<p>ಬಾಗಲಕೋಟೆ: ಬಿಸಿಲಿನ ತಾಪ ಹೆಚ್ಚಿರುವ ಕಾರಣ ಜನರು ತಂಪು ಪಾನೀಯ, ಹಣ್ಣುಗಳನ್ನು ಸೇವಿಸಬೇಕು ಎಂದು ಸಮುದಾಯ ಆರೋಗ್ಯ ವಿಭಾಗದ ಡಾ.ಯಶೋದಾ ವಿ.ಡಿ ಹೇಳಿದರು.</p>.<p>ಬಿವಿವಿ ಸಂಘದ ಎಸ್ ನಿಜಲಿಂಗಪ್ಪ ವೈದ್ಯಕೀಯ ಕಾಲೇಜು, ಹಾನಗಲ್ ಕುಮಾರೇಶ್ವರ ಆಸ್ಪತ್ರೆ, ಶಿರೂರ ಸಮುದಾಯ ಆರೋಗ್ಯ ವಿಭಾಗ ಮತ್ತು ಶಿವಗಂಗಾ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದ ಸಹಯೋಗದಲ್ಲಿ ಬಿಸಿಲಿನ ತಾಪ ಹೆಚ್ಚುತಿರುವ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಡಾ.ವರ್ಧಮಾನ ಮಾತನಾಡಿ, ಅತಿಸಾರ ಭೇದಿಯಿಂದ ಬಳಲುವ ಸಾಧ್ಯತೆ ಹೆಚ್ಚಾಗಿರುತ್ತದೆ. ಕಾರಣ ಒಆರ್ಎಸ್ ಉಪಯೋಗಿಸಬೇಕು ಎಂದರು. ಉಪಯೋಗಿಸುವ ವಿಧಾನ ಕುರಿತು ಮಾಹಿತಿ ನೀಡಿದರು.</p>.<p>ಡಾ. ಪೂಜಾ ಕೊಪ್ಪ ಮಾತನಾಡಿ, ಬಿಸಿಲಿನ ತಾಪ ಹೆಚ್ಚಿರುವ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಕುರಿತು ತಿಳಿಸಿದರು. ಡಾ.ವೈಭವಿ ಮಾತನಾಡಿ, ಪ್ರತಿ ತಿಂಗಳು ಗ್ರಾಮೀಣ ರಾಷ್ಠ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮಗಳು ನಡೆಯುತಿರುತ್ತವೆ. ಜನತೆ ಲಾಭ ಪಡೆದುಕೊಳ್ಳಬೇಕು ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-19-1132168201</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ಬಿಸಿಲಿನ ತಾಪ ಹೆಚ್ಚಿರುವ ಕಾರಣ ಜನರು ತಂಪು ಪಾನೀಯ, ಹಣ್ಣುಗಳನ್ನು ಸೇವಿಸಬೇಕು ಎಂದು ಸಮುದಾಯ ಆರೋಗ್ಯ ವಿಭಾಗದ ಡಾ.ಯಶೋದಾ ವಿ.ಡಿ ಹೇಳಿದರು.</p>.<p>ಬಿವಿವಿ ಸಂಘದ ಎಸ್ ನಿಜಲಿಂಗಪ್ಪ ವೈದ್ಯಕೀಯ ಕಾಲೇಜು, ಹಾನಗಲ್ ಕುಮಾರೇಶ್ವರ ಆಸ್ಪತ್ರೆ, ಶಿರೂರ ಸಮುದಾಯ ಆರೋಗ್ಯ ವಿಭಾಗ ಮತ್ತು ಶಿವಗಂಗಾ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದ ಸಹಯೋಗದಲ್ಲಿ ಬಿಸಿಲಿನ ತಾಪ ಹೆಚ್ಚುತಿರುವ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಡಾ.ವರ್ಧಮಾನ ಮಾತನಾಡಿ, ಅತಿಸಾರ ಭೇದಿಯಿಂದ ಬಳಲುವ ಸಾಧ್ಯತೆ ಹೆಚ್ಚಾಗಿರುತ್ತದೆ. ಕಾರಣ ಒಆರ್ಎಸ್ ಉಪಯೋಗಿಸಬೇಕು ಎಂದರು. ಉಪಯೋಗಿಸುವ ವಿಧಾನ ಕುರಿತು ಮಾಹಿತಿ ನೀಡಿದರು.</p>.<p>ಡಾ. ಪೂಜಾ ಕೊಪ್ಪ ಮಾತನಾಡಿ, ಬಿಸಿಲಿನ ತಾಪ ಹೆಚ್ಚಿರುವ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಕುರಿತು ತಿಳಿಸಿದರು. ಡಾ.ವೈಭವಿ ಮಾತನಾಡಿ, ಪ್ರತಿ ತಿಂಗಳು ಗ್ರಾಮೀಣ ರಾಷ್ಠ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮಗಳು ನಡೆಯುತಿರುತ್ತವೆ. ಜನತೆ ಲಾಭ ಪಡೆದುಕೊಳ್ಳಬೇಕು ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-19-1132168201</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>