<p><strong>ಬಾಗಲಕೋಟೆ:</strong> ‘ಕನ್ನಡ ಪುಸ್ತಕ ಪ್ರಾದಿಕಾರದ ಮಹತ್ವಕಾಂಕ್ಷೆ ಯೋಜನೆಗಳಲೊಂದಾದ ಮನೆಗೊಂದು ಗ್ರಂಥಾಲಯ ಯೋಜನೆಉಡಿ ರಾಜ್ಯದಲ್ಲಿ ಒಂದು ಲಕ್ಷ ಗ್ರಂಥಾಲಯಗಳನ್ನು ಪ್ರಾರಂಭಿಸುವ ಯೋಜನೆ ಇದೆ’ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ಹೇಳಿದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಭಾಭವನದಲ್ಲಿ ಭಾನುವಾರ ಆಯೋಜನೆಗೊಂಡ ‘ಮನೆಗೊಂದು ಗ್ರಂಥಾಲಯ’ ಯೋಜನೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮನೆಗಳಲ್ಲಿಯೇ ಗ್ರಂಥಾಲಯ ಆರಂಭಿಸುವುದರಿಂದ ಮನೆಯಲ್ಲಿರುವ ಮಕ್ಕಳೂ ಸೇರಿದಂತೆ ಎಲ್ಲರಿಗೂ ಓದುವ ಹವ್ಯಾಸ ಬೆಳೆಯುತ್ತದೆ’ ಎಂದರು.</p>.<p>‘ಲೇಖಕರು, ಪ್ರಕಾಶಕರು, ಮುದ್ರಕರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪುಸ್ತಕ ಪ್ರಾಧಿಕಾರ ಹಲವಾರು ಯೋಜನೆಗಳನ್ನು ಹಾಕಿಕೊಂಡಿದೆ. ಪುಸ್ತಕಕ್ಕೆ ಸಂಬಂಧಿಸಿದ ಚಟುವಟಿಕೆಗಳೆಲ್ಲರ ರಕ್ಷಣೆ ಮಾಡಲಾಗುವುದು’ ಎಂದರು</p>.<p>ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಮಾತನಾಡಿ, ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ ಮಹನೀಯರನ್ನು ಗುರುತಿಸುವಂತಹ ಕಾರ್ಯ ಪುಸ್ತಕ ಪ್ರಾಧಿಕಾರದಿಂದ ಆಗಲಿ. ಜಿಲ್ಲೆಯ ಸಾಹಿತಿಗಳು ಹಾಗೂ ಪ್ರಕಾಶಕರ ಸಹಕಾರದೊಂದಿಗೆ ಪ್ರಾಧಿಕಾರದ ಯೋಜನೆಗಳನ್ನು ಯಶಸ್ವಿಗೊಳಿಸಲಾಗುವುದು ಎಂದು ಹೇಳಿದರು.</p>.<p>ಸಾಹಿತಿಗಳಾದ ಪಿ.ಎಂ. ಹುಗ್ಗಿ, ಮಲ್ಲಿಕಾರ್ಜುನ ಶೆಲ್ಲಿಕೇರಿ, ಸಿ.ಎಸ್.ನಾಗನೂರ ಇದ್ದರು.</p>.<div><blockquote>ಪ್ರಾಧಿಕಾರವು ವಿಶೇಷವಾದಂತಹ ಯೋಜನೆಗಳನ್ನು ಹಾಕಿಕೊಂಡು ಪುಸ್ತಕ ಓದುವ ಹವ್ಯಾಸ ಬೆಳೆಸುವ ಕೆಲಸ ಮಾಡುತ್ತಿದೆ. ಹೊಸ ಬರಹಗಾರರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ </blockquote><span class="attribution">ಮಾನಸ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ‘ಕನ್ನಡ ಪುಸ್ತಕ ಪ್ರಾದಿಕಾರದ ಮಹತ್ವಕಾಂಕ್ಷೆ ಯೋಜನೆಗಳಲೊಂದಾದ ಮನೆಗೊಂದು ಗ್ರಂಥಾಲಯ ಯೋಜನೆಉಡಿ ರಾಜ್ಯದಲ್ಲಿ ಒಂದು ಲಕ್ಷ ಗ್ರಂಥಾಲಯಗಳನ್ನು ಪ್ರಾರಂಭಿಸುವ ಯೋಜನೆ ಇದೆ’ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ಹೇಳಿದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಭಾಭವನದಲ್ಲಿ ಭಾನುವಾರ ಆಯೋಜನೆಗೊಂಡ ‘ಮನೆಗೊಂದು ಗ್ರಂಥಾಲಯ’ ಯೋಜನೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮನೆಗಳಲ್ಲಿಯೇ ಗ್ರಂಥಾಲಯ ಆರಂಭಿಸುವುದರಿಂದ ಮನೆಯಲ್ಲಿರುವ ಮಕ್ಕಳೂ ಸೇರಿದಂತೆ ಎಲ್ಲರಿಗೂ ಓದುವ ಹವ್ಯಾಸ ಬೆಳೆಯುತ್ತದೆ’ ಎಂದರು.</p>.<p>‘ಲೇಖಕರು, ಪ್ರಕಾಶಕರು, ಮುದ್ರಕರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪುಸ್ತಕ ಪ್ರಾಧಿಕಾರ ಹಲವಾರು ಯೋಜನೆಗಳನ್ನು ಹಾಕಿಕೊಂಡಿದೆ. ಪುಸ್ತಕಕ್ಕೆ ಸಂಬಂಧಿಸಿದ ಚಟುವಟಿಕೆಗಳೆಲ್ಲರ ರಕ್ಷಣೆ ಮಾಡಲಾಗುವುದು’ ಎಂದರು</p>.<p>ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಮಾತನಾಡಿ, ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ ಮಹನೀಯರನ್ನು ಗುರುತಿಸುವಂತಹ ಕಾರ್ಯ ಪುಸ್ತಕ ಪ್ರಾಧಿಕಾರದಿಂದ ಆಗಲಿ. ಜಿಲ್ಲೆಯ ಸಾಹಿತಿಗಳು ಹಾಗೂ ಪ್ರಕಾಶಕರ ಸಹಕಾರದೊಂದಿಗೆ ಪ್ರಾಧಿಕಾರದ ಯೋಜನೆಗಳನ್ನು ಯಶಸ್ವಿಗೊಳಿಸಲಾಗುವುದು ಎಂದು ಹೇಳಿದರು.</p>.<p>ಸಾಹಿತಿಗಳಾದ ಪಿ.ಎಂ. ಹುಗ್ಗಿ, ಮಲ್ಲಿಕಾರ್ಜುನ ಶೆಲ್ಲಿಕೇರಿ, ಸಿ.ಎಸ್.ನಾಗನೂರ ಇದ್ದರು.</p>.<div><blockquote>ಪ್ರಾಧಿಕಾರವು ವಿಶೇಷವಾದಂತಹ ಯೋಜನೆಗಳನ್ನು ಹಾಕಿಕೊಂಡು ಪುಸ್ತಕ ಓದುವ ಹವ್ಯಾಸ ಬೆಳೆಸುವ ಕೆಲಸ ಮಾಡುತ್ತಿದೆ. ಹೊಸ ಬರಹಗಾರರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ </blockquote><span class="attribution">ಮಾನಸ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>