<p>ಬಾಗಲಕೋಟೆ: ‘ಬೇಸಿಗೆಯ ಕಾಲ ಪ್ರಾರಂಭವಾಗಿದ್ದು, ಮುಂದಿನ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಶಶಿಧರ ಕುರೇರ ಸೂಚಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಆಡಳಿತಾಧಿಕಾರಿಗಳೊಂದಿಗೆ ಕುಡಿಯುವ ನೀರು ಸರಬರಾಜು ಕುರಿತು ವಿಡಿಯೊ ಸಂವಾದ ನಡೆಸಿದ ಅವರು, ‘ಯಾವ, ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ತಿಳಿದುಕೊಂಡು ಪರಿಹಾರ ಕಂಡುಕೊಳ್ಳಬೇಕು’ ಎಂದರು.</p>.<p>‘ಸಾರ್ವಜನಿಕರಿಂದ ದೂರುಗಳು ಬರದಂತೆ ನೋಡಿಕೊಳ್ಳಬೇಕು. ಒಂದು ವೇಳೆ ದೂರು ಬಂದರೂ 24 ಗಂಟೆಯೊಳಗೆ ಸಮಸ್ಯೆ ಬಗೆಹರಿಸಬೇಕು. ಪಂಚಾಯಿತಿಯ ಕೊಳವೆಬಾವಿ ನೀರು ಬಳಕೆಗೆ ಯೋಗ್ಯವಲ್ಲ ಎಂದು ಕಂಡು ಬಂದಲ್ಲಿ ಖಾಸಗಿ ಕೊಳವೆಬಾವಿಗಳಿಂದ ನೀರು ಪಡೆದು, ಸರಬರಾಜು ಮಾಡಬೇಕು’ ಎಂದು ಸೂಚಿಸಿದರು.</p>.<p>‘ಒವರ್ ಹೆಡ್ ಟ್ಯಾಂಕ್ಗಳು ಶಿಥಿಲಗೊಂಡಿದ್ದರೆ, ದುರಸ್ತಿ ಮಾಡಿಸಿಕೊಡಲಾಗುವುದು. ಹೊಸ ಕೊಳವೆಬಾವಿಗಳನ್ನು ಕೊರೆಯಲು ಅವಕಾಶವಿರುವುದಿಲ್ಲ. ಕೇವಲ ಬೇಸಿಗೆ ಸಮಸ್ಯೆಗಾಗಿ ಹೊಸ ಕೊಳವೆಬಾವಿ ಕೊರೆಯಿಸುವ ಕಾರ್ಯ ಸೂಕ್ತವಲ್ಲ’ ಎಂದರು.</p>.<p>‘ಗ್ರಾಮಗಳಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸುಸ್ಥಿಯಲ್ಲಿದ್ದು, ಜನಬಳಕೆಗೆ ಸದಾಕಾಲ ದೊರೆಯುವಂತೆ ಅಗತ್ಯ ಕ್ರಮವಹಿಸಿರಿ. ಗ್ರಾಮಗಳಲ್ಲಿನ ಎಲ್ಲ ಜಲಮೂಲಗಳ ಸುತ್ತಲಿನ ಪ್ರದೇಶದಲ್ಲಿ ಇರಬಹುದಾದ ತ್ಯಾಜ್ಯ ಹಾಗೂ ಚರಂಡಿ ನೀರನ್ನು ಸರಿಯಾಗಿ ಹೋಗುವಂತೆ ಮಾಡಿ ಕುಡಿಯುವ ನೀರು ಕಲುಷಿತಗೊಳ್ಳದಂತೆ ಕ್ರಮಕೈಗೊಳ್ಳಬೇಕು’ ಎಂದು ಹೇಳಿದರು.</p>.<p>‘ಬಹುಗ್ರಾಮ ನೀರು ಸರಬರಾಜು ಮಾಡುವ ಒವರ್ ಹೆಡ್ ಟ್ಯಾಂಕ್ ಗಳನ್ನು ಕಾಲ, ಕಾಲಕ್ಕೆ ಸ್ವಚ್ಛಗೊಳಿಸಿ, ರೋಗಾಣು, ಬ್ಯಾಕ್ಟೀರಿಯಾ ಅಥವಾ ಫಂಗಸ್ ಸೇರದಂತೆ ನೋಡಿಕೊಳ್ಳಬೇಕು. ಜಲಸಂಗ್ರಹಾರಗಳನ್ನು ಸ್ವಚ್ಛಗೊಳಿಸಿ, ವೈಜ್ಞಾನಿಕ ರೀತಿಯಲ್ಲಿ ಕ್ಲೋರಿನೇಷನ್ ಮಾಡಿ ಸ್ವಚ್ಛಗೊಳಿಸಬೇಕು‘ ಎಂದರು.</p>.<p>ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎನ್.ವೈ. ಬಸರಿಗಿಡದ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿ ಆಕಾಶ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-19-18696291</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ‘ಬೇಸಿಗೆಯ ಕಾಲ ಪ್ರಾರಂಭವಾಗಿದ್ದು, ಮುಂದಿನ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಶಶಿಧರ ಕುರೇರ ಸೂಚಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಆಡಳಿತಾಧಿಕಾರಿಗಳೊಂದಿಗೆ ಕುಡಿಯುವ ನೀರು ಸರಬರಾಜು ಕುರಿತು ವಿಡಿಯೊ ಸಂವಾದ ನಡೆಸಿದ ಅವರು, ‘ಯಾವ, ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ತಿಳಿದುಕೊಂಡು ಪರಿಹಾರ ಕಂಡುಕೊಳ್ಳಬೇಕು’ ಎಂದರು.</p>.<p>‘ಸಾರ್ವಜನಿಕರಿಂದ ದೂರುಗಳು ಬರದಂತೆ ನೋಡಿಕೊಳ್ಳಬೇಕು. ಒಂದು ವೇಳೆ ದೂರು ಬಂದರೂ 24 ಗಂಟೆಯೊಳಗೆ ಸಮಸ್ಯೆ ಬಗೆಹರಿಸಬೇಕು. ಪಂಚಾಯಿತಿಯ ಕೊಳವೆಬಾವಿ ನೀರು ಬಳಕೆಗೆ ಯೋಗ್ಯವಲ್ಲ ಎಂದು ಕಂಡು ಬಂದಲ್ಲಿ ಖಾಸಗಿ ಕೊಳವೆಬಾವಿಗಳಿಂದ ನೀರು ಪಡೆದು, ಸರಬರಾಜು ಮಾಡಬೇಕು’ ಎಂದು ಸೂಚಿಸಿದರು.</p>.<p>‘ಒವರ್ ಹೆಡ್ ಟ್ಯಾಂಕ್ಗಳು ಶಿಥಿಲಗೊಂಡಿದ್ದರೆ, ದುರಸ್ತಿ ಮಾಡಿಸಿಕೊಡಲಾಗುವುದು. ಹೊಸ ಕೊಳವೆಬಾವಿಗಳನ್ನು ಕೊರೆಯಲು ಅವಕಾಶವಿರುವುದಿಲ್ಲ. ಕೇವಲ ಬೇಸಿಗೆ ಸಮಸ್ಯೆಗಾಗಿ ಹೊಸ ಕೊಳವೆಬಾವಿ ಕೊರೆಯಿಸುವ ಕಾರ್ಯ ಸೂಕ್ತವಲ್ಲ’ ಎಂದರು.</p>.<p>‘ಗ್ರಾಮಗಳಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸುಸ್ಥಿಯಲ್ಲಿದ್ದು, ಜನಬಳಕೆಗೆ ಸದಾಕಾಲ ದೊರೆಯುವಂತೆ ಅಗತ್ಯ ಕ್ರಮವಹಿಸಿರಿ. ಗ್ರಾಮಗಳಲ್ಲಿನ ಎಲ್ಲ ಜಲಮೂಲಗಳ ಸುತ್ತಲಿನ ಪ್ರದೇಶದಲ್ಲಿ ಇರಬಹುದಾದ ತ್ಯಾಜ್ಯ ಹಾಗೂ ಚರಂಡಿ ನೀರನ್ನು ಸರಿಯಾಗಿ ಹೋಗುವಂತೆ ಮಾಡಿ ಕುಡಿಯುವ ನೀರು ಕಲುಷಿತಗೊಳ್ಳದಂತೆ ಕ್ರಮಕೈಗೊಳ್ಳಬೇಕು’ ಎಂದು ಹೇಳಿದರು.</p>.<p>‘ಬಹುಗ್ರಾಮ ನೀರು ಸರಬರಾಜು ಮಾಡುವ ಒವರ್ ಹೆಡ್ ಟ್ಯಾಂಕ್ ಗಳನ್ನು ಕಾಲ, ಕಾಲಕ್ಕೆ ಸ್ವಚ್ಛಗೊಳಿಸಿ, ರೋಗಾಣು, ಬ್ಯಾಕ್ಟೀರಿಯಾ ಅಥವಾ ಫಂಗಸ್ ಸೇರದಂತೆ ನೋಡಿಕೊಳ್ಳಬೇಕು. ಜಲಸಂಗ್ರಹಾರಗಳನ್ನು ಸ್ವಚ್ಛಗೊಳಿಸಿ, ವೈಜ್ಞಾನಿಕ ರೀತಿಯಲ್ಲಿ ಕ್ಲೋರಿನೇಷನ್ ಮಾಡಿ ಸ್ವಚ್ಛಗೊಳಿಸಬೇಕು‘ ಎಂದರು.</p>.<p>ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎನ್.ವೈ. ಬಸರಿಗಿಡದ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿ ಆಕಾಶ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-19-18696291</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>