<p>ರಾಂಪುರ: ಉಪ ಚುನಾವಣೆಯಲ್ಲಿ ಬಾಗಲಕೋಟೆ ನಗರ ಅಷ್ಟೇ ಅಲ್ಲದೇ ಗ್ರಾಮೀಣ ಭಾಗದಲ್ಲೂ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ ಲೀಡ್ ಸಿಗುತ್ತದೆ. ಹೀಗಾಗಿ ಅವರ ಗೆಲುವು ಖಚಿತ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಶನಿವಾರ ಬೆನಕಟ್ಟಿ, ಕಿರಸೂರ, ಬೆಣ್ಣೂರ ಗ್ರಾಮಗಳಲ್ಲಿ ವೀರಣ್ಣ ಚರಂತಿಮಠ ಪರವಾಗಿ ಮತಯಾಚನೆ ಮಾಡಿದ ಅವರು, ಹಿಂದಿನ ಚುನಾವಣೆಗಳಲ್ಲಿ ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ಗೆ ಲೀಡ್ ಸಿಗುತ್ತಿತ್ತು. ಬಾಗಲಕೋಟೆ ನಗರದಲ್ಲಿ ಬಿಜೆಪಿಗೆ ಲೀಡ್ ಬರುತ್ತಿತ್ತು. ಆದರೆ, ಈ ಬಾರಿ ಕಾರ್ಯಕರ್ತರ ಉತ್ಸಾಹ ನೋಡಿದರೆ ಗ್ರಾಮೀಣ ಭಾಗದಲ್ಲೂ ಬಿಜೆಪಿ ಲೀಡ್ ಪಡೆಯುತ್ತದೆ ಎಂಬ ವಿಶ್ವಾಸ ಮೂಡುತ್ತದೆ ಎಂದರು.</p>.<p>ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಮತದಾರರು ಬೇಸತ್ತಿದ್ದಾರೆ. ಮೂರು ವರ್ಷ ಕಳೆದರೂ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. ನಾವು ಹಿಂದೂಗಳಲ್ಲವೇ ಎನ್ನುತ್ತ ಮುಖ್ಯಮಂತ್ರಿಗಳು ಬಜೆಟ್ನಲ್ಲಿ ಮುಸ್ಲಿಂರಿಗೆ ಹೆಚ್ಚು ಹಣ ನೀಡುತ್ತ ಜನರಿಗೆ ಮೋಸ ಮಾಡಿದ್ದಾರೆ ಎಂದರು.</p>.<p>ಬಾಗಲಕೋಟೆಯಲ್ಲಿ ಕಾಂಗ್ರೆಸ್ಸಿಗೆ ಸೋಲಾಗುತ್ತದೆ ಎಂಬ ಭಯ ಕಾಡುತ್ತಿದ್ದು, ಶತಾಯ ಗತಾಯ ಗೆಲ್ಲಬೇಕು ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿಯೇ ಠಿಕಾಣಿ ಹೂಡಿದ್ದಾರೆ. ಹಿಂದೆ ಯಾವುದೇ ಮುಖ್ಯಮಂತ್ರಿಗಳು ಉಪಚುನಾವಣೆಯಲ್ಲಿ ಈ ರೀತಿ ಪ್ರಚಾರಕ್ಕೆ ಇಳಿದಿರಲಿಲ್ಲ ಎಂದರು.</p>.<p>ಶಾಸಕ ಸಿದ್ದು ಸವದಿ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮಾತನಾಡಿದರು. ಮುಖಂಡರಾದ ಮೋಹನ ಜಾಧವ ಹಾಗೂ ಸ್ಥಳೀಯ ಮುಖಂಡರು, ಕಾರ್ಯಕರ್ತರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-19-134276850</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಂಪುರ: ಉಪ ಚುನಾವಣೆಯಲ್ಲಿ ಬಾಗಲಕೋಟೆ ನಗರ ಅಷ್ಟೇ ಅಲ್ಲದೇ ಗ್ರಾಮೀಣ ಭಾಗದಲ್ಲೂ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ ಲೀಡ್ ಸಿಗುತ್ತದೆ. ಹೀಗಾಗಿ ಅವರ ಗೆಲುವು ಖಚಿತ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಶನಿವಾರ ಬೆನಕಟ್ಟಿ, ಕಿರಸೂರ, ಬೆಣ್ಣೂರ ಗ್ರಾಮಗಳಲ್ಲಿ ವೀರಣ್ಣ ಚರಂತಿಮಠ ಪರವಾಗಿ ಮತಯಾಚನೆ ಮಾಡಿದ ಅವರು, ಹಿಂದಿನ ಚುನಾವಣೆಗಳಲ್ಲಿ ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ಗೆ ಲೀಡ್ ಸಿಗುತ್ತಿತ್ತು. ಬಾಗಲಕೋಟೆ ನಗರದಲ್ಲಿ ಬಿಜೆಪಿಗೆ ಲೀಡ್ ಬರುತ್ತಿತ್ತು. ಆದರೆ, ಈ ಬಾರಿ ಕಾರ್ಯಕರ್ತರ ಉತ್ಸಾಹ ನೋಡಿದರೆ ಗ್ರಾಮೀಣ ಭಾಗದಲ್ಲೂ ಬಿಜೆಪಿ ಲೀಡ್ ಪಡೆಯುತ್ತದೆ ಎಂಬ ವಿಶ್ವಾಸ ಮೂಡುತ್ತದೆ ಎಂದರು.</p>.<p>ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಮತದಾರರು ಬೇಸತ್ತಿದ್ದಾರೆ. ಮೂರು ವರ್ಷ ಕಳೆದರೂ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. ನಾವು ಹಿಂದೂಗಳಲ್ಲವೇ ಎನ್ನುತ್ತ ಮುಖ್ಯಮಂತ್ರಿಗಳು ಬಜೆಟ್ನಲ್ಲಿ ಮುಸ್ಲಿಂರಿಗೆ ಹೆಚ್ಚು ಹಣ ನೀಡುತ್ತ ಜನರಿಗೆ ಮೋಸ ಮಾಡಿದ್ದಾರೆ ಎಂದರು.</p>.<p>ಬಾಗಲಕೋಟೆಯಲ್ಲಿ ಕಾಂಗ್ರೆಸ್ಸಿಗೆ ಸೋಲಾಗುತ್ತದೆ ಎಂಬ ಭಯ ಕಾಡುತ್ತಿದ್ದು, ಶತಾಯ ಗತಾಯ ಗೆಲ್ಲಬೇಕು ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿಯೇ ಠಿಕಾಣಿ ಹೂಡಿದ್ದಾರೆ. ಹಿಂದೆ ಯಾವುದೇ ಮುಖ್ಯಮಂತ್ರಿಗಳು ಉಪಚುನಾವಣೆಯಲ್ಲಿ ಈ ರೀತಿ ಪ್ರಚಾರಕ್ಕೆ ಇಳಿದಿರಲಿಲ್ಲ ಎಂದರು.</p>.<p>ಶಾಸಕ ಸಿದ್ದು ಸವದಿ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮಾತನಾಡಿದರು. ಮುಖಂಡರಾದ ಮೋಹನ ಜಾಧವ ಹಾಗೂ ಸ್ಥಳೀಯ ಮುಖಂಡರು, ಕಾರ್ಯಕರ್ತರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-19-134276850</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>