<p><strong>ಬಾಗಲಕೋಟೆ:</strong> ಗೋವುಗಳನ್ನು ಅಕ್ರಮವಾಗಿ ಸಾಗಾಟ ಮತ್ತು ವಧೆ ನಡೆಯುತ್ತಿದ್ದು, ಇದನ್ನು ತಡೆಯಬೇಕು ಎಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರಾದ ಕುಮಾರಸ್ವಾಮಿ, ಯಂಕಣ್ಣ ಕಳ್ಳಿಗುದ್ದಿ, ‘ಬಕ್ರೀದ್ ಹಿನ್ನೆಲೆಯಲ್ಲಿ ಗೋವುಗಳ ಸಾಗಾಟ ಹೆಚ್ಚಾಗಿದೆ. ಈಗಾಗಲೇ ಕಸಾಯಿಖಾನೆಗಳ ಪಟ್ಟಿಯನ್ನು ನೀಡಲಾಗಿದೆ. ಪರಿಶೀಲಿಸಿ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಬಾದಾಮಿ, ಲೋಕಾಪುರ, ಇಳಕಲ್, ಜಮಖಂಡಿ, ಕೆರೂರ ಸೇರಿದಂತೆ ಬಹಳಷ್ಟು ಕಡೆಗಳಲ್ಲಿ ಗೋವುಗಳ ವಧೆ ಮಾಡಲಾಗುತ್ತಿದೆ. ಗೋಹತ್ಯೆ ಕಾಯಿದೆ ಜಾರಿಯಲ್ಲಿದೆಯೋ, ಇಲ್ಲವೋ ಎಂಬ ಅನುಮಾನ ಮೂಡುವ ಪರಿಸ್ಥಿತಿ ಎದುರಾಗಿದೆ’ ಎಂದರು.</p>.<p>‘2023ರಲ್ಲಿ ಗೋಹತ್ಯೆ ಕಾಯಿದೆ ಜಾರಿಯಾದ ಮೇಲೆ ಎಷ್ಟು ಪ್ರಕರಣಗಳು ದಾಖಲಾಗಿವೆ. ಗೋಹತ್ಯೆ ಮಾಡಿದರೆ ಏನು ಶಿಕ್ಷೆಯಾಗುತ್ತದೆ ಎಂಬ ಬಗ್ಗೆ ಜಾಗೃತಿ ಮೂಡಿಸಬೇಕು. ಕ್ರಮಕೈಗೊಳ್ಳದಿದ್ದರೆ, ತಡೆಯುವ ಕೆಲಸವನ್ನು ಮಾಡಬೇಕಾಗುತ್ತದೆ. ಆಗ ಆಗುವ ಅನಾಹುತಕ್ಕೆ ಇಲಾಖೆಯೇ ಕಾರಣವಾಗಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಅರುಣ ಕಟ್ಟಿಮನಿ, ನಾಗರಾಜ ಅಂಬಿಗೇರ, ಕೃಷ್ಣಾ ಅಸರಟ್ಟಿ ಇದ್ದರು.</p>.<p>ಗಿರೀಶ ಫೌಂಡೇಷನ್ ಮನವಿ: ಗೋ ಹತ್ಯೆಯಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗುತ್ತಿದೆ. ಗೋವು ಹತ್ಯೆ ತಡೆಯಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಅವರಿಗೆ ಫೌಂಡೇಷನ್ ವತಿಯಿಂದ ಮನವಿ ಸಲ್ಲಿಸಲಾಯಿತು.</p>.<p>ಗೋಹತ್ಯೆ ನಡೆಯುತ್ತಿರುವ ಕುರಿತು ಹಲವು ಬಾರಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದರೂ ಪರಿಣಾಮಕಾರಿಯಾದ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ವಿಶೇಷ ನಿಗಾವಹಿಸಿ ಅಕ್ರಮ ಗೋ ಹತ್ಯೆ ತಡಬೇಕು ಎಂದು ಕೋರಲಾಯಿತು.</p>.<p>ಇಂತಹ ಕಾನೂನುಬಾಹಿರ ಚಟುವಟಿಕೆಗಳು ಜಿಲ್ಲೆಯ ಕಾನೂನು ಸುವ್ಯವಸ್ಥೆಗೆ ಸವಾಲಾಗುವುದರ ಜೊತೆಗೆ ಕೋಮು ಸೌಹಾರ್ದ ಭಂಗವಾಗುವ ಪರಿಸ್ಥಿತಿ ನಿರ್ಮಾಣ ಆಗುವ ಸಾಧ್ಯತೆ ಇದೆ. ಹಿಂದೂ ಸಮಾಜದ ಧಾರ್ಮಿಕ ಭಾವನೆಗಳ ರಕ್ಷಣೆಯ ಹಿತದೃಷ್ಟಿಯಿಂದ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.</p>.<p>ಗಿರೀಶ ಭಾಂಡಗೆ, ಸಂತೋಷ ಜೋಶಿ, ಚಂದ್ರು ರಾಮೋಡಗಿ, ಶಂಕರ ಗಲಗ, ರಾಜು ಶಿಂತ್ರೆ, ಭೀಮಶಿ ಮೊರೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-19-1963070965</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಗೋವುಗಳನ್ನು ಅಕ್ರಮವಾಗಿ ಸಾಗಾಟ ಮತ್ತು ವಧೆ ನಡೆಯುತ್ತಿದ್ದು, ಇದನ್ನು ತಡೆಯಬೇಕು ಎಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರಾದ ಕುಮಾರಸ್ವಾಮಿ, ಯಂಕಣ್ಣ ಕಳ್ಳಿಗುದ್ದಿ, ‘ಬಕ್ರೀದ್ ಹಿನ್ನೆಲೆಯಲ್ಲಿ ಗೋವುಗಳ ಸಾಗಾಟ ಹೆಚ್ಚಾಗಿದೆ. ಈಗಾಗಲೇ ಕಸಾಯಿಖಾನೆಗಳ ಪಟ್ಟಿಯನ್ನು ನೀಡಲಾಗಿದೆ. ಪರಿಶೀಲಿಸಿ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಬಾದಾಮಿ, ಲೋಕಾಪುರ, ಇಳಕಲ್, ಜಮಖಂಡಿ, ಕೆರೂರ ಸೇರಿದಂತೆ ಬಹಳಷ್ಟು ಕಡೆಗಳಲ್ಲಿ ಗೋವುಗಳ ವಧೆ ಮಾಡಲಾಗುತ್ತಿದೆ. ಗೋಹತ್ಯೆ ಕಾಯಿದೆ ಜಾರಿಯಲ್ಲಿದೆಯೋ, ಇಲ್ಲವೋ ಎಂಬ ಅನುಮಾನ ಮೂಡುವ ಪರಿಸ್ಥಿತಿ ಎದುರಾಗಿದೆ’ ಎಂದರು.</p>.<p>‘2023ರಲ್ಲಿ ಗೋಹತ್ಯೆ ಕಾಯಿದೆ ಜಾರಿಯಾದ ಮೇಲೆ ಎಷ್ಟು ಪ್ರಕರಣಗಳು ದಾಖಲಾಗಿವೆ. ಗೋಹತ್ಯೆ ಮಾಡಿದರೆ ಏನು ಶಿಕ್ಷೆಯಾಗುತ್ತದೆ ಎಂಬ ಬಗ್ಗೆ ಜಾಗೃತಿ ಮೂಡಿಸಬೇಕು. ಕ್ರಮಕೈಗೊಳ್ಳದಿದ್ದರೆ, ತಡೆಯುವ ಕೆಲಸವನ್ನು ಮಾಡಬೇಕಾಗುತ್ತದೆ. ಆಗ ಆಗುವ ಅನಾಹುತಕ್ಕೆ ಇಲಾಖೆಯೇ ಕಾರಣವಾಗಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಅರುಣ ಕಟ್ಟಿಮನಿ, ನಾಗರಾಜ ಅಂಬಿಗೇರ, ಕೃಷ್ಣಾ ಅಸರಟ್ಟಿ ಇದ್ದರು.</p>.<p>ಗಿರೀಶ ಫೌಂಡೇಷನ್ ಮನವಿ: ಗೋ ಹತ್ಯೆಯಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗುತ್ತಿದೆ. ಗೋವು ಹತ್ಯೆ ತಡೆಯಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಅವರಿಗೆ ಫೌಂಡೇಷನ್ ವತಿಯಿಂದ ಮನವಿ ಸಲ್ಲಿಸಲಾಯಿತು.</p>.<p>ಗೋಹತ್ಯೆ ನಡೆಯುತ್ತಿರುವ ಕುರಿತು ಹಲವು ಬಾರಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದರೂ ಪರಿಣಾಮಕಾರಿಯಾದ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ವಿಶೇಷ ನಿಗಾವಹಿಸಿ ಅಕ್ರಮ ಗೋ ಹತ್ಯೆ ತಡಬೇಕು ಎಂದು ಕೋರಲಾಯಿತು.</p>.<p>ಇಂತಹ ಕಾನೂನುಬಾಹಿರ ಚಟುವಟಿಕೆಗಳು ಜಿಲ್ಲೆಯ ಕಾನೂನು ಸುವ್ಯವಸ್ಥೆಗೆ ಸವಾಲಾಗುವುದರ ಜೊತೆಗೆ ಕೋಮು ಸೌಹಾರ್ದ ಭಂಗವಾಗುವ ಪರಿಸ್ಥಿತಿ ನಿರ್ಮಾಣ ಆಗುವ ಸಾಧ್ಯತೆ ಇದೆ. ಹಿಂದೂ ಸಮಾಜದ ಧಾರ್ಮಿಕ ಭಾವನೆಗಳ ರಕ್ಷಣೆಯ ಹಿತದೃಷ್ಟಿಯಿಂದ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.</p>.<p>ಗಿರೀಶ ಭಾಂಡಗೆ, ಸಂತೋಷ ಜೋಶಿ, ಚಂದ್ರು ರಾಮೋಡಗಿ, ಶಂಕರ ಗಲಗ, ರಾಜು ಶಿಂತ್ರೆ, ಭೀಮಶಿ ಮೊರೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-19-1963070965</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>