<p>ಬಾಗಲಕೋಟೆ: ‘ಬಾಲ್ಯ ವಿವಾಹಕ್ಕೆ ಕಾರಣರಾಗುವ ಎಲ್ಲರ ವಿರುದ್ಧವೂ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ವೀಣಾ ಪಟ್ಟಣಶೆಟ್ಟಿ ಹೇಳಿದರು.</p>.<p>ಬಿವಿವಿ ಸಂಘದ ಬಸವೇಶ್ವರ ವಾಣಿಜ್ಯ ಕಾಲೇಜಿನಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ರೀಚ್ ಸಂಸ್ಥೆ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಂಡಿದ್ದ ಜಾಗೃತಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಜಗನ್ನಾಥ ಚವ್ಹಾಣ ಮಾತನಾಡಿ, ಬಾಲ್ಯ ವಿವಾಹದಿಂದಾಗುವ ಅನಾನುಕೂಲಗಳು ಹಾಗೂ ಬಾಲ್ಯವಿವಾಹ ತಡೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಪಾತ್ರ ಕುರಿತು ಮಾತನಾಡಿದರು.</p>.<p>ರೀಚ್ ಸಂಸ್ಥೆ ನಿರ್ದೇಶಕ ಜಿ.ಎನ್ ಸಿಂಹ ಮಾತನಾಡಿ, ‘ಬಾಲ್ಯ ವಿವಾಹವು ಘೋರ ಅಪರಾಧವಾಗಿದೆ. ಅಕ್ಷಯ ತೃತೀಯದಂತಹ ಶುಭ ಸಂದರ್ಭದ ನೆಪದಲ್ಲಿ ಅಥವಾ ಇನ್ನಾವುದೇ ಧಾರ್ಮಿಕ ಪರಂಪರೆಯಡಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಈ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕಿದೆ’ ಎಂದರು.</p>.<p>ಸಂಯೋಜಕಿ ಜಿ.ಎಂ.ನಾವದಗಿ, ಸಿಬ್ಬಂದಿ ಕಾರ್ಯದರ್ಶಿ ಎಂ.ನಂಜುಂಡಸ್ವಾಮಿ,, ರೇಂಜರ್ ಘಟಕದ ಮುಖ್ಯಸ್ಥೆ ಐ.ಕೆ.ಮಠದ, ರೋವರ್ ಘಟಕದ ಮುಖ್ಯಸ್ಥ ಸುರೇಶ್ ಆಡಗಲ್ ಇದ್ದರು. ಬಾಲ್ಯ ವಿವಾಹ ವಿರೋಧಿಸುವ ಪ್ರತಿಜ್ಞಾವಿಧಿ ಬೋಧಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-19-1825729665</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ‘ಬಾಲ್ಯ ವಿವಾಹಕ್ಕೆ ಕಾರಣರಾಗುವ ಎಲ್ಲರ ವಿರುದ್ಧವೂ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ವೀಣಾ ಪಟ್ಟಣಶೆಟ್ಟಿ ಹೇಳಿದರು.</p>.<p>ಬಿವಿವಿ ಸಂಘದ ಬಸವೇಶ್ವರ ವಾಣಿಜ್ಯ ಕಾಲೇಜಿನಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ರೀಚ್ ಸಂಸ್ಥೆ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಂಡಿದ್ದ ಜಾಗೃತಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಜಗನ್ನಾಥ ಚವ್ಹಾಣ ಮಾತನಾಡಿ, ಬಾಲ್ಯ ವಿವಾಹದಿಂದಾಗುವ ಅನಾನುಕೂಲಗಳು ಹಾಗೂ ಬಾಲ್ಯವಿವಾಹ ತಡೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಪಾತ್ರ ಕುರಿತು ಮಾತನಾಡಿದರು.</p>.<p>ರೀಚ್ ಸಂಸ್ಥೆ ನಿರ್ದೇಶಕ ಜಿ.ಎನ್ ಸಿಂಹ ಮಾತನಾಡಿ, ‘ಬಾಲ್ಯ ವಿವಾಹವು ಘೋರ ಅಪರಾಧವಾಗಿದೆ. ಅಕ್ಷಯ ತೃತೀಯದಂತಹ ಶುಭ ಸಂದರ್ಭದ ನೆಪದಲ್ಲಿ ಅಥವಾ ಇನ್ನಾವುದೇ ಧಾರ್ಮಿಕ ಪರಂಪರೆಯಡಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಈ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕಿದೆ’ ಎಂದರು.</p>.<p>ಸಂಯೋಜಕಿ ಜಿ.ಎಂ.ನಾವದಗಿ, ಸಿಬ್ಬಂದಿ ಕಾರ್ಯದರ್ಶಿ ಎಂ.ನಂಜುಂಡಸ್ವಾಮಿ,, ರೇಂಜರ್ ಘಟಕದ ಮುಖ್ಯಸ್ಥೆ ಐ.ಕೆ.ಮಠದ, ರೋವರ್ ಘಟಕದ ಮುಖ್ಯಸ್ಥ ಸುರೇಶ್ ಆಡಗಲ್ ಇದ್ದರು. ಬಾಲ್ಯ ವಿವಾಹ ವಿರೋಧಿಸುವ ಪ್ರತಿಜ್ಞಾವಿಧಿ ಬೋಧಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-19-1825729665</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>