<p><strong>ಬಾಗಲಕೋಟೆ</strong>: ‘ಕಳ್ಳಬಟ್ಟಿ ತಯಾರಿ, ಸಾಗಾಟ ಮತ್ತು ಮಾರಾಟವನ್ನು ಸಂಪೂರ್ಣವಾಗಿ ತಡೆಗಟ್ಟಲು ಪರಿಣಾಮಕಾರಿಯಾಗಿ ತನಿಖಾ ಕಾರ್ಯ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ಸಂಗಪ್ಪ, ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕಳ್ಳಬಟ್ಟಿ ನಿರ್ಮೂಲನೆ ಕುರಿತು ರಚಿಸಲಾದ ಜಿಲ್ಲಾಮಟ್ಟದ ಸ್ಥಾಯಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಕಳ್ಳಬಟ್ಟಿ ನಿರ್ಮೂಲನೆಗೆ ಸಂಬಂಧಪಟ್ಟ ಇಲಾಖೆಗಳ ಜಂಟಿ ಸಹಭಾಗಿತ್ವದಲ್ಲಿ ಕಾರ್ಯಾಚರಣೆ, ಅರಿವು ಕಾರ್ಯಕ್ರಮ ಆಯೋಜಿಸಬೇಕು’ ಎಂದರು.</p>.<p>‘ಗ್ರಾಮ ಮಟ್ಟದಲ್ಲಿ ಅನುಮಾನಾಸ್ಪದ ಕಳ್ಳಿಬಟ್ಟಿ ಚಟುವಟಿಕೆಗಳ ಬಗ್ಗೆ ತಕ್ಷಣ ಮಾಹಿತಿ ಸಂಗ್ರಹಿಸುವ ಕೆಲಸ ಆಗಬೇಕು.<br> ಕಳ್ಳಬಟ್ಟಿ ಸೇವನೆಯಿಂದ ಜನರ ಆರೋಗ್ಯಕ್ಕೆ ಗಂಭೀರ ಹಾನಿಯಾಗುತ್ತಿದ್ದು, ಇಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು’ ಎಂದು ಹೇಳಿದರು.</p>.<p>‘ಸಾರ್ವಜನಿಕರೂ ಸಹ ಸಹಕರಿಸುವ ಮೂಲಕ ಮಾಹಿತಿ ನೀಡಲು ಮುಂದಾಗಬೇಕಿದೆ. ಅಕ್ರಮ ಚಟುವಟಿಕೆಗಳ ಬಗ್ಗೆ ನಿರಂತರ ಪರಿಶೀಲನೆ ನಡೆಸುವ ಕೆಲಸ ಆಗಬೇಕು ಅಂದಾಗ ಮಾತ್ರ ಕಳ್ಳಬಟ್ಟಿ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ‘ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಮತ್ತು ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಕಳ್ಳಬಟ್ಟಿ ಸೇವನೆಯ ದುಷ್ಪಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು’ ಎಂದರು.</p>.<p>ಅಬಕಾರಿ ಉಪಆಯುಕ್ತ ತಿಪ್ಪೆಸ್ವಾಮಿ ಡಿ.ಎನ್. ಮಾತನಾಡಿ, ‘ಪ್ರಸಕ್ತ ಆರ್ಥಿಕ ವರ್ಷದ 2025ರ ಏಪ್ರಿಲ್ನಿಂದ ಜನವರಿವರೆಗೆ 1,341 ಕಳ್ಳಬಟ್ಟಿಗಳ ಮೇಲೆ ದಾಳಿ ನಡೆಸಿದ್ದು, 110 ಪ್ರಕರಣಗಳನ್ನು ದಾಖಲಿಸುವ ಮೂಲಕ 110 ಜನ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ತಿಳಿಸಿದರು.</p>.<p>‘799 ಲೀಟರ್ ಕಳ್ಳಬಟ್ಟಿ ಸಾರಾಯಿ, 1,086 ಕೆಜಿ ಬೆಲ್ಲದ ಕೊಳೆ ಜೊತೆಗೆ ಆಟೊ, ಒಂದು ಬೈಸಿಕಲ್ ವಶಕ್ಕೆ ಪಡೆಯಲಾಗಿದೆ. ಆರು ಪ್ರಕರಣಗಳಲ್ಲಿ 11 ಜನ ಆರೋಪಿಗಳಿಗೆ ಶಿಕ್ಷೆ ಹಾಗೂ ದಂಡವನ್ನು ನ್ಯಾಯಾಲಯ ವಿಧಿಸಿದೆ. ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ಇಲ್ಲಿಯವರೆಗೆ 2.199 ಕೆಜಿ ಗಾಂಜಾ, 11 ಹಸಿ ಗಾಂಜಾ ಗಿಡಗಳು, ದ್ವಿಚಕ್ರ ವಾಹನ, ಮೊಬೈಲ್ ಜೊತೆಗೆ ಏಳು ಜನ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಅಹಿರೆ, ಅಬಕಾರಿ ಅಧೀಕ್ಷಕ ಹನಮಪ್ಪ ಭಜಂತ್ರಿ, ಆರೋಗ್ಯ ಇಲಾಖೆಯ ಶಿವನಗೌಡ ಪಾಟೀಲ ಇದ್ದರು.</p>
<p><strong>ಬಾಗಲಕೋಟೆ</strong>: ‘ಕಳ್ಳಬಟ್ಟಿ ತಯಾರಿ, ಸಾಗಾಟ ಮತ್ತು ಮಾರಾಟವನ್ನು ಸಂಪೂರ್ಣವಾಗಿ ತಡೆಗಟ್ಟಲು ಪರಿಣಾಮಕಾರಿಯಾಗಿ ತನಿಖಾ ಕಾರ್ಯ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ಸಂಗಪ್ಪ, ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕಳ್ಳಬಟ್ಟಿ ನಿರ್ಮೂಲನೆ ಕುರಿತು ರಚಿಸಲಾದ ಜಿಲ್ಲಾಮಟ್ಟದ ಸ್ಥಾಯಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಕಳ್ಳಬಟ್ಟಿ ನಿರ್ಮೂಲನೆಗೆ ಸಂಬಂಧಪಟ್ಟ ಇಲಾಖೆಗಳ ಜಂಟಿ ಸಹಭಾಗಿತ್ವದಲ್ಲಿ ಕಾರ್ಯಾಚರಣೆ, ಅರಿವು ಕಾರ್ಯಕ್ರಮ ಆಯೋಜಿಸಬೇಕು’ ಎಂದರು.</p>.<p>‘ಗ್ರಾಮ ಮಟ್ಟದಲ್ಲಿ ಅನುಮಾನಾಸ್ಪದ ಕಳ್ಳಿಬಟ್ಟಿ ಚಟುವಟಿಕೆಗಳ ಬಗ್ಗೆ ತಕ್ಷಣ ಮಾಹಿತಿ ಸಂಗ್ರಹಿಸುವ ಕೆಲಸ ಆಗಬೇಕು.<br> ಕಳ್ಳಬಟ್ಟಿ ಸೇವನೆಯಿಂದ ಜನರ ಆರೋಗ್ಯಕ್ಕೆ ಗಂಭೀರ ಹಾನಿಯಾಗುತ್ತಿದ್ದು, ಇಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು’ ಎಂದು ಹೇಳಿದರು.</p>.<p>‘ಸಾರ್ವಜನಿಕರೂ ಸಹ ಸಹಕರಿಸುವ ಮೂಲಕ ಮಾಹಿತಿ ನೀಡಲು ಮುಂದಾಗಬೇಕಿದೆ. ಅಕ್ರಮ ಚಟುವಟಿಕೆಗಳ ಬಗ್ಗೆ ನಿರಂತರ ಪರಿಶೀಲನೆ ನಡೆಸುವ ಕೆಲಸ ಆಗಬೇಕು ಅಂದಾಗ ಮಾತ್ರ ಕಳ್ಳಬಟ್ಟಿ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ‘ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಮತ್ತು ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಕಳ್ಳಬಟ್ಟಿ ಸೇವನೆಯ ದುಷ್ಪಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು’ ಎಂದರು.</p>.<p>ಅಬಕಾರಿ ಉಪಆಯುಕ್ತ ತಿಪ್ಪೆಸ್ವಾಮಿ ಡಿ.ಎನ್. ಮಾತನಾಡಿ, ‘ಪ್ರಸಕ್ತ ಆರ್ಥಿಕ ವರ್ಷದ 2025ರ ಏಪ್ರಿಲ್ನಿಂದ ಜನವರಿವರೆಗೆ 1,341 ಕಳ್ಳಬಟ್ಟಿಗಳ ಮೇಲೆ ದಾಳಿ ನಡೆಸಿದ್ದು, 110 ಪ್ರಕರಣಗಳನ್ನು ದಾಖಲಿಸುವ ಮೂಲಕ 110 ಜನ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ತಿಳಿಸಿದರು.</p>.<p>‘799 ಲೀಟರ್ ಕಳ್ಳಬಟ್ಟಿ ಸಾರಾಯಿ, 1,086 ಕೆಜಿ ಬೆಲ್ಲದ ಕೊಳೆ ಜೊತೆಗೆ ಆಟೊ, ಒಂದು ಬೈಸಿಕಲ್ ವಶಕ್ಕೆ ಪಡೆಯಲಾಗಿದೆ. ಆರು ಪ್ರಕರಣಗಳಲ್ಲಿ 11 ಜನ ಆರೋಪಿಗಳಿಗೆ ಶಿಕ್ಷೆ ಹಾಗೂ ದಂಡವನ್ನು ನ್ಯಾಯಾಲಯ ವಿಧಿಸಿದೆ. ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ಇಲ್ಲಿಯವರೆಗೆ 2.199 ಕೆಜಿ ಗಾಂಜಾ, 11 ಹಸಿ ಗಾಂಜಾ ಗಿಡಗಳು, ದ್ವಿಚಕ್ರ ವಾಹನ, ಮೊಬೈಲ್ ಜೊತೆಗೆ ಏಳು ಜನ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಅಹಿರೆ, ಅಬಕಾರಿ ಅಧೀಕ್ಷಕ ಹನಮಪ್ಪ ಭಜಂತ್ರಿ, ಆರೋಗ್ಯ ಇಲಾಖೆಯ ಶಿವನಗೌಡ ಪಾಟೀಲ ಇದ್ದರು.</p>