<p><strong>ಬಾಗಲಕೋಟೆ:</strong> ನಗರದ ಮೊರಾರ್ಜಿ ಸರ್ಕಾರಿ ವಸತಿ ನಿಲಯದಿಂದ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿನಿಯರನ್ನು ಪೊಲೀಸರು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿಸಿದ್ದಾರೆ.</p><p>ಗುರುವಾರ ಸಂಜೆ ವಸತಿ ನಿಲಯದಲ್ಲಿದ್ದ 10ನೇ ತರಗತಿಯ ನಾಲ್ವರು ವಿದ್ಯಾರ್ಥಿನಿಯರು ವಾರ್ಡನ್ಗೆ ತಿಳಿಸದೇ ವಸತಿ ನಿಲಯದಿಂದ ನಾಪತ್ತೆಯಾಗಿದ್ದರು. ಅಧ್ಯಯನದ ವೇಳೆ ಹಾಜರಾತಿ ತೆಗೆದುಕೊಳ್ಳುವಾಗ ವಿದ್ಯಾರ್ಥಿನಿಯರು ಇಲ್ಲದಿರುವುದು ಬೆಳಕಿಗೆ ಬಂದಿತ್ತು.</p><p>ಸುತ್ತ ಮುತ್ತಲಿನ ಪ್ರದೇಶದಲ್ಲಿ ಶೋಧ ನಡೆಸಿದ್ದ ವಸತಿ ನಿಲಯದ ಸಿಬ್ಬಂದಿ, ಪೋಷಕರಿಗೆ ಮಾಹಿತಿ ನೀಡಿತ್ತು. ರಾತ್ರಿ 10 ಗಂಟೆ ಸುಮಾರಿಗೆ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆಗೆ ಬಂದು ದೂರು ನೀಡಲಾಗಿತ್ತು.</p><p>ದೂರು ಸ್ವೀಕರಿಸಿದ ಬಳಿಕ ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ಶಾಲಾ ಶಿಕ್ಷಕರು ಹಾಗೂ ಇಬ್ಬರು ವಿದ್ಯಾರ್ಥಿನಿಯರಿಂದ ಮಾಹಿತಿ ಸಂಗ್ರಹಿಸಿದರು. ನಾಲ್ವರು ವಿದ್ಯಾರ್ಥಿನಿಯರು ನವನಗರ ಬಸ್ ನಿಲ್ದಾಣದಿಂದ ಹುನಗುಂದ ಕಡೆಗೆ ಹೋಗುವ ಬಸ್ಸಿನಲ್ಲಿ ಪ್ರಯಾಣಿಸಿದ್ದಾರೆ ಎಂದು ತಿಳಿದು ಬಂದಿತ್ತು.</p><p>ತಕ್ಷಣವೇ ಹುನಗುಂದ ಮತ್ತು ಇಳಕಲ್ ಪೊಲೀಸ್ ಠಾಣೆಗಳಿಗೆ ತಿಳಿಸಲಾಗಿತ್ತು. ಎರಡೂ ಬಸ್ ನಿಲ್ದಾಣಗಳಲ್ಲಿ ತಪಾಸಣೆ ಮಾಡಿದಾಗ ವಿದ್ಯಾರ್ಥಿನಿಯರು ಪತ್ತೆಯಾಗಲಿಲ್ಲ.</p><p>ನಾಲ್ವರು ವಿದ್ಯಾರ್ಥಿನಿಯರ ಪೈಕಿ ಒಬ್ಬ ವಿದ್ಯಾರ್ಥಿನಿ ಬಳಿ ಮೊಬೈಲ್ ಇತ್ತು. ಆ ಮೊಬೈಲ್ನ ತಾಂತ್ರಿಕ ಮಾಹಿತಿ ಆಧಾರದ ಮೇಲೆ ಅವರು ವಿಜಯಪುರಜಿಲ್ಲೆಯ ಬಾಗೇವಾಡಿ ತಾಲ್ಲೂಕಿನ ಮಣಗುಳಿ ಕಡೆಗೆ ತೆರಳಿರುವುದು ಗೊತ್ತಾಯಿತು.</p><p>ಕೂಡಲೇ ವಿಜಯಪುರ ನಗರ ಪೊಲೀಸ್ ಠಾಣೆಯ ಗಾಂಧಿಚೌಕ್ ಠಾಣೆ ಎಸ್ಎಚ್ಒ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಲಾಯಿತು. ವಿಜಯಪುರ ಬಸ್ ನಿಲ್ದಾಣ ಹೊರಪೋಸ್ಟ್ ಸಿಬ್ಬಂದಿ ಸಹಕಾರದಿಂದ ಎಲ್ಲಾ ಬಸ್ ನಿಲ್ದಾಣಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಶೋಧ ನಡೆಸಲಾಯಿತು.</p><p>ರಾತ್ರಿ 12:15ರ ಸುಮಾರಿಗೆ ನಾಲ್ವರು ವಿದ್ಯಾರ್ಥಿನಿಯರು ವಿಜಯಪುರ ಬಸ್ ನಿಲ್ದಾಣದ ಹೊರಭಾಗದಲ್ಲಿರುವ ಟಿಪ್ಪು ವೃತ್ತದ ಬಳಿ ಪತ್ತೆಯಾದರು. ಬೆಳಿಗ್ಗೆ ಅವರನ್ನು ಬಾಗಲಕೋಟೆಗೆ ಕರೆದುಕೊಂಡು ಬಂದು ಪೋಷಕರಿಗೆ ಒಪ್ಪಿಸಲಾಗಿದೆ.</p><p>ನಾಪತ್ತೆಯಾದ ಬಾಲಕಿಯರನ್ನು ಪತ್ತೆಹಚ್ಚುವಲ್ಲಿ ವಿಜಯಪುರ ನಗರ ಪೊಲೀಸರು, ಗಾಂಧಿಚೌಕ್ ಪೊಲೀಸ್ ಠಾಣೆ ಸಿಬ್ಬಂದಿ, ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸಿ.ಬಿ. ಚಿಕ್ಕೋಡಿ ನೇತೃತ್ದ ತ್ವರಿತ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ವರಿಷ್ಠ ಸಿದ್ದಾರ್ಥ ಗೋಯಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p><p>‘ಮೊಬೈಲ್ ಫೋನ್ ಬಳಕೆಗೆ ನಿರ್ಬಂಧ ವಿಧಿಸಿರುವುದು ಸೇರಿದಂತೆ ಯಾವ ಕಾರಣಕ್ಕೆ ವಿದ್ಯಾರ್ಥಿನಿಯರು ನಿಲಯದಿಂದ ಹೊರಕ್ಕೆ ಹೋಗಿದ್ದರು ಎಂಬುದನ್ನು ವಿಚಾರಣೆ ಮಾಡಲಾಗುತ್ತಿದೆ’ ಎಂದು ಎಸ್ಪಿ ಗೋಯಲ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ನಗರದ ಮೊರಾರ್ಜಿ ಸರ್ಕಾರಿ ವಸತಿ ನಿಲಯದಿಂದ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿನಿಯರನ್ನು ಪೊಲೀಸರು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿಸಿದ್ದಾರೆ.</p><p>ಗುರುವಾರ ಸಂಜೆ ವಸತಿ ನಿಲಯದಲ್ಲಿದ್ದ 10ನೇ ತರಗತಿಯ ನಾಲ್ವರು ವಿದ್ಯಾರ್ಥಿನಿಯರು ವಾರ್ಡನ್ಗೆ ತಿಳಿಸದೇ ವಸತಿ ನಿಲಯದಿಂದ ನಾಪತ್ತೆಯಾಗಿದ್ದರು. ಅಧ್ಯಯನದ ವೇಳೆ ಹಾಜರಾತಿ ತೆಗೆದುಕೊಳ್ಳುವಾಗ ವಿದ್ಯಾರ್ಥಿನಿಯರು ಇಲ್ಲದಿರುವುದು ಬೆಳಕಿಗೆ ಬಂದಿತ್ತು.</p><p>ಸುತ್ತ ಮುತ್ತಲಿನ ಪ್ರದೇಶದಲ್ಲಿ ಶೋಧ ನಡೆಸಿದ್ದ ವಸತಿ ನಿಲಯದ ಸಿಬ್ಬಂದಿ, ಪೋಷಕರಿಗೆ ಮಾಹಿತಿ ನೀಡಿತ್ತು. ರಾತ್ರಿ 10 ಗಂಟೆ ಸುಮಾರಿಗೆ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆಗೆ ಬಂದು ದೂರು ನೀಡಲಾಗಿತ್ತು.</p><p>ದೂರು ಸ್ವೀಕರಿಸಿದ ಬಳಿಕ ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ಶಾಲಾ ಶಿಕ್ಷಕರು ಹಾಗೂ ಇಬ್ಬರು ವಿದ್ಯಾರ್ಥಿನಿಯರಿಂದ ಮಾಹಿತಿ ಸಂಗ್ರಹಿಸಿದರು. ನಾಲ್ವರು ವಿದ್ಯಾರ್ಥಿನಿಯರು ನವನಗರ ಬಸ್ ನಿಲ್ದಾಣದಿಂದ ಹುನಗುಂದ ಕಡೆಗೆ ಹೋಗುವ ಬಸ್ಸಿನಲ್ಲಿ ಪ್ರಯಾಣಿಸಿದ್ದಾರೆ ಎಂದು ತಿಳಿದು ಬಂದಿತ್ತು.</p><p>ತಕ್ಷಣವೇ ಹುನಗುಂದ ಮತ್ತು ಇಳಕಲ್ ಪೊಲೀಸ್ ಠಾಣೆಗಳಿಗೆ ತಿಳಿಸಲಾಗಿತ್ತು. ಎರಡೂ ಬಸ್ ನಿಲ್ದಾಣಗಳಲ್ಲಿ ತಪಾಸಣೆ ಮಾಡಿದಾಗ ವಿದ್ಯಾರ್ಥಿನಿಯರು ಪತ್ತೆಯಾಗಲಿಲ್ಲ.</p><p>ನಾಲ್ವರು ವಿದ್ಯಾರ್ಥಿನಿಯರ ಪೈಕಿ ಒಬ್ಬ ವಿದ್ಯಾರ್ಥಿನಿ ಬಳಿ ಮೊಬೈಲ್ ಇತ್ತು. ಆ ಮೊಬೈಲ್ನ ತಾಂತ್ರಿಕ ಮಾಹಿತಿ ಆಧಾರದ ಮೇಲೆ ಅವರು ವಿಜಯಪುರಜಿಲ್ಲೆಯ ಬಾಗೇವಾಡಿ ತಾಲ್ಲೂಕಿನ ಮಣಗುಳಿ ಕಡೆಗೆ ತೆರಳಿರುವುದು ಗೊತ್ತಾಯಿತು.</p><p>ಕೂಡಲೇ ವಿಜಯಪುರ ನಗರ ಪೊಲೀಸ್ ಠಾಣೆಯ ಗಾಂಧಿಚೌಕ್ ಠಾಣೆ ಎಸ್ಎಚ್ಒ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಲಾಯಿತು. ವಿಜಯಪುರ ಬಸ್ ನಿಲ್ದಾಣ ಹೊರಪೋಸ್ಟ್ ಸಿಬ್ಬಂದಿ ಸಹಕಾರದಿಂದ ಎಲ್ಲಾ ಬಸ್ ನಿಲ್ದಾಣಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಶೋಧ ನಡೆಸಲಾಯಿತು.</p><p>ರಾತ್ರಿ 12:15ರ ಸುಮಾರಿಗೆ ನಾಲ್ವರು ವಿದ್ಯಾರ್ಥಿನಿಯರು ವಿಜಯಪುರ ಬಸ್ ನಿಲ್ದಾಣದ ಹೊರಭಾಗದಲ್ಲಿರುವ ಟಿಪ್ಪು ವೃತ್ತದ ಬಳಿ ಪತ್ತೆಯಾದರು. ಬೆಳಿಗ್ಗೆ ಅವರನ್ನು ಬಾಗಲಕೋಟೆಗೆ ಕರೆದುಕೊಂಡು ಬಂದು ಪೋಷಕರಿಗೆ ಒಪ್ಪಿಸಲಾಗಿದೆ.</p><p>ನಾಪತ್ತೆಯಾದ ಬಾಲಕಿಯರನ್ನು ಪತ್ತೆಹಚ್ಚುವಲ್ಲಿ ವಿಜಯಪುರ ನಗರ ಪೊಲೀಸರು, ಗಾಂಧಿಚೌಕ್ ಪೊಲೀಸ್ ಠಾಣೆ ಸಿಬ್ಬಂದಿ, ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸಿ.ಬಿ. ಚಿಕ್ಕೋಡಿ ನೇತೃತ್ದ ತ್ವರಿತ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ವರಿಷ್ಠ ಸಿದ್ದಾರ್ಥ ಗೋಯಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p><p>‘ಮೊಬೈಲ್ ಫೋನ್ ಬಳಕೆಗೆ ನಿರ್ಬಂಧ ವಿಧಿಸಿರುವುದು ಸೇರಿದಂತೆ ಯಾವ ಕಾರಣಕ್ಕೆ ವಿದ್ಯಾರ್ಥಿನಿಯರು ನಿಲಯದಿಂದ ಹೊರಕ್ಕೆ ಹೋಗಿದ್ದರು ಎಂಬುದನ್ನು ವಿಚಾರಣೆ ಮಾಡಲಾಗುತ್ತಿದೆ’ ಎಂದು ಎಸ್ಪಿ ಗೋಯಲ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>