<p><strong>ಬಾಗಲಕೋಟೆ</strong>: ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ, ಯಾವುದೇ ಲೋಪಗಳಿಲ್ಲದ ಮತದಾರರ ಪಟ್ಟಿ ಸಿದ್ದಪಡಿಸಲು ಕ್ರಮವಹಿಸಬೇಕು ಎಂದು ಚುನಾವಣಾ ಆಯೋಗದ ಜಂಟಿ ಮುಖ್ಯ ಚುನಾವಣಾಧಿಕಾರಿ ಎಸ್. ಯೋಗೇಶ್ವರ ಸೂಚಿಸಿದರು.<br><br> ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪೂರ್ವ ಸಿದ್ದತೆ ಕುರಿತು ಜರುಗಿದ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಅರ್ಹ ಮತದಾರರ ಪಟ್ಟಿ ಸಿದ್ದಪಡಿಸುವುದು ಬಹಳ ಮಹತ್ವದ್ದಾಗಿದೆ. ಈ ವರೆಗೂ ಶೇ೮೦ ರಷ್ಟು ಮಾತ್ರ ಆಗಿದ್ದು, ಇನ್ನುಳಿದಂತಹ ಮತದಾರರ ಹೆಸರುಗಳನ್ನು 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ಪ್ರಗತಿ ಸಾಧಿಸಬೇಕು ಎಂದು ಹೇಳಿದರು. <br><br>ತಪ್ಪು ಮಾಹಿತಿ ನೀಡುವವರ ವಿರುದ್ದ ಕೂಡ ಕ್ರಮವಾಗುತ್ತದೆ. ಬಿಎಲ್ಒ ಗಳಿಗೆ ಸರಿಯಾದ ತರಬೇತಿ ನೀಡುವ ಕೆಲಸ ಮೊದಲು ಮಾಡಿ. ಸರಿಯಾದ ತರಬೇತಿ ಹೊಂದಿದ್ದರೆ ಲೋಪಗಳಾಗುವುದಿಲ್ಲ. ಎಲ್ಲವೂ ಶಿಸ್ತುಬದ್ದವಾಗಿರಬೇಕು. ಫಾರ್ಂ 6,7 ಮತ್ತು 8 ಅನ್ನು ಪರಿಶೀಲಿಸಿ ಎಲ್ಲ ಅರ್ಜಿಗಳನ್ನು ವಿಲೇವಾರಿ ಮಾಡಿಬೇಕು. ಉಪಚುನಾವಣೆಯ ಅಗತ್ಯ ಪೂರ್ವ ಸಿದ್ದತೆಗಳನ್ನು ಈಗಲೇ ಮಾಡಿಟ್ಟುಕೊಂಡಿರಿ ಎಂದು ಸೂಚಿಸಿದರು.<br><br>ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಪ ಚುನಾವಣೆಯಲ್ಲಿಯೂ ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ, ಈ ಹಿನ್ನಲೆಯಲ್ಲಿ ಎಲ್ಲಾ ಮಾದರಿ ನೀತಿ ಸಂಹಿತೆ ಪಾಲನಾ ತಂಡಗಳನ್ನು ಮಾಡಿಟ್ಟುಕೊಳ್ಳಿ. ಚುನಾವಣಾ ನೀತಿ ಸಂಹಿತೆ ಜಾರಿಯಾದ ತಕ್ಷಣ ಎಲ್ಲಾ ತಂಡಗಳು ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು ಎಂದರು.</p>.<p>ಪೇಡ್ ನ್ಯೂಸ್ ಬಗ್ಗೆ ಗಮನ ನೀಡಬೇಕು. ಕಂಟೆಂಟ್ ನೋಡಿಯೇ ಜಾಹೀರಾತಿಗೆ ಅನುಮತಿ ನೀಡುವ ಕೆಲಸ ಆಗಬೇಕು. ಜಿಪಿಎಸ್ ಇಲ್ಲದ ವಾಹನಗಳಲ್ಲಿ ಮತಯಂತ್ರಗಳನ್ನು ಸಾಗಿಸಬಾರದು. ಚುನಾವಣಾ ಕಾರ್ಯದಲ್ಲಿ ಎಲ್ಲರೂ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕಾಗುತ್ತದೆ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಸಂಗಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ಬಾಗಲಕೋಟೆ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ತಹಶೀಲ್ದಾರ್ ವಾಸುದೇವ ಸ್ವಾಮಿ, ಶಿರಸ್ತೇದಾರ ಮಹೇಶ ಪಾಂಡವ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ, ಯಾವುದೇ ಲೋಪಗಳಿಲ್ಲದ ಮತದಾರರ ಪಟ್ಟಿ ಸಿದ್ದಪಡಿಸಲು ಕ್ರಮವಹಿಸಬೇಕು ಎಂದು ಚುನಾವಣಾ ಆಯೋಗದ ಜಂಟಿ ಮುಖ್ಯ ಚುನಾವಣಾಧಿಕಾರಿ ಎಸ್. ಯೋಗೇಶ್ವರ ಸೂಚಿಸಿದರು.<br><br> ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪೂರ್ವ ಸಿದ್ದತೆ ಕುರಿತು ಜರುಗಿದ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಅರ್ಹ ಮತದಾರರ ಪಟ್ಟಿ ಸಿದ್ದಪಡಿಸುವುದು ಬಹಳ ಮಹತ್ವದ್ದಾಗಿದೆ. ಈ ವರೆಗೂ ಶೇ೮೦ ರಷ್ಟು ಮಾತ್ರ ಆಗಿದ್ದು, ಇನ್ನುಳಿದಂತಹ ಮತದಾರರ ಹೆಸರುಗಳನ್ನು 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ಪ್ರಗತಿ ಸಾಧಿಸಬೇಕು ಎಂದು ಹೇಳಿದರು. <br><br>ತಪ್ಪು ಮಾಹಿತಿ ನೀಡುವವರ ವಿರುದ್ದ ಕೂಡ ಕ್ರಮವಾಗುತ್ತದೆ. ಬಿಎಲ್ಒ ಗಳಿಗೆ ಸರಿಯಾದ ತರಬೇತಿ ನೀಡುವ ಕೆಲಸ ಮೊದಲು ಮಾಡಿ. ಸರಿಯಾದ ತರಬೇತಿ ಹೊಂದಿದ್ದರೆ ಲೋಪಗಳಾಗುವುದಿಲ್ಲ. ಎಲ್ಲವೂ ಶಿಸ್ತುಬದ್ದವಾಗಿರಬೇಕು. ಫಾರ್ಂ 6,7 ಮತ್ತು 8 ಅನ್ನು ಪರಿಶೀಲಿಸಿ ಎಲ್ಲ ಅರ್ಜಿಗಳನ್ನು ವಿಲೇವಾರಿ ಮಾಡಿಬೇಕು. ಉಪಚುನಾವಣೆಯ ಅಗತ್ಯ ಪೂರ್ವ ಸಿದ್ದತೆಗಳನ್ನು ಈಗಲೇ ಮಾಡಿಟ್ಟುಕೊಂಡಿರಿ ಎಂದು ಸೂಚಿಸಿದರು.<br><br>ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಪ ಚುನಾವಣೆಯಲ್ಲಿಯೂ ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ, ಈ ಹಿನ್ನಲೆಯಲ್ಲಿ ಎಲ್ಲಾ ಮಾದರಿ ನೀತಿ ಸಂಹಿತೆ ಪಾಲನಾ ತಂಡಗಳನ್ನು ಮಾಡಿಟ್ಟುಕೊಳ್ಳಿ. ಚುನಾವಣಾ ನೀತಿ ಸಂಹಿತೆ ಜಾರಿಯಾದ ತಕ್ಷಣ ಎಲ್ಲಾ ತಂಡಗಳು ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು ಎಂದರು.</p>.<p>ಪೇಡ್ ನ್ಯೂಸ್ ಬಗ್ಗೆ ಗಮನ ನೀಡಬೇಕು. ಕಂಟೆಂಟ್ ನೋಡಿಯೇ ಜಾಹೀರಾತಿಗೆ ಅನುಮತಿ ನೀಡುವ ಕೆಲಸ ಆಗಬೇಕು. ಜಿಪಿಎಸ್ ಇಲ್ಲದ ವಾಹನಗಳಲ್ಲಿ ಮತಯಂತ್ರಗಳನ್ನು ಸಾಗಿಸಬಾರದು. ಚುನಾವಣಾ ಕಾರ್ಯದಲ್ಲಿ ಎಲ್ಲರೂ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕಾಗುತ್ತದೆ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಸಂಗಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ಬಾಗಲಕೋಟೆ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ತಹಶೀಲ್ದಾರ್ ವಾಸುದೇವ ಸ್ವಾಮಿ, ಶಿರಸ್ತೇದಾರ ಮಹೇಶ ಪಾಂಡವ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>