<p>ಬಾಗಲಕೋಟೆ: ರಕ್ತದಾನ ಮಾಡುವುದರಿಂದ ಆರೋಗ್ಯ ಮತ್ತಷ್ಟು ಉತ್ತಮವಾಗುತ್ತದೆ ಎಂದು ಬಿವಿವಿಎಸ್ ಆಯುಷ್ ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಸಾಸನೂರ ಹೇಳಿದರು.</p>.<p>ಬಿವಿವಿಎಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನಲ್ಲಿ ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಅವರ ಜನ್ಮ ದಿನ ಅಂಗವಾಗಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟನೆ ಮಾಡಿ ಮಾತನಾಡಿದರು.</p>.<p>ದಾನಗಳಲ್ಲಿ ಶ್ರೇಷ್ಠ ದಾನ ಎಂದರೆ ರಕ್ತದಾನ. ರಕ್ತದಾನಕ್ಕೆ ಯಾರೂ ಬೆಲೆ ಕಟ್ಟಲು ಸಾಧ್ಯವಿಲ್ಲ. ರಕ್ತದಾನ ಮಾಡಿದರೆ ಮಾಡಿದವರಿಗೂ ಆರೋಗ್ಯದ ಹಲವು ಲಾಭಗಳು ದೊರೆಯುತ್ತವೆ. ಕೆಲವು ಸಂದರ್ಭದಲ್ಲಿ ಹಣ ಕೊಟ್ಟರೂ ನಮಗೆ ಬೇಕಾದ ರಕ್ತ ಸಿಗುವುದಿಲ್ಲ. ರಕ್ತ ನೀಡಿ ಜೀವ ಉಳಿಸಿ ಎಂದರು.</p>.<p>ಹಾನಗಲ್ ಕುಮಾರೇಶ್ವರ ರಕ್ತ ಭಂಡಾರದ ಮುಖ್ಯ ವೈದ್ಯಾಧಿಕಾರಿ ಡಾ.ಕೇಶವ ಕುಲಕರ್ಣಿ ಮಾತನಾಡಿ, ಮಾನವ ದೇಹದ ಎಲ್ಲ ಭಾಗಗಳನ್ನು ಕೃತಕವಾಗಿ ನಿರ್ಮಿಸಬಹುದು. ಆದರೆ, ರಕ್ತವನ್ನು ಕೃತಕವಾಗಿ ನಿರ್ಮಿಸಲು ಸಾಧ್ಯವಾಗಿಲ್ಲ. ಯುವ ಜನತೆ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಮುಂದೆ ಬರಬೇಕು ಎಂದು ಹೇಳಿದರು..</p>.<p>ಪ್ರಾಚಾರ್ಯ ಡಾ.ಅರುಣ ಹೂಲಿ ಮಾತನಾಡಿದರು. ಡಾ.ರವಿ.ಕೋಟೆಣ್ಣವರ, ಡಾ.ಅಖಿಲಾ ಹುಲ್ಲೂರ., ಫಾತಿಮಾ ಬಾಲಸಿಂಗ, ಡಾ.ಕೆ.ಪ್ರದೀಪ, ಡಾ.ಸುಧೀರ ಬೆಟಗೇರಿ, ಡಾ.ವಿಜಯಲಕ್ಷ್ಮಿ ಪೂಜಾರ ಮತ್ತಿತರರು ಇದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-19-1913732952</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ರಕ್ತದಾನ ಮಾಡುವುದರಿಂದ ಆರೋಗ್ಯ ಮತ್ತಷ್ಟು ಉತ್ತಮವಾಗುತ್ತದೆ ಎಂದು ಬಿವಿವಿಎಸ್ ಆಯುಷ್ ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಸಾಸನೂರ ಹೇಳಿದರು.</p>.<p>ಬಿವಿವಿಎಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನಲ್ಲಿ ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಅವರ ಜನ್ಮ ದಿನ ಅಂಗವಾಗಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟನೆ ಮಾಡಿ ಮಾತನಾಡಿದರು.</p>.<p>ದಾನಗಳಲ್ಲಿ ಶ್ರೇಷ್ಠ ದಾನ ಎಂದರೆ ರಕ್ತದಾನ. ರಕ್ತದಾನಕ್ಕೆ ಯಾರೂ ಬೆಲೆ ಕಟ್ಟಲು ಸಾಧ್ಯವಿಲ್ಲ. ರಕ್ತದಾನ ಮಾಡಿದರೆ ಮಾಡಿದವರಿಗೂ ಆರೋಗ್ಯದ ಹಲವು ಲಾಭಗಳು ದೊರೆಯುತ್ತವೆ. ಕೆಲವು ಸಂದರ್ಭದಲ್ಲಿ ಹಣ ಕೊಟ್ಟರೂ ನಮಗೆ ಬೇಕಾದ ರಕ್ತ ಸಿಗುವುದಿಲ್ಲ. ರಕ್ತ ನೀಡಿ ಜೀವ ಉಳಿಸಿ ಎಂದರು.</p>.<p>ಹಾನಗಲ್ ಕುಮಾರೇಶ್ವರ ರಕ್ತ ಭಂಡಾರದ ಮುಖ್ಯ ವೈದ್ಯಾಧಿಕಾರಿ ಡಾ.ಕೇಶವ ಕುಲಕರ್ಣಿ ಮಾತನಾಡಿ, ಮಾನವ ದೇಹದ ಎಲ್ಲ ಭಾಗಗಳನ್ನು ಕೃತಕವಾಗಿ ನಿರ್ಮಿಸಬಹುದು. ಆದರೆ, ರಕ್ತವನ್ನು ಕೃತಕವಾಗಿ ನಿರ್ಮಿಸಲು ಸಾಧ್ಯವಾಗಿಲ್ಲ. ಯುವ ಜನತೆ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಮುಂದೆ ಬರಬೇಕು ಎಂದು ಹೇಳಿದರು..</p>.<p>ಪ್ರಾಚಾರ್ಯ ಡಾ.ಅರುಣ ಹೂಲಿ ಮಾತನಾಡಿದರು. ಡಾ.ರವಿ.ಕೋಟೆಣ್ಣವರ, ಡಾ.ಅಖಿಲಾ ಹುಲ್ಲೂರ., ಫಾತಿಮಾ ಬಾಲಸಿಂಗ, ಡಾ.ಕೆ.ಪ್ರದೀಪ, ಡಾ.ಸುಧೀರ ಬೆಟಗೇರಿ, ಡಾ.ವಿಜಯಲಕ್ಷ್ಮಿ ಪೂಜಾರ ಮತ್ತಿತರರು ಇದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-19-1913732952</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>