<p><strong>ಬಾಗಲಕೋಟೆ</strong>: ಹವಾಮಾನ ಬದಲಾವಣೆಯ ಪ್ರತಿಕೂಲ ಪರಿಣಾಮಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಇಲಾಖೆಗಳು ಹೇಗೆ ಚುರುಕಾಗಿ ಕೆಲಸ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ರಾಜ್ಯ ಹವಾಮಾನ ಬದಲಾವಣೆ ಕ್ರಿಯಾ ಯೋಜನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಶುಕ್ರವಾರ ಹಮ್ಮಿಕೊಂಡಿದ್ದ ತರಬೇತಿಗೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿನ ನೈಸರ್ಗಿಕ ಸಂಪನ್ಮೂಲಗಳನ್ನು ಉಪಯೋಗಿಸಿಕೊಂಡು ಹವಾಮಾನ ಬದಲಾವಣೆಯ ಪ್ರತಿಕೂಲ ಅಂಶಗಳನ್ನು ನಿವಾರಿಸಬೇಕು ಎಂದರು.</p>.<p>ಈ ಯೋಜನೆಯಡಿ ಹವಾಮಾನ ಬದಲಾವಣೆಯ ಕುರಿತ ಕಾರ್ಯ ಅಂಶಗಳನ್ನು ಆಧರಿಸಿ, ವಿವಿಧ ಇಲಾಖೆಗಳು 2025-2030ರ ಅವಧಿಗೆ ಪ್ರಮುಖ ಕಾರ್ಯಕ್ಷಮತಾ ಸೂಚಕಗಳನ್ನು ಗುರಿಗಳೊಂದಿಗೆ ನಿಗದಿಪಡಿಸಲಾಗಿದೆ. ಈ ಸೂಚಕಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರೆ ಪಾಲುದಾರ ಸಂಸ್ಥೆಗಳ ಸಾಮರ್ಥ್ಯ ವೃದ್ಧಿ ಅತ್ಯವಶ್ಯಕವಾಗಿದೆ ಎಂದರು.</p>.<p>ಎಂಪ್ರಿ ಸಂಸ್ಥೆಯ ಸಂಶೋಧನಾ ವಿಜ್ಞಾನಿ ಪವಿತ್ರಾ ನಾಯಕ್ ಮಾತನಾಡಿ, ಕಾರ್ಯನೀತಿ, ಕಾರ್ಯತಂತ್ರಗಳು, ವಿವಿಧ ಇಲಾಖೆಗಳ ಪಾತ್ರ ಹಾಗೂ ಅಲ್ಪಾವಧಿಯ ಹವಾಮಾನ ಮಾಲಿನ್ಯಕಾರಕಗಳ ಪರಿಣಾಮಗಳು ಮತ್ತು ಜಿಲ್ಲಾಸ್ಥರದ ದತ್ತಾಂಶಗಳ ಕುರಿತು ಸಮಗ್ರ ಮಾಹಿತಿ ನೀಡಿದರು.</p>.<p>ಜಲ ಸಂಪನ್ಮೂಲ ವಲಯಕ್ಕೆ ಸಂಬಂಧಿಸಿದ ಹವಾಮಾನ ಕ್ರಿಯಾ ಯೋಜನೆ ಕುರಿತು ಜಲ ಸಂಪನ್ಮೂಲ ತಜ್ಞ ಶಶಿಕುಮಾರ್ ಎನ್ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಎನ್ ಎನ್.ಆರ್.ಡಿ.ಎಂ.ಎಸ್ ಅಧಿಕಾರಿ ಚಂದ್ರಶೇಖರ ಉಪಸ್ಥಿತರಿದ್ದರು.</p>.<p>46 ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ–ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಣ ಸಂಸ್ಥೆಗಳ ಸದಸ್ಯರು ಹಾಗೂ ಇತರೆ ಪಾಲುದಾರರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-19-459615647</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಹವಾಮಾನ ಬದಲಾವಣೆಯ ಪ್ರತಿಕೂಲ ಪರಿಣಾಮಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಇಲಾಖೆಗಳು ಹೇಗೆ ಚುರುಕಾಗಿ ಕೆಲಸ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ರಾಜ್ಯ ಹವಾಮಾನ ಬದಲಾವಣೆ ಕ್ರಿಯಾ ಯೋಜನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಶುಕ್ರವಾರ ಹಮ್ಮಿಕೊಂಡಿದ್ದ ತರಬೇತಿಗೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿನ ನೈಸರ್ಗಿಕ ಸಂಪನ್ಮೂಲಗಳನ್ನು ಉಪಯೋಗಿಸಿಕೊಂಡು ಹವಾಮಾನ ಬದಲಾವಣೆಯ ಪ್ರತಿಕೂಲ ಅಂಶಗಳನ್ನು ನಿವಾರಿಸಬೇಕು ಎಂದರು.</p>.<p>ಈ ಯೋಜನೆಯಡಿ ಹವಾಮಾನ ಬದಲಾವಣೆಯ ಕುರಿತ ಕಾರ್ಯ ಅಂಶಗಳನ್ನು ಆಧರಿಸಿ, ವಿವಿಧ ಇಲಾಖೆಗಳು 2025-2030ರ ಅವಧಿಗೆ ಪ್ರಮುಖ ಕಾರ್ಯಕ್ಷಮತಾ ಸೂಚಕಗಳನ್ನು ಗುರಿಗಳೊಂದಿಗೆ ನಿಗದಿಪಡಿಸಲಾಗಿದೆ. ಈ ಸೂಚಕಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರೆ ಪಾಲುದಾರ ಸಂಸ್ಥೆಗಳ ಸಾಮರ್ಥ್ಯ ವೃದ್ಧಿ ಅತ್ಯವಶ್ಯಕವಾಗಿದೆ ಎಂದರು.</p>.<p>ಎಂಪ್ರಿ ಸಂಸ್ಥೆಯ ಸಂಶೋಧನಾ ವಿಜ್ಞಾನಿ ಪವಿತ್ರಾ ನಾಯಕ್ ಮಾತನಾಡಿ, ಕಾರ್ಯನೀತಿ, ಕಾರ್ಯತಂತ್ರಗಳು, ವಿವಿಧ ಇಲಾಖೆಗಳ ಪಾತ್ರ ಹಾಗೂ ಅಲ್ಪಾವಧಿಯ ಹವಾಮಾನ ಮಾಲಿನ್ಯಕಾರಕಗಳ ಪರಿಣಾಮಗಳು ಮತ್ತು ಜಿಲ್ಲಾಸ್ಥರದ ದತ್ತಾಂಶಗಳ ಕುರಿತು ಸಮಗ್ರ ಮಾಹಿತಿ ನೀಡಿದರು.</p>.<p>ಜಲ ಸಂಪನ್ಮೂಲ ವಲಯಕ್ಕೆ ಸಂಬಂಧಿಸಿದ ಹವಾಮಾನ ಕ್ರಿಯಾ ಯೋಜನೆ ಕುರಿತು ಜಲ ಸಂಪನ್ಮೂಲ ತಜ್ಞ ಶಶಿಕುಮಾರ್ ಎನ್ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಎನ್ ಎನ್.ಆರ್.ಡಿ.ಎಂ.ಎಸ್ ಅಧಿಕಾರಿ ಚಂದ್ರಶೇಖರ ಉಪಸ್ಥಿತರಿದ್ದರು.</p>.<p>46 ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ–ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಣ ಸಂಸ್ಥೆಗಳ ಸದಸ್ಯರು ಹಾಗೂ ಇತರೆ ಪಾಲುದಾರರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-19-459615647</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>