<p><strong>ಬಾಗಲಕೋಟೆ:</strong> ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ವೇಳೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಪಟ್ಟಣ ಪಂಚಾಯಿತಿಯ ಇಬ್ಬರು ಸದಸ್ಯರು ಮತ್ತು ಮುಖಂಡರೊಬ್ಬರನ್ನು ಆರು ವರ್ಷ ಉಚ್ಚಾಟಿಸುವಂತೆ ಶಿಫಾರಸು ಮಾಡಿರುವುದು ಉಳಿದ ನಾಯಕರ ಎದೆಬಡಿತ ಹೆಚ್ಚಿಸಿದೆ.</p>.<p>ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕೆಲವರ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಬೆನ್ನಲ್ಲೇ ಬಾಗಲಕೋಟೆಯ ನಾಯಕರಿಗೆ ತಳಮಳ ಉಂಟು ಮಾಡಿದೆ.</p>.<p>‘ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಆರೋಪದ ಮೇಲೆ ಕಮತಗಿ ಪಟ್ಟಣ ಪಂಚಾಯಿತಿ ಸದಸ್ಯರಾದ ರಮೇಶ ಜಮಖಂಡಿ, ಗುರುಲಿಂಗಪ್ಪ ಪಾಟೀಲ ಹಾಗೂ ಬಾಗಲಕೋಟೆ ಕೇಂದ್ರ ಸಹಕಾರಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ ಅವರನ್ನು ಆರು ವರ್ಷ ಉಚ್ಚಾಟಿಸಬೇಕು. ಪಕ್ಷದ ಅಭ್ಯರ್ಥಿ ಉಮೇಶ ಪರವಾಗಿ ಈ ಮೂವರು ಕೆಲಸ ಮಾಡಿಲ್ಲ’ ಎಂದು ಆರೋಪಿಸಿ ಬಾಗಲಕೋಟೆ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಎನ್. ರಾಂಪುರ ಅವರು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಅವರಿಗೆ ಪತ್ರ ಬರೆದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರಿಗೂ ದೂರು ನೀಡಲಾಗಿದೆ.</p>.<p>‘ಉಪಚುನಾವಣೆ ಸಂದರ್ಭದಲ್ಲಿ ಕೆಲ ಶಾಸಕರು, ಮುಖಂಡರು ಪಕ್ಷ ವಹಿಸಿದ ಕೆಲಸವನ್ನು ಸರಿಯಾಗಿ ಮಾಡಿಲ್ಲ’ ಎಂದು ಕೆಲವರು ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮೌಖಿಕವಾಗಿ ದೂರಿದ್ದಾರೆ ಎಂದು ತಿಳಿದುಬಂದಿದೆ.</p>.<p>ಕೆಲ ಮುಖಂಡರು, ಶಾಸಕರು ಮತ್ತು ಸಚಿವರಿಗೆ ನಿರ್ದಿಷ್ಟ ವಾರ್ಡ್ ಹಾಗೂ ಗ್ರಾಮಗಳ ಹಂಚಿಕೆ ಮಾಡಲಾಗಿತ್ತು. ಅಲ್ಲಿ ಪ್ರಚಾರ ಮಾಡುವ ಹೊಣೆಗಾರಿಕೆ ನೀಡಲಾಗಿತ್ತು. ಕೆಲವರು ಪೂರ್ಣಪ್ರಮಾಣದಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಂಡಿಲ್ಲ ಎಂದು ದೂರಲಾಗಿದೆ.</p>.<p>ಪ್ರಚಾರ ಮತ್ತಿತತರ ಕಾರ್ಯಗಳಿಗೆ ನೀಡಲಾಗಿದ್ದ ಹಣವನ್ನು ಕೆಲವರು ಸರಿಯಾಗಿ ಹಂಚಿಕೆ ಮಾಡಿಲ್ಲ ಎಂಬ ದೂರು ಕೇಳಿಬಂದಿದೆ. ಮತದಾನ ದಿನದಂದು ಮಧ್ಯಾಹ್ನ ಮತಗಟ್ಟೆ ಬಳಿ ಕಾಂಗ್ರೆಸ್ ಮುಖಂಡ ಜಾಫರ್ ಬೇಪಾರಿ ಅವರು ಹಣ ಹಂಚುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅವರ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಪ್ರಕರಣ ದಾಖಲಾಗಿದೆ.</p>.<div><blockquote>ಪಟ್ಟಣ ಪಂಚಾಯಿತಿ ಸದಸ್ಯರ ಪಕ್ಷ ವಿರೋಧಿ ಚಟುವಟಿಕೆ ಕುರಿತು ದೂರು ಬಂದಿದೆ. ಅವರಿಗೆ ನೋಟಿಸ್ ನೀಡಿ, ಮುಂದಿನ ಕ್ರಮಕೈಗೊಳ್ಳಲಾಗುವುದು </blockquote><span class="attribution">ಎಸ್.ಜಿ. ನಂಜಯ್ಯನಮಠ, ಅಧ್ಯಕ್ಷ, ಜಿಲ್ಲಾ ಘಟಕ, ಕಾಂಗ್ರೆಸ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ವೇಳೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಪಟ್ಟಣ ಪಂಚಾಯಿತಿಯ ಇಬ್ಬರು ಸದಸ್ಯರು ಮತ್ತು ಮುಖಂಡರೊಬ್ಬರನ್ನು ಆರು ವರ್ಷ ಉಚ್ಚಾಟಿಸುವಂತೆ ಶಿಫಾರಸು ಮಾಡಿರುವುದು ಉಳಿದ ನಾಯಕರ ಎದೆಬಡಿತ ಹೆಚ್ಚಿಸಿದೆ.</p>.<p>ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕೆಲವರ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಬೆನ್ನಲ್ಲೇ ಬಾಗಲಕೋಟೆಯ ನಾಯಕರಿಗೆ ತಳಮಳ ಉಂಟು ಮಾಡಿದೆ.</p>.<p>‘ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಆರೋಪದ ಮೇಲೆ ಕಮತಗಿ ಪಟ್ಟಣ ಪಂಚಾಯಿತಿ ಸದಸ್ಯರಾದ ರಮೇಶ ಜಮಖಂಡಿ, ಗುರುಲಿಂಗಪ್ಪ ಪಾಟೀಲ ಹಾಗೂ ಬಾಗಲಕೋಟೆ ಕೇಂದ್ರ ಸಹಕಾರಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ ಅವರನ್ನು ಆರು ವರ್ಷ ಉಚ್ಚಾಟಿಸಬೇಕು. ಪಕ್ಷದ ಅಭ್ಯರ್ಥಿ ಉಮೇಶ ಪರವಾಗಿ ಈ ಮೂವರು ಕೆಲಸ ಮಾಡಿಲ್ಲ’ ಎಂದು ಆರೋಪಿಸಿ ಬಾಗಲಕೋಟೆ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಎನ್. ರಾಂಪುರ ಅವರು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಅವರಿಗೆ ಪತ್ರ ಬರೆದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರಿಗೂ ದೂರು ನೀಡಲಾಗಿದೆ.</p>.<p>‘ಉಪಚುನಾವಣೆ ಸಂದರ್ಭದಲ್ಲಿ ಕೆಲ ಶಾಸಕರು, ಮುಖಂಡರು ಪಕ್ಷ ವಹಿಸಿದ ಕೆಲಸವನ್ನು ಸರಿಯಾಗಿ ಮಾಡಿಲ್ಲ’ ಎಂದು ಕೆಲವರು ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮೌಖಿಕವಾಗಿ ದೂರಿದ್ದಾರೆ ಎಂದು ತಿಳಿದುಬಂದಿದೆ.</p>.<p>ಕೆಲ ಮುಖಂಡರು, ಶಾಸಕರು ಮತ್ತು ಸಚಿವರಿಗೆ ನಿರ್ದಿಷ್ಟ ವಾರ್ಡ್ ಹಾಗೂ ಗ್ರಾಮಗಳ ಹಂಚಿಕೆ ಮಾಡಲಾಗಿತ್ತು. ಅಲ್ಲಿ ಪ್ರಚಾರ ಮಾಡುವ ಹೊಣೆಗಾರಿಕೆ ನೀಡಲಾಗಿತ್ತು. ಕೆಲವರು ಪೂರ್ಣಪ್ರಮಾಣದಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಂಡಿಲ್ಲ ಎಂದು ದೂರಲಾಗಿದೆ.</p>.<p>ಪ್ರಚಾರ ಮತ್ತಿತತರ ಕಾರ್ಯಗಳಿಗೆ ನೀಡಲಾಗಿದ್ದ ಹಣವನ್ನು ಕೆಲವರು ಸರಿಯಾಗಿ ಹಂಚಿಕೆ ಮಾಡಿಲ್ಲ ಎಂಬ ದೂರು ಕೇಳಿಬಂದಿದೆ. ಮತದಾನ ದಿನದಂದು ಮಧ್ಯಾಹ್ನ ಮತಗಟ್ಟೆ ಬಳಿ ಕಾಂಗ್ರೆಸ್ ಮುಖಂಡ ಜಾಫರ್ ಬೇಪಾರಿ ಅವರು ಹಣ ಹಂಚುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅವರ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಪ್ರಕರಣ ದಾಖಲಾಗಿದೆ.</p>.<div><blockquote>ಪಟ್ಟಣ ಪಂಚಾಯಿತಿ ಸದಸ್ಯರ ಪಕ್ಷ ವಿರೋಧಿ ಚಟುವಟಿಕೆ ಕುರಿತು ದೂರು ಬಂದಿದೆ. ಅವರಿಗೆ ನೋಟಿಸ್ ನೀಡಿ, ಮುಂದಿನ ಕ್ರಮಕೈಗೊಳ್ಳಲಾಗುವುದು </blockquote><span class="attribution">ಎಸ್.ಜಿ. ನಂಜಯ್ಯನಮಠ, ಅಧ್ಯಕ್ಷ, ಜಿಲ್ಲಾ ಘಟಕ, ಕಾಂಗ್ರೆಸ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>