<p><strong>ಬಾಗಲಕೋಟೆ:</strong> ಉಪಚುನಾವಣೆ ಘೋಷಣೆಯಾದರೂ, ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳ ಆಯ್ಕೆ ನಡೆಯದ್ದರಿಂದ ಬಹಿರಂಗ ಪ್ರಚಾರ ಆರಂಭವಾಗಿಲ್ಲ. ಆದರೆ, ಸಾಮಾಜಿಕ ಜಾಲತಾಣದಲ್ಲಿ ಸಮರ ಜೋರಾಗಿದೆ.</p>.<p>ಕಾಂಗ್ರೆಸ್, ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಒಂದೆಡೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ಗಳನ್ನು ಹಾಕುತ್ತಿದ್ದಾರೆ. ಅವರಿಗೆ ಟಿಕೆಟ್ ನೀಡಬೇಕು ಎಂದು ಅವರವರ ಅಭಿಮಾನಿಗಳು ಪ್ರತಿಕ್ರಿಯಿಸುತ್ತಿದ್ದಾರೆ.</p>.<p>ಇನ್ನೊಂದೆಡೆ ವಿರೋಧಿ ಪಕ್ಷಗಳ ಟೀಕೆ, ಕಾಲೆಳೆಯುವುದಕ್ಕೂ ಸಾಮಾಜಿಕ ಜಾಲತಾಣ ಬಳಸಲಾಗುತ್ತಿದೆ. ಅದಕ್ಕೆ ಸಾರ್ವಜನಿಕರೂ, ಬೆಂಬಲಿಗರೂ ಪ್ರತಿಕ್ರಿಯೆ ಮೂಲಕ ಟಾಂಗ್ ನೀಡುತ್ತಿದ್ದಾರೆ.</p>.<p>ಬಿಜೆಪಿ ಪಕ್ಷದ ನಾಯಕರು ಬುಧವಾರ ನಗರಸಭೆ ಮಾಜಿ ಅಧ್ಯಕ್ಷ ಬಸವರಾಜ ಕಟಗೇರಿ ಅವರನ್ನು ಮರಳಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.<p>ಬಿಜೆಪಿ ಮುಖಂಡ ಬಸವರಾಜ ನಾಸಿ ಎಂಬುವವರು, ‘ಮುಂದಿನ ಸರದಿ ಇಬ್ಬರೂ ಕೈ ಪಕ್ಷದ ದೊಡ್ಡ ಮುಖಂಡರ ಬಿಜೆಪಿ ಸೇರ್ಪಡೆ ಅಷ್ಟೇ’ ಎಂದು ಪೋಸ್ಟ್ ಹಾಕಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಒಬ್ಬರು, ಅನುಕೂಲಕ್ಕೆ ತಕ್ಕಂತೆ ಹೋಗುವವರು, ಬರುವವರಿಗಿಂತ ಪಕ್ಷದ ನಿಷ್ಠಾವಂತರಿಗೆ ಬೆಲೆ ಕೊಡಿ. ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ ಎನ್ನುವವರಿಗೆ ಪಕ್ಷದಲ್ಲಿ ಬೆಲೆ ಕೊಡುವುದು ಉತ್ತಮವಲ್ಲ’ ಎಂದು ತಿವಿದಿದ್ದಾರೆ.</p>.<p>ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಚರಂತಿಮಠ ಪರ ಪ್ರಚಾರ ಮಾಡಿದ್ದ ಬಸವರಾಜ ಕಟಗೇರಿ ಮರಳಿ ಬಿಜೆಪಿಗೇ ಸೇರ್ಪಡೆಗೊಂಡಿದ್ದಾರೆ. ಇನ್ನೂ ಕೆಲವರು ಸೇರ್ಪಡೆಯಾಗುವ ಸಾಧ್ಯತೆಗಳಿವೆ. ಈ ಹೊತ್ತಿನಲ್ಲಿಯೇ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಚರಂತಿಮಠ, ಪತ್ರಿಕಾಗೋಷ್ಠಿ ಅತಿ ಶೀಘ್ರದಲ್ಲಿ ಎಂದಿರುವುದು ಕುತೂಹಲ ಹೆಚ್ಚಿಸಿದೆ.</p>.<p>ಕಾಂಗ್ರೆಸ್ ನಾಯಕರು, ಬಿಜೆಪಿ ಸರ್ಕಾರದಲ್ಲಿನ ವೈಫಲ್ಯ, ಅಭಿವೃದ್ಧಿ ಮಾಡದಿರುವುದು, ಜಿಲ್ಲೆಗೆ ಕೊಡುಗೆ ನೀಡದಿರುವುದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಾಗ್ದಾಳಿ ನಡೆಸುತ್ತಿದ್ದಾರೆ. ಇನ್ನೊಂದೆಡೆ ಬಿಜೆಪಿ ನಾಯಕರು, ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ, ಟಿಕೆಟ್ಗಾಗಿ ನಡೆದಿರುವ ಬಹಿರಂಗ ಕಲಹ ಮುಂತಾದ ವಿಷಯಗಳ ಪ್ರಸ್ತಾಪ ಮೂಲಕ ಟೀಕೆ ಮಾಡುತ್ತಿದ್ದಾರೆ.</p>.<p>ಅಭ್ಯರ್ಥಿಗಳ ಘೋಷಣೆಯಾಗುವವರೆಗೂ ಬಹಿರಂಗ ಪ್ರಚಾರವಿಲ್ಲದ ನಾಯಕರು, ಸಾಮಾಜಿಕ ಜಾಲತಾಣದಲ್ಲಿಯೇ ಪೋಸ್ಟ್ ವಾರ್ ನಡೆಸಿದ್ದಾರೆ. ಇದೆಲ್ಲವನ್ನೂ ಗಮನಿಸುತ್ತಿರುವ ಮತದಾರರು ಮತದಾನಕ್ಕಾಗಿ ಕಾಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಉಪಚುನಾವಣೆ ಘೋಷಣೆಯಾದರೂ, ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳ ಆಯ್ಕೆ ನಡೆಯದ್ದರಿಂದ ಬಹಿರಂಗ ಪ್ರಚಾರ ಆರಂಭವಾಗಿಲ್ಲ. ಆದರೆ, ಸಾಮಾಜಿಕ ಜಾಲತಾಣದಲ್ಲಿ ಸಮರ ಜೋರಾಗಿದೆ.</p>.<p>ಕಾಂಗ್ರೆಸ್, ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಒಂದೆಡೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ಗಳನ್ನು ಹಾಕುತ್ತಿದ್ದಾರೆ. ಅವರಿಗೆ ಟಿಕೆಟ್ ನೀಡಬೇಕು ಎಂದು ಅವರವರ ಅಭಿಮಾನಿಗಳು ಪ್ರತಿಕ್ರಿಯಿಸುತ್ತಿದ್ದಾರೆ.</p>.<p>ಇನ್ನೊಂದೆಡೆ ವಿರೋಧಿ ಪಕ್ಷಗಳ ಟೀಕೆ, ಕಾಲೆಳೆಯುವುದಕ್ಕೂ ಸಾಮಾಜಿಕ ಜಾಲತಾಣ ಬಳಸಲಾಗುತ್ತಿದೆ. ಅದಕ್ಕೆ ಸಾರ್ವಜನಿಕರೂ, ಬೆಂಬಲಿಗರೂ ಪ್ರತಿಕ್ರಿಯೆ ಮೂಲಕ ಟಾಂಗ್ ನೀಡುತ್ತಿದ್ದಾರೆ.</p>.<p>ಬಿಜೆಪಿ ಪಕ್ಷದ ನಾಯಕರು ಬುಧವಾರ ನಗರಸಭೆ ಮಾಜಿ ಅಧ್ಯಕ್ಷ ಬಸವರಾಜ ಕಟಗೇರಿ ಅವರನ್ನು ಮರಳಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.<p>ಬಿಜೆಪಿ ಮುಖಂಡ ಬಸವರಾಜ ನಾಸಿ ಎಂಬುವವರು, ‘ಮುಂದಿನ ಸರದಿ ಇಬ್ಬರೂ ಕೈ ಪಕ್ಷದ ದೊಡ್ಡ ಮುಖಂಡರ ಬಿಜೆಪಿ ಸೇರ್ಪಡೆ ಅಷ್ಟೇ’ ಎಂದು ಪೋಸ್ಟ್ ಹಾಕಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಒಬ್ಬರು, ಅನುಕೂಲಕ್ಕೆ ತಕ್ಕಂತೆ ಹೋಗುವವರು, ಬರುವವರಿಗಿಂತ ಪಕ್ಷದ ನಿಷ್ಠಾವಂತರಿಗೆ ಬೆಲೆ ಕೊಡಿ. ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ ಎನ್ನುವವರಿಗೆ ಪಕ್ಷದಲ್ಲಿ ಬೆಲೆ ಕೊಡುವುದು ಉತ್ತಮವಲ್ಲ’ ಎಂದು ತಿವಿದಿದ್ದಾರೆ.</p>.<p>ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಚರಂತಿಮಠ ಪರ ಪ್ರಚಾರ ಮಾಡಿದ್ದ ಬಸವರಾಜ ಕಟಗೇರಿ ಮರಳಿ ಬಿಜೆಪಿಗೇ ಸೇರ್ಪಡೆಗೊಂಡಿದ್ದಾರೆ. ಇನ್ನೂ ಕೆಲವರು ಸೇರ್ಪಡೆಯಾಗುವ ಸಾಧ್ಯತೆಗಳಿವೆ. ಈ ಹೊತ್ತಿನಲ್ಲಿಯೇ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಚರಂತಿಮಠ, ಪತ್ರಿಕಾಗೋಷ್ಠಿ ಅತಿ ಶೀಘ್ರದಲ್ಲಿ ಎಂದಿರುವುದು ಕುತೂಹಲ ಹೆಚ್ಚಿಸಿದೆ.</p>.<p>ಕಾಂಗ್ರೆಸ್ ನಾಯಕರು, ಬಿಜೆಪಿ ಸರ್ಕಾರದಲ್ಲಿನ ವೈಫಲ್ಯ, ಅಭಿವೃದ್ಧಿ ಮಾಡದಿರುವುದು, ಜಿಲ್ಲೆಗೆ ಕೊಡುಗೆ ನೀಡದಿರುವುದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಾಗ್ದಾಳಿ ನಡೆಸುತ್ತಿದ್ದಾರೆ. ಇನ್ನೊಂದೆಡೆ ಬಿಜೆಪಿ ನಾಯಕರು, ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ, ಟಿಕೆಟ್ಗಾಗಿ ನಡೆದಿರುವ ಬಹಿರಂಗ ಕಲಹ ಮುಂತಾದ ವಿಷಯಗಳ ಪ್ರಸ್ತಾಪ ಮೂಲಕ ಟೀಕೆ ಮಾಡುತ್ತಿದ್ದಾರೆ.</p>.<p>ಅಭ್ಯರ್ಥಿಗಳ ಘೋಷಣೆಯಾಗುವವರೆಗೂ ಬಹಿರಂಗ ಪ್ರಚಾರವಿಲ್ಲದ ನಾಯಕರು, ಸಾಮಾಜಿಕ ಜಾಲತಾಣದಲ್ಲಿಯೇ ಪೋಸ್ಟ್ ವಾರ್ ನಡೆಸಿದ್ದಾರೆ. ಇದೆಲ್ಲವನ್ನೂ ಗಮನಿಸುತ್ತಿರುವ ಮತದಾರರು ಮತದಾನಕ್ಕಾಗಿ ಕಾಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>