<p><strong>ಬಾಗಲಕೋಟೆ: ‘</strong>ನಾಡಿನ ಹಾಗೂ ವಿಶ್ವದ ಪ್ರಾಚೀನ ಸಂಸ್ಕೃತಿ ತಿಳಿಯಬೇಕಾದರೆ ಹಸ್ತಪ್ರತಿಗಳ ಅಧ್ಯಯನದ ಅವಶ್ಯಕತೆ ಇದೆ’ ಎಂದು ಅಖಿಲ ಕರ್ನಾಟಕ 22ನೇ ಹಸ್ತಪ್ರತಿ ಸಮ್ಮೇಳನದ ಅಧ್ಯಕ್ಷ ಪ್ರೊ.ಮಲ್ಲೇಪುರಂ ವೆಂಕಟೇಶ ಹೇಳಿದರು.</p>.<p>ಹಂಪಿ ಕನ್ನಡ ವಿಶ್ವವಿದ್ಯಾಲಯ ಹಸ್ತಪ್ರತಿ ವಿಭಾಗ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಶನಿವಾರ ನಡೆದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ‘ಕಾವ್ಯ, ಶಾಸ್ತ್ರ, ನಾಟಕ, ಸಾಹಿತ್ಯ, ಊರಿನ ಸಾಮಾಜಿಕ-ಸಾಂಸ್ಕೃತಿಕ ವಿವರಗಳನ್ನು ಒಳಗೊಂಡ ಬರಹ, ಶಾಸನಗಳನ್ನು ಹಸ್ತಪ್ರತಿ ಎನ್ನುತ್ತೇವೆ’ ಎಂದರು.</p>.<p>‘ಹಳಗನ್ನಡ, ಶಾಸನಗಳು, ಹಸ್ತಪ್ರತಿಗಳು ಜ್ಞಾನದ ಮೂಲ ಬೇರುಗಳಾಗಿವೆ. ಆ ಮೂಲ ಬೇರುಗಳ ಕುರಿತು ಪ್ರಸ್ತುತ ಕಾಲಘಟ್ಟದಲ್ಲಿ ಅಧ್ಯಯನದ ಅವಶ್ಯಕತೆ ಇದೆ. ಇವುಗಳು ದೇಶದ ಆಸ್ತಿಯಾಗಿದ್ದು, ರಕ್ಷಣೆ ಮಾಡುವ ಕೆಲಸ ಆಗಬೇಕು’ ಎಂದು ಹೇಳಿದರು.</p>.<p>ಹಿರಿಯ ವಿದ್ವಾಂಸ ನಾ. ಗೀತಾಚಾರ್ಯ ಮಾತನಾಡಿ, ‘ದೇಶದಲ್ಲಿಯೇ ಹಸ್ತಪ್ರತಿಗಳ ಸಂಗ್ರಹ, ಅವುಗಳ ಅಧ್ಯಯನ ಮಾಡುತ್ತಾ ಸಮ್ಮೇಳನ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕಾರ್ಯ ಶ್ಲಾಘನೀಯವಾಗಿದೆ. ಈ ಕಾರ್ಯ ಮಾಡುವ ಏಕೈಕ ವಿಶ್ವವಿದ್ಯಾಲಯವಾಗಿದೆ’ ಎಂದರು.</p>.<p>ಹಂಪಿ ಕನ್ನಡ ವಿಶ್ವವಿದ್ಯಾಲಯ ಕುಲಪತಿ ಡಿ.ವಿ. ಪರಮಶಿವಮೂರ್ತಿ ಮಾತನಾಡಿ, ‘ಹಸ್ತಪ್ರತಿಗಳು ನಮ್ಮ ಜ್ಞಾನವನ್ನು ಹೆಚ್ಚಿಸುವ ಕೆಲಸ ಮಾಡುತ್ತವೆ. ಹಸ್ತಪ್ರತಿಗಳ ಅಧ್ಯಯನದಲ್ಲಿ ಇಂದಿನ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಹಡಲಗೇರಿ ಸ.ಪ್ರ.ದ.ವಸತಿಯುಕ್ತ ಕಾಲೇಜಿನ ಪ್ರಾಚಾರ್ಯ ಶರಣಗೌಡ ಪಾಟೀಲ, ಹಸ್ತಪ್ರತಿಶಾಸ್ತ್ರ ವಿಭಾಗದ ಮುಖ್ಯಸ್ಥ ವೀರೇಶ ಬಡಿಗೇರ, ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಅರುಣಕುಮಾರ ಗಾಳಿ ಮಾತನಾಡಿದರು.</p>.<p><strong>ಪ್ರಮಾಣಪತ್ರ ವಿತರಣೆ:</strong> ಎರಡು ದಿನಗಳ ಕಾಲ ನಡೆದ ಸಮ್ಮೇಳನದಲ್ಲಿ ಭಾಗವಹಿಸಿದ ವಿವಿಧ ಕಾಲೇಜುಗಳ ಉಪನ್ಯಾಸಕರಿಗೆ, ಪ್ರಾಧ್ಯಾಪಕರಿಗೆ, ಸಂಶೋಧನಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ವಿವಿಧ ಕಾಲದ ಹಸ್ತಪ್ರತಿಗಳ ಪ್ರದರ್ಶನವು ಗಮನ ಸೆಳೆಯಿತು. ವಿವಿಧ ಗೋಷ್ಠಿಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: ‘</strong>ನಾಡಿನ ಹಾಗೂ ವಿಶ್ವದ ಪ್ರಾಚೀನ ಸಂಸ್ಕೃತಿ ತಿಳಿಯಬೇಕಾದರೆ ಹಸ್ತಪ್ರತಿಗಳ ಅಧ್ಯಯನದ ಅವಶ್ಯಕತೆ ಇದೆ’ ಎಂದು ಅಖಿಲ ಕರ್ನಾಟಕ 22ನೇ ಹಸ್ತಪ್ರತಿ ಸಮ್ಮೇಳನದ ಅಧ್ಯಕ್ಷ ಪ್ರೊ.ಮಲ್ಲೇಪುರಂ ವೆಂಕಟೇಶ ಹೇಳಿದರು.</p>.<p>ಹಂಪಿ ಕನ್ನಡ ವಿಶ್ವವಿದ್ಯಾಲಯ ಹಸ್ತಪ್ರತಿ ವಿಭಾಗ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಶನಿವಾರ ನಡೆದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ‘ಕಾವ್ಯ, ಶಾಸ್ತ್ರ, ನಾಟಕ, ಸಾಹಿತ್ಯ, ಊರಿನ ಸಾಮಾಜಿಕ-ಸಾಂಸ್ಕೃತಿಕ ವಿವರಗಳನ್ನು ಒಳಗೊಂಡ ಬರಹ, ಶಾಸನಗಳನ್ನು ಹಸ್ತಪ್ರತಿ ಎನ್ನುತ್ತೇವೆ’ ಎಂದರು.</p>.<p>‘ಹಳಗನ್ನಡ, ಶಾಸನಗಳು, ಹಸ್ತಪ್ರತಿಗಳು ಜ್ಞಾನದ ಮೂಲ ಬೇರುಗಳಾಗಿವೆ. ಆ ಮೂಲ ಬೇರುಗಳ ಕುರಿತು ಪ್ರಸ್ತುತ ಕಾಲಘಟ್ಟದಲ್ಲಿ ಅಧ್ಯಯನದ ಅವಶ್ಯಕತೆ ಇದೆ. ಇವುಗಳು ದೇಶದ ಆಸ್ತಿಯಾಗಿದ್ದು, ರಕ್ಷಣೆ ಮಾಡುವ ಕೆಲಸ ಆಗಬೇಕು’ ಎಂದು ಹೇಳಿದರು.</p>.<p>ಹಿರಿಯ ವಿದ್ವಾಂಸ ನಾ. ಗೀತಾಚಾರ್ಯ ಮಾತನಾಡಿ, ‘ದೇಶದಲ್ಲಿಯೇ ಹಸ್ತಪ್ರತಿಗಳ ಸಂಗ್ರಹ, ಅವುಗಳ ಅಧ್ಯಯನ ಮಾಡುತ್ತಾ ಸಮ್ಮೇಳನ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕಾರ್ಯ ಶ್ಲಾಘನೀಯವಾಗಿದೆ. ಈ ಕಾರ್ಯ ಮಾಡುವ ಏಕೈಕ ವಿಶ್ವವಿದ್ಯಾಲಯವಾಗಿದೆ’ ಎಂದರು.</p>.<p>ಹಂಪಿ ಕನ್ನಡ ವಿಶ್ವವಿದ್ಯಾಲಯ ಕುಲಪತಿ ಡಿ.ವಿ. ಪರಮಶಿವಮೂರ್ತಿ ಮಾತನಾಡಿ, ‘ಹಸ್ತಪ್ರತಿಗಳು ನಮ್ಮ ಜ್ಞಾನವನ್ನು ಹೆಚ್ಚಿಸುವ ಕೆಲಸ ಮಾಡುತ್ತವೆ. ಹಸ್ತಪ್ರತಿಗಳ ಅಧ್ಯಯನದಲ್ಲಿ ಇಂದಿನ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಹಡಲಗೇರಿ ಸ.ಪ್ರ.ದ.ವಸತಿಯುಕ್ತ ಕಾಲೇಜಿನ ಪ್ರಾಚಾರ್ಯ ಶರಣಗೌಡ ಪಾಟೀಲ, ಹಸ್ತಪ್ರತಿಶಾಸ್ತ್ರ ವಿಭಾಗದ ಮುಖ್ಯಸ್ಥ ವೀರೇಶ ಬಡಿಗೇರ, ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಅರುಣಕುಮಾರ ಗಾಳಿ ಮಾತನಾಡಿದರು.</p>.<p><strong>ಪ್ರಮಾಣಪತ್ರ ವಿತರಣೆ:</strong> ಎರಡು ದಿನಗಳ ಕಾಲ ನಡೆದ ಸಮ್ಮೇಳನದಲ್ಲಿ ಭಾಗವಹಿಸಿದ ವಿವಿಧ ಕಾಲೇಜುಗಳ ಉಪನ್ಯಾಸಕರಿಗೆ, ಪ್ರಾಧ್ಯಾಪಕರಿಗೆ, ಸಂಶೋಧನಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ವಿವಿಧ ಕಾಲದ ಹಸ್ತಪ್ರತಿಗಳ ಪ್ರದರ್ಶನವು ಗಮನ ಸೆಳೆಯಿತು. ವಿವಿಧ ಗೋಷ್ಠಿಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>