<p><strong>ಬಾಗಲಕೋಟೆ</strong>: ಅಕ್ರಮ ಮರಳು ಗಣಿಗಾರಿಕೆ ಹಿನ್ನೆಲೆಯಲ್ಲಿ ಜಿಲ್ಲೆಯ 24 ಸ್ಥಳಗಳ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿತು.</p>.<p>ಇದಕ್ಕೆ ಪೂರಕವಾಗಿ ಬೆಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕ, ಬಾಗಲಕೋಟೆಯ ಉಪನಿರ್ದೇಶಕ, ಜಿಲ್ಲಾಧಿಕಾರಿ ಮತ್ತು ಐವರು ತಹಶೀಲ್ದಾರ್ಗಳ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತು.</p>.<p>ಜಿಲ್ಲೆಯಲ್ಲಿ ಹರಿದಿರುವ ಕೃಷ್ಣಾ, ಮಲಪ್ರಭಾ, ಘಟಪ್ರಭಾ ನದಿ ದಂಡೆಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬಂದ ದೂರು ಆಧರಿಸಿ ಹುನಗುಂದ, ಇಳಕಲ್, ಮುಧೋಳ ಹಾಗೂ ಬಾದಾಮಿ ತಾಲ್ಲೂಕುಗಳಲ್ಲಿ ದಾಳಿ ನಡೆದಿದೆ.</p>.<p>ಪರಿಸರ ಕಾಯ್ದೆ ಉಲ್ಲಂಘಿಸಿ ಯಂತ್ರೋಪಕರಣಗಳನ್ನು ಬಳಸಿ ನದಿ ದಡದಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ಮಾಡುತ್ತಿರುವುದು ದಾಳಿ ವೇಳೆ ಕಂಡುಬಂದಿದೆ.</p>.<p>65 ಟಿಪ್ಪರ್, 18 ಹಿಟಾಚಿ, 14 ಯಾಂತ್ರೀಕೃತ ದೋಣಿಗಳು, ಆರು ಟ್ರ್ಯಾಕ್ಟರ್ ಹಾಗೂ ಒಂದು ಜೆಸಿಬಿ ಬಳಸುತ್ತಿರುವುದು ಪತ್ತೆ ಆಗಿದೆ. ಬಾಗಲಕೋಟೆ ಸೇರಿದಂತೆ ಅಕ್ಕ–ಪಕ್ಕದ ಜಿಲ್ಲೆಗಳ ಲೋಕಾಯುಕ್ತದ 28 ಅಧಿಕಾರಿಗಳು, 90 ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-51-1644407615</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಅಕ್ರಮ ಮರಳು ಗಣಿಗಾರಿಕೆ ಹಿನ್ನೆಲೆಯಲ್ಲಿ ಜಿಲ್ಲೆಯ 24 ಸ್ಥಳಗಳ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿತು.</p>.<p>ಇದಕ್ಕೆ ಪೂರಕವಾಗಿ ಬೆಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕ, ಬಾಗಲಕೋಟೆಯ ಉಪನಿರ್ದೇಶಕ, ಜಿಲ್ಲಾಧಿಕಾರಿ ಮತ್ತು ಐವರು ತಹಶೀಲ್ದಾರ್ಗಳ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತು.</p>.<p>ಜಿಲ್ಲೆಯಲ್ಲಿ ಹರಿದಿರುವ ಕೃಷ್ಣಾ, ಮಲಪ್ರಭಾ, ಘಟಪ್ರಭಾ ನದಿ ದಂಡೆಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬಂದ ದೂರು ಆಧರಿಸಿ ಹುನಗುಂದ, ಇಳಕಲ್, ಮುಧೋಳ ಹಾಗೂ ಬಾದಾಮಿ ತಾಲ್ಲೂಕುಗಳಲ್ಲಿ ದಾಳಿ ನಡೆದಿದೆ.</p>.<p>ಪರಿಸರ ಕಾಯ್ದೆ ಉಲ್ಲಂಘಿಸಿ ಯಂತ್ರೋಪಕರಣಗಳನ್ನು ಬಳಸಿ ನದಿ ದಡದಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ಮಾಡುತ್ತಿರುವುದು ದಾಳಿ ವೇಳೆ ಕಂಡುಬಂದಿದೆ.</p>.<p>65 ಟಿಪ್ಪರ್, 18 ಹಿಟಾಚಿ, 14 ಯಾಂತ್ರೀಕೃತ ದೋಣಿಗಳು, ಆರು ಟ್ರ್ಯಾಕ್ಟರ್ ಹಾಗೂ ಒಂದು ಜೆಸಿಬಿ ಬಳಸುತ್ತಿರುವುದು ಪತ್ತೆ ಆಗಿದೆ. ಬಾಗಲಕೋಟೆ ಸೇರಿದಂತೆ ಅಕ್ಕ–ಪಕ್ಕದ ಜಿಲ್ಲೆಗಳ ಲೋಕಾಯುಕ್ತದ 28 ಅಧಿಕಾರಿಗಳು, 90 ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-51-1644407615</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>