<p><strong>ಬಾಗಲಕೋಟೆ:</strong> ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಕಣವು ಬಿಸಿಲಿನ ಪ್ರಖರತೆ ಜೊತೆಗೆ ಪ್ರಚಾರದ ತಾಪವೂ ಹೆಚ್ಚಾಗುತ್ತಿದೆ. ಸವಾಲು, ಪ್ರತಿ ಸವಾಲು ಹಾಕುತ್ತಿರುವುದರಿಂದ ನಾಯಕರ ನಡುವಿನ ವಾಗ್ವಾದವೂ ಬಿಸಿ ಏರಿದೆ.</p>.<p>ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಬಿರುಸಿನ ಪ್ರಚಾರ ನಡೆಸಿದ್ದಾರೆ. ಕಾರ್ಯಕರ್ತರೂ ದಂಡು, ದಂಡಾಗಿ ಘೋಷಣೆಗಳನ್ನು ಕೂಗುತ್ತಾ, ಮತಯಾಚಿಸುತ್ತಾ ಸಾಗುತ್ತಿದ್ದಾರೆ.</p>.<p>ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ಆರೋಪ, ಪ್ರತ್ಯಾರೋಪಗಳ ಜೊತೆಗೆ ಬಹಿರಂಗ ಚರ್ಚೆಯ ಸವಾಲನ್ನೂ ಕೂಡ ಹಾಕಲಾಗಿದೆ. ಸಂಸದ ಗೋವಿಂದ ಕಾರಜೋಳ ಆಹ್ವಾನದ ಸವಾಲಿಗೆ, ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ, ಸಮಯ ಮತ್ತು ದಿನಾಂಕ ನಿಗದಿಪಡಿಸುವಂತೆ ಪ್ರತಿ ಸವಾಲು ಹಾಕಿದ್ದಾರೆ.</p>.<p>ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ, ಸಚಿವ ಸತೀಶ ಜಾರಕಿಹೊಳಿ. ಶಾಸಕ ಜೆ.ಟಿ. ಪಾಟೀಲ, ಮಾಜಿ ಸಚಿವ ಅಜಯಕುಮಾರ ಸರನಾಯಕ, ಯುವ ಕಾಂಗ್ರೆಸ್ ರಾಜ್ಯಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ, ಸಚಿವ ಶಿವಾನಂದ ಪಾಟೀಲ ಪುತ್ರಿ ಸಂಯುಕ್ತಾ ಪಾಟೀಲ ಸೇರಿದಂತೆ ಹಲವರು ಪ್ರಚಾರ ನಡೆಸಿದ್ದಾರೆ.</p>.<p>ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ ಪರವಾಗಿ ಸಂಸದರಾದ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ, ಮಾಜಿ ಸಚಿವ ಬಿ. ಶ್ರೀರಾಮುಲು, ಮಾಜಿ ಶಾಸಕ ಪಿ. ರಾಜೀವ್ ಸೇರಿದಂತೆ ಹಲವರು ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.</p>.<p><strong>ಸಮುದಾಯಗಳ ಮತದ ಮೇಲೆ ಕಣ್ಣು:</strong> ಲಿಂಗಾಯತದಲ್ಲಿ ಉಪ ಪಂಗಡ, ಮರಾಠ, ಗುಜರಾತಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಹಲವು ಸಮುದಾಯಗಳ ಮೇಲೆ ಎರಡೂ ರಾಜಕೀಯ ಪಕ್ಷಗಳು ಕಣ್ಣಿಟ್ಟಿದ್ದು, ಸಮುದಾಯ ಮುಖಂಡರು ಹಾಗೂ ಜನರೊಂದಿಗೆ ಸರಣಿ ಸಭೆ ನಡೆಸುತ್ತಿದ್ದಾರೆ.</p>.<div><blockquote>ಬಾಗಲಕೋಟೆ ಅಭಿವೃದ್ಧಿಗೆ ನಮ್ಮ ಸರ್ಕಾರದಲ್ಲಿ, ನಿಮ್ಮ ಸರ್ಕಾರದಲ್ಲಿ ಬಿಡುಗಡೆ ಮಾಡಿರುವ ಹಣದ ವಿವರ ಬಹಿರಂಗ ಪಡಿಸಿ</blockquote><span class="attribution"> ಬಸವರಾಜ ಬೊಮ್ಮಾಯಿ, ಸಂಸದ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಕಣವು ಬಿಸಿಲಿನ ಪ್ರಖರತೆ ಜೊತೆಗೆ ಪ್ರಚಾರದ ತಾಪವೂ ಹೆಚ್ಚಾಗುತ್ತಿದೆ. ಸವಾಲು, ಪ್ರತಿ ಸವಾಲು ಹಾಕುತ್ತಿರುವುದರಿಂದ ನಾಯಕರ ನಡುವಿನ ವಾಗ್ವಾದವೂ ಬಿಸಿ ಏರಿದೆ.</p>.<p>ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಬಿರುಸಿನ ಪ್ರಚಾರ ನಡೆಸಿದ್ದಾರೆ. ಕಾರ್ಯಕರ್ತರೂ ದಂಡು, ದಂಡಾಗಿ ಘೋಷಣೆಗಳನ್ನು ಕೂಗುತ್ತಾ, ಮತಯಾಚಿಸುತ್ತಾ ಸಾಗುತ್ತಿದ್ದಾರೆ.</p>.<p>ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ಆರೋಪ, ಪ್ರತ್ಯಾರೋಪಗಳ ಜೊತೆಗೆ ಬಹಿರಂಗ ಚರ್ಚೆಯ ಸವಾಲನ್ನೂ ಕೂಡ ಹಾಕಲಾಗಿದೆ. ಸಂಸದ ಗೋವಿಂದ ಕಾರಜೋಳ ಆಹ್ವಾನದ ಸವಾಲಿಗೆ, ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ, ಸಮಯ ಮತ್ತು ದಿನಾಂಕ ನಿಗದಿಪಡಿಸುವಂತೆ ಪ್ರತಿ ಸವಾಲು ಹಾಕಿದ್ದಾರೆ.</p>.<p>ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ, ಸಚಿವ ಸತೀಶ ಜಾರಕಿಹೊಳಿ. ಶಾಸಕ ಜೆ.ಟಿ. ಪಾಟೀಲ, ಮಾಜಿ ಸಚಿವ ಅಜಯಕುಮಾರ ಸರನಾಯಕ, ಯುವ ಕಾಂಗ್ರೆಸ್ ರಾಜ್ಯಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ, ಸಚಿವ ಶಿವಾನಂದ ಪಾಟೀಲ ಪುತ್ರಿ ಸಂಯುಕ್ತಾ ಪಾಟೀಲ ಸೇರಿದಂತೆ ಹಲವರು ಪ್ರಚಾರ ನಡೆಸಿದ್ದಾರೆ.</p>.<p>ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ ಪರವಾಗಿ ಸಂಸದರಾದ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ, ಮಾಜಿ ಸಚಿವ ಬಿ. ಶ್ರೀರಾಮುಲು, ಮಾಜಿ ಶಾಸಕ ಪಿ. ರಾಜೀವ್ ಸೇರಿದಂತೆ ಹಲವರು ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.</p>.<p><strong>ಸಮುದಾಯಗಳ ಮತದ ಮೇಲೆ ಕಣ್ಣು:</strong> ಲಿಂಗಾಯತದಲ್ಲಿ ಉಪ ಪಂಗಡ, ಮರಾಠ, ಗುಜರಾತಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಹಲವು ಸಮುದಾಯಗಳ ಮೇಲೆ ಎರಡೂ ರಾಜಕೀಯ ಪಕ್ಷಗಳು ಕಣ್ಣಿಟ್ಟಿದ್ದು, ಸಮುದಾಯ ಮುಖಂಡರು ಹಾಗೂ ಜನರೊಂದಿಗೆ ಸರಣಿ ಸಭೆ ನಡೆಸುತ್ತಿದ್ದಾರೆ.</p>.<div><blockquote>ಬಾಗಲಕೋಟೆ ಅಭಿವೃದ್ಧಿಗೆ ನಮ್ಮ ಸರ್ಕಾರದಲ್ಲಿ, ನಿಮ್ಮ ಸರ್ಕಾರದಲ್ಲಿ ಬಿಡುಗಡೆ ಮಾಡಿರುವ ಹಣದ ವಿವರ ಬಹಿರಂಗ ಪಡಿಸಿ</blockquote><span class="attribution"> ಬಸವರಾಜ ಬೊಮ್ಮಾಯಿ, ಸಂಸದ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>