<p>ಬಾಗಲಕೋಟೆ: ಜಿಲ್ಲೆಯಲ್ಲಿ ಬಿಸಿಲಿನ ತಾಪ ಬಹಳ ಹೆಚ್ಚಾಗಿದೆ. ತಾಪದಿಂದ ತಪ್ಪಿಸಿಕೊಳ್ಳಲು ಅನುಕೂಲಸ್ಥರು ಎಸಿ (ಹವಾನಿಯಂತ್ರಿತ) ಹಾಗೂ ಉಳಿದವರು ಏರ್ ಕೂಲರ್ಗಳ ಮೊರೆ ಹೋಗುತ್ತಿದ್ದಾರೆ.</p>.<p>ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಅಂಗಡಿಗಳಲ್ಲಿ ಜನರು ಫ್ಯಾನ್, ಏರ್ ಕೂಲರ್ ಹಾಗೂ ಎಸಿಗಳ ಖರೀದಿ ಮಾಡುತ್ತಿರುವುದು ಹೆಚ್ಚಾಗಿದೆ.</p>.<p>ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದೆ. ಮನೆಯ ಒಳಗಡೆ, ಹೊರಗಡೆ ಬಿಸಿಯಾದ ಗಾಳಿ ಮುಖಕ್ಕೆ ಹೊಡೆಯುತ್ತಿದೆ. ಫ್ಯಾನ್ ಹಚ್ಚಿದರೂ ಸಮಾಧಾನವಾಗುತ್ತಿಲ್ಲ. ಪರಿಣಾಮ ತಂಪು ವಾತಾವರಣವುಂಟು ಮಾಡುವ ಕೂಲರ್, ಎಸಿ ಖರೀದಿಗೆ ಮುಂದಾಗಿದ್ದಾರೆ.</p>.<p>ಹೆಚ್ಚೂ ಕಡಿಮೆ ದಿನದ 24 ಗಂಟೆಗಳ ಕಾಲವೂ ಮನೆಯಲ್ಲಿ ಫ್ಯಾನ್, ಕೂಲರ್, ಎಸಿ ಗಳನ್ನು ಆನ್ನಲ್ಲಿಡಬೇಕಾಗಿದೆ. ಇಂತಹ ಬೇಸಿಗೆಯನ್ನು ಇತ್ತೀಚಿನ ವರ್ಷಗಳಲ್ಲಿ ನೋಡಿರಲಿಲ್ಲ ಎನ್ನುತ್ತಾರೆ ಜನ.</p>.<p>‘ಬಿಸಿಲಿನ ತಾಪಮಾನ ಹೆಚ್ಚಾದ ಮೇಲೆ ಜನರು ಏರ್ ಕೂಲರ್ಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿ ಮಾಡುತ್ತಿದ್ದಾರೆ. ಏ.1ರ ನಂತರ ಹೊಸ ತೆರಿಗೆ ಅನ್ವಯವಾದ ಮೇಲೆ ಕೂಲರ್ಗಳ ಬೆಲೆಯು ಶೇ 4 ರಿಂದ 8ರವರೆಗೆ ಹೆಚ್ಚಾಗಿದೆ’ ಎನ್ನುತ್ತಾರೆ ಲೈಟ್ ಹೌಸ್ನ ಮಾಲೀಕ ಅಭಿಷೇಕ ಪಾಟೀಲ.</p>.<p>ತಾಪಮಾನ ಹೆಚ್ಚಳದಿಂದ ಸಾರ್ವಜನಿಕರ ಆರೋಗ್ಯದ ಮೇಲೆ ವಿಶೇಷವಾಗಿ ಮಕ್ಕಳು, ವೃದ್ದರು ಮತ್ತು ಅನಾರೋಗ್ಯ ಪೀಡಿತರ ಮೇಲೆ ಗಂಭೀರ ಪರಿಣಾಮ ಬೀರಲಿದೆ.</p>.<p>ಬಿಸಿಲಿನಿಂದ ಉಂಟಾಗುವ ಬಳಲಿಕೆ, ನಿರ್ಜಲೀಕರಣ ತಡೆಗಟ್ಟಲು ಮತ್ತು ತಗ್ಗಿಸಲು ಭಾರತೀಯ ಹವಾಮಾನ ಇಲಾಖೆ ನೀಡಿದ ಸಲಹೆಗಳನ್ನು ಅನುಸರಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಮನವಿ ಮಾಡಿದ್ದಾರೆ.</p>.<p>ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ಗಂಟೆವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು. ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರು ಕುಡಿಯಬೇಕು. ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸಬೇಕು.</p>.<p>ಛತ್ರಿ, ಟೋಪಿ ಬಳಸಬೇಕು. ಈ ಅವಧಿಯಲ್ಲಿ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಬೇಕು. ಪ್ರಯಾಣ ಮಾಡುವಾಗ ನೀರನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೆಟೆಡ್ ತಂಪು ಪಾನೀಯಗಳನ್ನು ಕುಡಿಯುವುದು ನಿಲ್ಲಿಸಬೇಕು.</p>.<p>ಸಾಧ್ಯವಾದಷ್ಟು ಬಿಸಿ ಆಹಾರ ಸೇವಿಸುವುದರ ಜೊತೆಗೆ ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು, ಸಾಕುಪ್ರಾಣಿಗಳನ್ನು ಬಿಡಬಾರದು. ಅನಾರೋಗ್ಯ ಅನಿಸಿದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು. ನಿಂಬೆ ನೀರು, ಮಜ್ಜಿಗೆ ಮುಂತಾದ ಪಾನೀಯಗಳು ಮತ್ತು ಓಆರ್ಎಸ್ ಬಳಸಬೇಕು.</p>.<p>ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ತರಕಾರಿ ಸೊಪ್ಪು, ಎಳೆನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.</p>.<p>ಕಾಯಿಲೆಗೆ ಪ್ರಥಮ ಚಿಕಿತ್ಸೆ:ಹೆಚ್ಚು ತಾಪಮಾನಕ್ಕೆ ತುತ್ತಾದ ವ್ಯಕ್ತಿಯನ್ನು ನೆರಳಿನಡಿ ಕೂಡಿಸಿ ಒದ್ದೆ ಬಟ್ಟಿಯಿಂದ ಮೈ ಒರೆಸಬೇಕು. ದೇಹದ ಉಷ್ಣತೆ ತಗ್ಗಿಸಿ ತಲೆಯ ಮೇಲೆ ನೀರು ಹಾಕುವುದು. ಓಆರ್ಎಸ್, ನಿಂಬೆಪಾನಕ ನೀಡಬೇಕು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-19-1823923464</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ಜಿಲ್ಲೆಯಲ್ಲಿ ಬಿಸಿಲಿನ ತಾಪ ಬಹಳ ಹೆಚ್ಚಾಗಿದೆ. ತಾಪದಿಂದ ತಪ್ಪಿಸಿಕೊಳ್ಳಲು ಅನುಕೂಲಸ್ಥರು ಎಸಿ (ಹವಾನಿಯಂತ್ರಿತ) ಹಾಗೂ ಉಳಿದವರು ಏರ್ ಕೂಲರ್ಗಳ ಮೊರೆ ಹೋಗುತ್ತಿದ್ದಾರೆ.</p>.<p>ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಅಂಗಡಿಗಳಲ್ಲಿ ಜನರು ಫ್ಯಾನ್, ಏರ್ ಕೂಲರ್ ಹಾಗೂ ಎಸಿಗಳ ಖರೀದಿ ಮಾಡುತ್ತಿರುವುದು ಹೆಚ್ಚಾಗಿದೆ.</p>.<p>ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದೆ. ಮನೆಯ ಒಳಗಡೆ, ಹೊರಗಡೆ ಬಿಸಿಯಾದ ಗಾಳಿ ಮುಖಕ್ಕೆ ಹೊಡೆಯುತ್ತಿದೆ. ಫ್ಯಾನ್ ಹಚ್ಚಿದರೂ ಸಮಾಧಾನವಾಗುತ್ತಿಲ್ಲ. ಪರಿಣಾಮ ತಂಪು ವಾತಾವರಣವುಂಟು ಮಾಡುವ ಕೂಲರ್, ಎಸಿ ಖರೀದಿಗೆ ಮುಂದಾಗಿದ್ದಾರೆ.</p>.<p>ಹೆಚ್ಚೂ ಕಡಿಮೆ ದಿನದ 24 ಗಂಟೆಗಳ ಕಾಲವೂ ಮನೆಯಲ್ಲಿ ಫ್ಯಾನ್, ಕೂಲರ್, ಎಸಿ ಗಳನ್ನು ಆನ್ನಲ್ಲಿಡಬೇಕಾಗಿದೆ. ಇಂತಹ ಬೇಸಿಗೆಯನ್ನು ಇತ್ತೀಚಿನ ವರ್ಷಗಳಲ್ಲಿ ನೋಡಿರಲಿಲ್ಲ ಎನ್ನುತ್ತಾರೆ ಜನ.</p>.<p>‘ಬಿಸಿಲಿನ ತಾಪಮಾನ ಹೆಚ್ಚಾದ ಮೇಲೆ ಜನರು ಏರ್ ಕೂಲರ್ಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿ ಮಾಡುತ್ತಿದ್ದಾರೆ. ಏ.1ರ ನಂತರ ಹೊಸ ತೆರಿಗೆ ಅನ್ವಯವಾದ ಮೇಲೆ ಕೂಲರ್ಗಳ ಬೆಲೆಯು ಶೇ 4 ರಿಂದ 8ರವರೆಗೆ ಹೆಚ್ಚಾಗಿದೆ’ ಎನ್ನುತ್ತಾರೆ ಲೈಟ್ ಹೌಸ್ನ ಮಾಲೀಕ ಅಭಿಷೇಕ ಪಾಟೀಲ.</p>.<p>ತಾಪಮಾನ ಹೆಚ್ಚಳದಿಂದ ಸಾರ್ವಜನಿಕರ ಆರೋಗ್ಯದ ಮೇಲೆ ವಿಶೇಷವಾಗಿ ಮಕ್ಕಳು, ವೃದ್ದರು ಮತ್ತು ಅನಾರೋಗ್ಯ ಪೀಡಿತರ ಮೇಲೆ ಗಂಭೀರ ಪರಿಣಾಮ ಬೀರಲಿದೆ.</p>.<p>ಬಿಸಿಲಿನಿಂದ ಉಂಟಾಗುವ ಬಳಲಿಕೆ, ನಿರ್ಜಲೀಕರಣ ತಡೆಗಟ್ಟಲು ಮತ್ತು ತಗ್ಗಿಸಲು ಭಾರತೀಯ ಹವಾಮಾನ ಇಲಾಖೆ ನೀಡಿದ ಸಲಹೆಗಳನ್ನು ಅನುಸರಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಮನವಿ ಮಾಡಿದ್ದಾರೆ.</p>.<p>ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ಗಂಟೆವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು. ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರು ಕುಡಿಯಬೇಕು. ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸಬೇಕು.</p>.<p>ಛತ್ರಿ, ಟೋಪಿ ಬಳಸಬೇಕು. ಈ ಅವಧಿಯಲ್ಲಿ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಬೇಕು. ಪ್ರಯಾಣ ಮಾಡುವಾಗ ನೀರನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೆಟೆಡ್ ತಂಪು ಪಾನೀಯಗಳನ್ನು ಕುಡಿಯುವುದು ನಿಲ್ಲಿಸಬೇಕು.</p>.<p>ಸಾಧ್ಯವಾದಷ್ಟು ಬಿಸಿ ಆಹಾರ ಸೇವಿಸುವುದರ ಜೊತೆಗೆ ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು, ಸಾಕುಪ್ರಾಣಿಗಳನ್ನು ಬಿಡಬಾರದು. ಅನಾರೋಗ್ಯ ಅನಿಸಿದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು. ನಿಂಬೆ ನೀರು, ಮಜ್ಜಿಗೆ ಮುಂತಾದ ಪಾನೀಯಗಳು ಮತ್ತು ಓಆರ್ಎಸ್ ಬಳಸಬೇಕು.</p>.<p>ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ತರಕಾರಿ ಸೊಪ್ಪು, ಎಳೆನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.</p>.<p>ಕಾಯಿಲೆಗೆ ಪ್ರಥಮ ಚಿಕಿತ್ಸೆ:ಹೆಚ್ಚು ತಾಪಮಾನಕ್ಕೆ ತುತ್ತಾದ ವ್ಯಕ್ತಿಯನ್ನು ನೆರಳಿನಡಿ ಕೂಡಿಸಿ ಒದ್ದೆ ಬಟ್ಟಿಯಿಂದ ಮೈ ಒರೆಸಬೇಕು. ದೇಹದ ಉಷ್ಣತೆ ತಗ್ಗಿಸಿ ತಲೆಯ ಮೇಲೆ ನೀರು ಹಾಕುವುದು. ಓಆರ್ಎಸ್, ನಿಂಬೆಪಾನಕ ನೀಡಬೇಕು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-19-1823923464</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>