<p><strong>ಮುಧೋಳ (ಬಾಗಲಕೋಟೆ):</strong> ಮುಧೋಳ ಬಳಿಯ ಸಮೀರವಾಡಿಯ ಗೋದಾವರಿ ಬಯೋರಿಪೈನರಿ ಸಕ್ಕರೆ ಕಾರ್ಖಾನೆ ಕೇನ್ಯಾರ್ಡ್ನಲ್ಲಿ ನಿಂತಿದ್ದ 15ಕ್ಕೂ ಹೆಚ್ಚು ಕಬ್ಬಿನ ಟ್ರ್ಯಾಕ್ಟರ್ಗಳಿಗೆ ಕಿಡಿಗೇಡಿಗಳು ಗುರುವಾರ ಸಂಜೆ ಬೆಂಕಿ ಹಚ್ಚಿದ್ದಾರೆ.</p><p>ಕಾರ್ಖಾನೆಯ ಆರಂಭ ಮಾಡಲಾಗಿದೆ ಎಂಬ ಸುದ್ದಿ ತಿಳಿದ ರೈತರು ಮುತ್ತಿಗೆ ಹಾಕಲು ವಾಹನಗಳಲ್ಲಿ ಕಾರ್ಖಾನೆಯತ್ತ ಹೊರಟರು. ಸಂಗಾನಟ್ಟಿ ಕ್ರಾಸ್ ಬಳಿ ಎದುರಾದ ಟ್ರ್ಯಾಕ್ಟರ್ಗೆ ಕೆಲ ಕಿಡಿಗೇಡಿಗಳು ಬೆಂಕಿ ಹಚ್ಚಿದರು. ಕೂಡಲೇ ಕಾರ್ಖಾನೆಯವರು ನೀರಿನ ವಾಹನ ಕಳುಹಿಸಿ ಬೆಂಕಿ ನಂದಿಸುವ ಕೆಲಸ ಮಾಡಿದರು.</p><p>ಕಾರ್ಖಾನೆಗೆ ಹೋದಾಗ 15ಕ್ಕೂ ಹೆಚ್ಚು ಟ್ರ್ಯಾಕ್ಟರ್ಗಳು ನಿಂತಿದ್ದವು. ಕೂಡಲೇ ಅವುಗಳತ್ತ ನುಗ್ಗಿದ ಅವರು, ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಿದರು. ಕೆಲವೇ ಕ್ಷಣಗಳಲ್ಲಿ ಬೆಂಕಿ ಹೊತ್ತಿ ಉರಿಯತೊಡಗಿತು.</p><p>ರಾಜ್ಯ ಸರ್ಕಾರ ಏಕಪಕ್ಷೀಯ ನಿರ್ಣಯ ತೆಗೆದುಕೊಳ್ಳಲಾಗಿದೆ. ಹಲವು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದರೂ ಸ್ಪಂದಿಸುತ್ತಿಲ್ಲ. ರೈತರ ತಾಳ್ಮೆ ಪರೀಕ್ಷೆ ಮಾಡಿದ್ದರಿಂದ ಇಂತಹ ಅನಾಹುತವಾಗಿದೆ. ಹಾನಿ ಮಾಡುವುದು ರೈತ ಸಂಘದ ನೀತಿಯಲ್ಲ. ಕಿಡಿಗೇಡಿಗಳು ಮಾಡಿದ್ದಾರೆ ಎಂದು ರೈತ ಮುಖಂಡ ಮುತ್ತಪ್ಪ ಕೋಮಾರ ತಿಳಿಸಿದರು.</p>.ಸಕ್ಕರೆ ಕಾರ್ಖಾನೆ ಮಾಲೀಕರ ಸಮ್ಮುಖದಲ್ಲೇ ದರ ನಿಗದಿ: ಸಿಎಂ ಸಿದ್ದರಾಮಯ್ಯ .ಸಕ್ಕರೆ ಕಾರ್ಖಾನೆ ಮಾಲೀಕರ ಸಮ್ಮುಖದಲ್ಲಿಯೇ ಕಬ್ಬು ದರ ನಿಗದಿ: ಸಿಎಂ ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಧೋಳ (ಬಾಗಲಕೋಟೆ):</strong> ಮುಧೋಳ ಬಳಿಯ ಸಮೀರವಾಡಿಯ ಗೋದಾವರಿ ಬಯೋರಿಪೈನರಿ ಸಕ್ಕರೆ ಕಾರ್ಖಾನೆ ಕೇನ್ಯಾರ್ಡ್ನಲ್ಲಿ ನಿಂತಿದ್ದ 15ಕ್ಕೂ ಹೆಚ್ಚು ಕಬ್ಬಿನ ಟ್ರ್ಯಾಕ್ಟರ್ಗಳಿಗೆ ಕಿಡಿಗೇಡಿಗಳು ಗುರುವಾರ ಸಂಜೆ ಬೆಂಕಿ ಹಚ್ಚಿದ್ದಾರೆ.</p><p>ಕಾರ್ಖಾನೆಯ ಆರಂಭ ಮಾಡಲಾಗಿದೆ ಎಂಬ ಸುದ್ದಿ ತಿಳಿದ ರೈತರು ಮುತ್ತಿಗೆ ಹಾಕಲು ವಾಹನಗಳಲ್ಲಿ ಕಾರ್ಖಾನೆಯತ್ತ ಹೊರಟರು. ಸಂಗಾನಟ್ಟಿ ಕ್ರಾಸ್ ಬಳಿ ಎದುರಾದ ಟ್ರ್ಯಾಕ್ಟರ್ಗೆ ಕೆಲ ಕಿಡಿಗೇಡಿಗಳು ಬೆಂಕಿ ಹಚ್ಚಿದರು. ಕೂಡಲೇ ಕಾರ್ಖಾನೆಯವರು ನೀರಿನ ವಾಹನ ಕಳುಹಿಸಿ ಬೆಂಕಿ ನಂದಿಸುವ ಕೆಲಸ ಮಾಡಿದರು.</p><p>ಕಾರ್ಖಾನೆಗೆ ಹೋದಾಗ 15ಕ್ಕೂ ಹೆಚ್ಚು ಟ್ರ್ಯಾಕ್ಟರ್ಗಳು ನಿಂತಿದ್ದವು. ಕೂಡಲೇ ಅವುಗಳತ್ತ ನುಗ್ಗಿದ ಅವರು, ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಿದರು. ಕೆಲವೇ ಕ್ಷಣಗಳಲ್ಲಿ ಬೆಂಕಿ ಹೊತ್ತಿ ಉರಿಯತೊಡಗಿತು.</p><p>ರಾಜ್ಯ ಸರ್ಕಾರ ಏಕಪಕ್ಷೀಯ ನಿರ್ಣಯ ತೆಗೆದುಕೊಳ್ಳಲಾಗಿದೆ. ಹಲವು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದರೂ ಸ್ಪಂದಿಸುತ್ತಿಲ್ಲ. ರೈತರ ತಾಳ್ಮೆ ಪರೀಕ್ಷೆ ಮಾಡಿದ್ದರಿಂದ ಇಂತಹ ಅನಾಹುತವಾಗಿದೆ. ಹಾನಿ ಮಾಡುವುದು ರೈತ ಸಂಘದ ನೀತಿಯಲ್ಲ. ಕಿಡಿಗೇಡಿಗಳು ಮಾಡಿದ್ದಾರೆ ಎಂದು ರೈತ ಮುಖಂಡ ಮುತ್ತಪ್ಪ ಕೋಮಾರ ತಿಳಿಸಿದರು.</p>.ಸಕ್ಕರೆ ಕಾರ್ಖಾನೆ ಮಾಲೀಕರ ಸಮ್ಮುಖದಲ್ಲೇ ದರ ನಿಗದಿ: ಸಿಎಂ ಸಿದ್ದರಾಮಯ್ಯ .ಸಕ್ಕರೆ ಕಾರ್ಖಾನೆ ಮಾಲೀಕರ ಸಮ್ಮುಖದಲ್ಲಿಯೇ ಕಬ್ಬು ದರ ನಿಗದಿ: ಸಿಎಂ ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>