಕಾಂಗ್ರೆಸ್ನ ಮಾರ್ಗ ಅಭಿವೃದ್ಧಿ, ಜನಕಲ್ಯಾಣ, ಜನಶಕ್ತಿಯದಾದರೆ, ಬಿಜೆಪಿಯದ್ದು ದ್ವೇಷ, ವಿಘಟನೆ, ವಿನಾಶದಿಂದ ಕೂಡಿದೆ. ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರ ಬದುಕಿಗೆ ಶಕ್ತಿ ಬಂದಿದೆ’ ಎಂದರು.</p>.<p>‘ಸಿ.ಎಂ ಸಿದ್ದರಾಮಯ್ಯ ಸೂಟ್ಕೇಸ್ನೊಂದಿಗೆ ಬಾಗಲಕೋಟೆಗೆ ಬಂದಿದ್ದಾರೆ’ ಎಂಬ ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ವಿಜಯೇಂದ್ರ ಅವರು ಮೊದಲು ಯತ್ನಾಳ ವಿಷಯದ ಕಡೆಗೆ ಗಮನಹರಿಸಲಿ’ ಎಂದು ವ್ಯಂಗ್ಯವಾಡಿದರು.</p>.<p>ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮಾತನಾಡಿ, ‘15ನೇ ಹಣಸಕಾಸು ಆಯೋಗದ ಶಿಫಾರಸಿನ ಮೇರೆಗೆ ರಾಜ್ಯಕ್ಕೆ ಕೊಡಬೇಕಿದ್ದ ₹ 15,583 ಕೋಟಿಯನ್ನು ಕೇಂದ್ರ ಸರ್ಕಾರ ನೀಡಿಲ್ಲ. ರಾಜ್ಯಕ್ಕೆ ಅನ್ಯಾಯ ಮಾಡುತ್ತಲೇ ಬರುತ್ತಿದೆ. ಇದಕ್ಕೆ ಬಿಜೆಪಿಯವರು ಉತ್ತರಿಸಬೇಕು’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-19-2082209586</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>