<p><strong>ಬಾಗಲಕೋಟೆ:</strong> ಬಾಗಲಕೋಟೆ ಹೋಳಿ ಹಬ್ಬ ಆಚರಣಾ ಸಮಿತಿಯು ಮಾರ್ಚ್ 3ರಂದು ಸಂಜೆ 7ಕ್ಕೆ ಹೊಳೆ ಆಂಜನೇಯ ದೇವಸ್ಥಾನ ಆವರಣದಲ್ಲಿ ಹೋಳಿ ಉತ್ಸವ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಂಡಿದೆ.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಕಳಕಪ್ಪ ಬಾದೋಡಗಿ. ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಮೇಟಿ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಉದ್ಯಮಿ ಮಾರುತಿ ಶಿಂಧೆ, ಬಾಬುದಾರ ನರಸಿಂಹ ಕುಲಕರ್ಣಿ, ಪತ್ರಕರ್ತ ರವಿ ಹಳ್ಳೂರ, ಉಪನ್ಯಾಸಕ ಮೋಹನ ದೇಶಪಾಂಡೆ ಪಾಲ್ಗೊಳ್ಳಿದ್ದಾರೆ ಎಂದರು.</p>.<p>ಬಾಗಲಕೋಟೆ ಹೋಳಿ ಪ್ರಸಿದ್ಧಿ ಪಡೆದಿದ್ದು, ಅದನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಿಶಾನೆ, ತುರಾಯಿ, ಬೆಂಕಿ ತರುವ ಕಾರ್ಯವನ್ನು ಹಿಂದಿನಿಂದ ನಡೆದುಕೊಂಡು ಬಂದಂತೆ ಪರಿಪಾಲಿಸಿಕೊಂಡು ಬರಲಾಗುತ್ತಿದೆ ಎಂದರು.</p>.<p>ಸಮಿತಿ ಪ್ರಧಾನ ಕಾರ್ಯದರ್ಶಿ ಮಹಾಬಳೇಶ ಗುಡಗುಂಟಿ ಮಾತನಾಡಿ, ಮಾರ್ಚ್ 4 ರಂದು ಕಾಮದಹನ ಆಗುತ್ತದೆ. 5ರಿಂದ ಮೂರು ದಿನಗಳ ಕಾಲ ಬಣ್ಣದೋಕುಳಿ ಜರುಗಲಿದೆ. 5ರಂದು ಕಿಲ್ಲಾ, ನವನಗರ ಹಾಗೂ ವಿದ್ಯಾಗಿರಿ, 6ರಂದು ಹಳಪೇಟೆ, ಜೈನ ಪೇಟೆ ಹಾಗೂ ವೆಂಕಟಪೇಟೆ, 7 ರಂದು ಹೊಸಪೇಟೆ ಓಣಿಯಲ್ಲಿ ಬಣ್ಣದೋಕುಳಿ ನಡೆಯಲಿದೆ ಎಂದರು.</p>.<p>ಇದರ ಜೊತೆಗೆ ಸೋಗಿನ ಬಂಡಿ ಮೆರವಣಿಗೆ ಕೂಡ ಜರುಗಲಿದ್ದು, 4ರಂದು ಕಿಲ್ಲಾ, 5ಕ್ಕೆ ಹಳಪೇಟೆ, 6ಕ್ಕೆ ಹೊಸಪೇಟಿ, 7ಕ್ಕೆ ಜೈನ ಪೇಟೆ, 8ಕ್ಕೆ ವೆಂಕಟಪೇಟೆ, ನವನಗರ ಹಾಗೂ ವಿದ್ಯಾಗಿರಿಯಲ್ಲಿ ಮೆರವಣಿಗೆ ನಡೆಯಲಿದೆ.</p>.<p>ಮಾರ್ಚ್ 6 ರಂದು ಬಸವೇಶ್ವರ ವೃತ್ತದ ಬಳಿ ಇರುವ ಹೊಳೆ ಆಂಜನೇಯ ದೇವಸ್ಥಾನದ ಆವರಣದಲ್ಲಿ ರೇನ್ ಡ್ಯಾನ್ಸ್ ಆಯೋಜಿಸಲಾಗಿದೆ. ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದರು.</p>.<p>ಹೋಳಿ ಹಬ್ಬವನ್ನು ಎಲ್ಲರೂ ಶಾಂತಿಯಿಂದ ಆಚರಿಸೋಣ. ಬೇರೆ, ಬೇರೆ ಕಡೆಗಳಿಂದ ಬಾಗಲಕೋಟೆ ಹೋಳಿ ನೋಡಲು ಜನರು ಬರುತ್ತಾರೆ. ಆದ್ದರಿಂದ, ಸ್ಥಳೀಯರು ಬೇರೆ ಊರುಗಳಿಗೆ ಹೋಗದೇ ಬಣ್ಣದಾಟದಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.</p>.<p>ಸಂಜೀವ ವಾಡ್ಕರ್, ಶಿವುಕುಮಾರ ಮೇಲ್ನಾಡ, ವೀರಣ್ಣ ಬಂಗಾರಶೆಟ್ಟರ್, ರಾಜು ನಾಯಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಬಾಗಲಕೋಟೆ ಹೋಳಿ ಹಬ್ಬ ಆಚರಣಾ ಸಮಿತಿಯು ಮಾರ್ಚ್ 3ರಂದು ಸಂಜೆ 7ಕ್ಕೆ ಹೊಳೆ ಆಂಜನೇಯ ದೇವಸ್ಥಾನ ಆವರಣದಲ್ಲಿ ಹೋಳಿ ಉತ್ಸವ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಂಡಿದೆ.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಕಳಕಪ್ಪ ಬಾದೋಡಗಿ. ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಮೇಟಿ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಉದ್ಯಮಿ ಮಾರುತಿ ಶಿಂಧೆ, ಬಾಬುದಾರ ನರಸಿಂಹ ಕುಲಕರ್ಣಿ, ಪತ್ರಕರ್ತ ರವಿ ಹಳ್ಳೂರ, ಉಪನ್ಯಾಸಕ ಮೋಹನ ದೇಶಪಾಂಡೆ ಪಾಲ್ಗೊಳ್ಳಿದ್ದಾರೆ ಎಂದರು.</p>.<p>ಬಾಗಲಕೋಟೆ ಹೋಳಿ ಪ್ರಸಿದ್ಧಿ ಪಡೆದಿದ್ದು, ಅದನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಿಶಾನೆ, ತುರಾಯಿ, ಬೆಂಕಿ ತರುವ ಕಾರ್ಯವನ್ನು ಹಿಂದಿನಿಂದ ನಡೆದುಕೊಂಡು ಬಂದಂತೆ ಪರಿಪಾಲಿಸಿಕೊಂಡು ಬರಲಾಗುತ್ತಿದೆ ಎಂದರು.</p>.<p>ಸಮಿತಿ ಪ್ರಧಾನ ಕಾರ್ಯದರ್ಶಿ ಮಹಾಬಳೇಶ ಗುಡಗುಂಟಿ ಮಾತನಾಡಿ, ಮಾರ್ಚ್ 4 ರಂದು ಕಾಮದಹನ ಆಗುತ್ತದೆ. 5ರಿಂದ ಮೂರು ದಿನಗಳ ಕಾಲ ಬಣ್ಣದೋಕುಳಿ ಜರುಗಲಿದೆ. 5ರಂದು ಕಿಲ್ಲಾ, ನವನಗರ ಹಾಗೂ ವಿದ್ಯಾಗಿರಿ, 6ರಂದು ಹಳಪೇಟೆ, ಜೈನ ಪೇಟೆ ಹಾಗೂ ವೆಂಕಟಪೇಟೆ, 7 ರಂದು ಹೊಸಪೇಟೆ ಓಣಿಯಲ್ಲಿ ಬಣ್ಣದೋಕುಳಿ ನಡೆಯಲಿದೆ ಎಂದರು.</p>.<p>ಇದರ ಜೊತೆಗೆ ಸೋಗಿನ ಬಂಡಿ ಮೆರವಣಿಗೆ ಕೂಡ ಜರುಗಲಿದ್ದು, 4ರಂದು ಕಿಲ್ಲಾ, 5ಕ್ಕೆ ಹಳಪೇಟೆ, 6ಕ್ಕೆ ಹೊಸಪೇಟಿ, 7ಕ್ಕೆ ಜೈನ ಪೇಟೆ, 8ಕ್ಕೆ ವೆಂಕಟಪೇಟೆ, ನವನಗರ ಹಾಗೂ ವಿದ್ಯಾಗಿರಿಯಲ್ಲಿ ಮೆರವಣಿಗೆ ನಡೆಯಲಿದೆ.</p>.<p>ಮಾರ್ಚ್ 6 ರಂದು ಬಸವೇಶ್ವರ ವೃತ್ತದ ಬಳಿ ಇರುವ ಹೊಳೆ ಆಂಜನೇಯ ದೇವಸ್ಥಾನದ ಆವರಣದಲ್ಲಿ ರೇನ್ ಡ್ಯಾನ್ಸ್ ಆಯೋಜಿಸಲಾಗಿದೆ. ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದರು.</p>.<p>ಹೋಳಿ ಹಬ್ಬವನ್ನು ಎಲ್ಲರೂ ಶಾಂತಿಯಿಂದ ಆಚರಿಸೋಣ. ಬೇರೆ, ಬೇರೆ ಕಡೆಗಳಿಂದ ಬಾಗಲಕೋಟೆ ಹೋಳಿ ನೋಡಲು ಜನರು ಬರುತ್ತಾರೆ. ಆದ್ದರಿಂದ, ಸ್ಥಳೀಯರು ಬೇರೆ ಊರುಗಳಿಗೆ ಹೋಗದೇ ಬಣ್ಣದಾಟದಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.</p>.<p>ಸಂಜೀವ ವಾಡ್ಕರ್, ಶಿವುಕುಮಾರ ಮೇಲ್ನಾಡ, ವೀರಣ್ಣ ಬಂಗಾರಶೆಟ್ಟರ್, ರಾಜು ನಾಯಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>