<p><strong>ಬಾಗಲಕೋಟೆ:</strong> ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸಿ ಹಲವು ವರ್ಷಗಳೇ ಆಗಿವೆ. ಈಗ ಅವುಗಳ ಪಟ್ಟಿಗೆ ಬಾಗಲಕೋಟೆ ನಗರಸಭೆಯೂ ಸೇರಲಿದೆ.</p>.<p>ಅ.28ಕ್ಕೆ ನಗರಸಭೆಯ ಈಗಿನ ಆಡಳಿತ ಮಂಡಳಿಯ ಅವಧಿ ಪೂರ್ಣಗೊಳ್ಳಲಿದೆ. ಅವಧಿ ಪೂರ್ಣಗೊಳ್ಳಲು ಒಂಬತ್ತು ದಿನಗಳು ಮಾತ್ರ ಉಳಿದಿದ್ದರೂ ವಾರ್ಡ್ಗಳ ಮೀಸಲಾತಿ ಪ್ರಕಟವಾಗಿಲ್ಲ. ಇದರಿಂದಾಗಿ ಚುನಾವಣಾ ವೇಳಾಪಟ್ಟಿಯೂ ಪ್ರಕಟವಾಗಿಲ್ಲ.</p>.<p>ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆ ಮಾಡಬೇಕು ಎಂಬ ಕೂಗು ಕೇಳಿ ಬರುತ್ತಲೇ ಇದೆ. ಅದರ ನಡುವೆ ಈಗ ಬಾಗಲಕೋಟೆಯದ್ದೂ ಸೇರಿದಂತೆ ರಾಜ್ಯದ ಹಲವು ನಗರಸಭೆ ಸಂಸ್ಥೆಗಳ ಅವಧಿ ಪೂರ್ಣಗೊಳ್ಳುತ್ತಿದೆ. ಮುಂದಿನ ದಿನಗಳಲ್ಲಿ ಇಲ್ಲಿಯೂ ಆಡಳಿತಾಧಿಕಾರಿಗಳ ನೇಮಕವೇ ಗತಿ ಎನ್ನುವಂತಾಗಿದೆ.</p>.<p>2018 ರಲ್ಲಿ ಈಗಿನ ಸದಸ್ಯರು ಆಯ್ಕೆಯಾಗಿದ್ದರು. ಎರಡು ವರ್ಷಗಳವರೆಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿ ಮಾಡದ್ದರಿಂದಾಗಿ ಸದಸ್ಯರಾದರೂ, ಸದಸ್ಯರಲ್ಲದಂತೆ ಇರಬೇಕಾದ ಸ್ಥಿತಿ ಎದುರಾಗಿತ್ತು. ಜನರ ಸಮಸ್ಯೆಗಳಿಗೆ ಉತ್ತರ ಹೇಳಲಾಗದೇ ಪರದಾಡಿದ್ದರು.</p>.<p>ಕೊನೆಗೆ ಎರಡು ವರ್ಷಗಳ ನಂತರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲು ನಿಗದಿ ಮಾಡಿದ ನಂತರ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದಿತ್ತು. ಎರಡೂವರೆ ವರ್ಷ ಅವಧಿ ಪೂರ್ಣಗೊಳಿಸಿದ ನಂತರ ಎರಡನೇ ಅವಧಿಗೂ ಮೀಸಲಾತಿ ನಿಗದಿ ಮಾಡದ್ದರಿಂದ 14 ತಿಂಗಳ ಕಾಲ ಅಧ್ಯಕ್ಷ, ಉಪಾಧ್ಯಕ್ಷರಿರಲಿಲ್ಲ.</p>.<p>ಮೀಸಲಾತಿ ನಿಗದಿಯಾಗದ್ದರಿಂದ ಈಗಿನ ಅಧ್ಯಕ್ಷ, ಉಪಾಧ್ಯಕ್ಷರ ಅವಧಿ ಕೇವಲ 11 ತಿಂಗಳಿಗೆ ಪೂರ್ಣಗೊಳ್ಳುತ್ತಿದೆ. ಸರ್ಕಾರದ ಮೀಸಲಾತಿ ವಿಳಂಬ ನೀತಿಯಿಂದಾಗಿ ಪೂರ್ಣಾವಧಿಗೆ ಆಡಳಿತ ನಡೆಸಲು ಸಾಧ್ಯವಾಗಿಲ್ಲ. ಆದ್ದರಿಂದ, ಇನ್ನೂ 14 ತಿಂಗಳ ಅವಧಿ ನೀಡಬೇಕು ಎಂದು ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದಾರೆ.</p>.<p>ಜಿಲ್ಲಾ ಪಂಚಾಯಿತಿಗೆ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ. ಆದರೆ, ಅವರು ಜಿಲ್ಲೆಯ ಜನರಿಗೆ ಸಿಗದ್ದರಿಂದ ಜನರು ಪರದಾಡುವಂತಾಗಿದೆ. ತಾಲ್ಲೂಕು ಪಂಚಾಯಿತಿಗಳಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ. ಈಗ ಅದೇ ಸಾಲಿಗೆ ನಗರಸಭೆಯೂ ಸೇರ್ಪಡೆಯಾಗುವ ಸಾಧ್ಯತೆಗಳಿವೆ. ಆಡಳಿತಾಧಿಕಾರಿಯಾದವರು ತಮ್ಮ ಹುದ್ದೆಯ ಜೊತೆಗೆ ಇದನ್ನೂ ನಿಭಾಯಿಸಬೇಕಾಗುತ್ತದೆ.</p>.<p>ಸ್ಥಳೀಯ ಸಂಸ್ಥೆಗಳನ್ನು ಬಲಪಡಿಸಬೇಕಾದ ಸರ್ಕಾರ, ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಪ್ರತಿನಿಧಿಗಳಾಗುವ ಅವಕಾಶ ನೀಡಬೇಕಾದ ಶಾಸಕರು ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂಬುದು ಕಾರ್ಯಕರ್ತರ ಆರೋಪ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸಿ ಹಲವು ವರ್ಷಗಳೇ ಆಗಿವೆ. ಈಗ ಅವುಗಳ ಪಟ್ಟಿಗೆ ಬಾಗಲಕೋಟೆ ನಗರಸಭೆಯೂ ಸೇರಲಿದೆ.</p>.<p>ಅ.28ಕ್ಕೆ ನಗರಸಭೆಯ ಈಗಿನ ಆಡಳಿತ ಮಂಡಳಿಯ ಅವಧಿ ಪೂರ್ಣಗೊಳ್ಳಲಿದೆ. ಅವಧಿ ಪೂರ್ಣಗೊಳ್ಳಲು ಒಂಬತ್ತು ದಿನಗಳು ಮಾತ್ರ ಉಳಿದಿದ್ದರೂ ವಾರ್ಡ್ಗಳ ಮೀಸಲಾತಿ ಪ್ರಕಟವಾಗಿಲ್ಲ. ಇದರಿಂದಾಗಿ ಚುನಾವಣಾ ವೇಳಾಪಟ್ಟಿಯೂ ಪ್ರಕಟವಾಗಿಲ್ಲ.</p>.<p>ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆ ಮಾಡಬೇಕು ಎಂಬ ಕೂಗು ಕೇಳಿ ಬರುತ್ತಲೇ ಇದೆ. ಅದರ ನಡುವೆ ಈಗ ಬಾಗಲಕೋಟೆಯದ್ದೂ ಸೇರಿದಂತೆ ರಾಜ್ಯದ ಹಲವು ನಗರಸಭೆ ಸಂಸ್ಥೆಗಳ ಅವಧಿ ಪೂರ್ಣಗೊಳ್ಳುತ್ತಿದೆ. ಮುಂದಿನ ದಿನಗಳಲ್ಲಿ ಇಲ್ಲಿಯೂ ಆಡಳಿತಾಧಿಕಾರಿಗಳ ನೇಮಕವೇ ಗತಿ ಎನ್ನುವಂತಾಗಿದೆ.</p>.<p>2018 ರಲ್ಲಿ ಈಗಿನ ಸದಸ್ಯರು ಆಯ್ಕೆಯಾಗಿದ್ದರು. ಎರಡು ವರ್ಷಗಳವರೆಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿ ಮಾಡದ್ದರಿಂದಾಗಿ ಸದಸ್ಯರಾದರೂ, ಸದಸ್ಯರಲ್ಲದಂತೆ ಇರಬೇಕಾದ ಸ್ಥಿತಿ ಎದುರಾಗಿತ್ತು. ಜನರ ಸಮಸ್ಯೆಗಳಿಗೆ ಉತ್ತರ ಹೇಳಲಾಗದೇ ಪರದಾಡಿದ್ದರು.</p>.<p>ಕೊನೆಗೆ ಎರಡು ವರ್ಷಗಳ ನಂತರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲು ನಿಗದಿ ಮಾಡಿದ ನಂತರ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದಿತ್ತು. ಎರಡೂವರೆ ವರ್ಷ ಅವಧಿ ಪೂರ್ಣಗೊಳಿಸಿದ ನಂತರ ಎರಡನೇ ಅವಧಿಗೂ ಮೀಸಲಾತಿ ನಿಗದಿ ಮಾಡದ್ದರಿಂದ 14 ತಿಂಗಳ ಕಾಲ ಅಧ್ಯಕ್ಷ, ಉಪಾಧ್ಯಕ್ಷರಿರಲಿಲ್ಲ.</p>.<p>ಮೀಸಲಾತಿ ನಿಗದಿಯಾಗದ್ದರಿಂದ ಈಗಿನ ಅಧ್ಯಕ್ಷ, ಉಪಾಧ್ಯಕ್ಷರ ಅವಧಿ ಕೇವಲ 11 ತಿಂಗಳಿಗೆ ಪೂರ್ಣಗೊಳ್ಳುತ್ತಿದೆ. ಸರ್ಕಾರದ ಮೀಸಲಾತಿ ವಿಳಂಬ ನೀತಿಯಿಂದಾಗಿ ಪೂರ್ಣಾವಧಿಗೆ ಆಡಳಿತ ನಡೆಸಲು ಸಾಧ್ಯವಾಗಿಲ್ಲ. ಆದ್ದರಿಂದ, ಇನ್ನೂ 14 ತಿಂಗಳ ಅವಧಿ ನೀಡಬೇಕು ಎಂದು ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದಾರೆ.</p>.<p>ಜಿಲ್ಲಾ ಪಂಚಾಯಿತಿಗೆ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ. ಆದರೆ, ಅವರು ಜಿಲ್ಲೆಯ ಜನರಿಗೆ ಸಿಗದ್ದರಿಂದ ಜನರು ಪರದಾಡುವಂತಾಗಿದೆ. ತಾಲ್ಲೂಕು ಪಂಚಾಯಿತಿಗಳಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ. ಈಗ ಅದೇ ಸಾಲಿಗೆ ನಗರಸಭೆಯೂ ಸೇರ್ಪಡೆಯಾಗುವ ಸಾಧ್ಯತೆಗಳಿವೆ. ಆಡಳಿತಾಧಿಕಾರಿಯಾದವರು ತಮ್ಮ ಹುದ್ದೆಯ ಜೊತೆಗೆ ಇದನ್ನೂ ನಿಭಾಯಿಸಬೇಕಾಗುತ್ತದೆ.</p>.<p>ಸ್ಥಳೀಯ ಸಂಸ್ಥೆಗಳನ್ನು ಬಲಪಡಿಸಬೇಕಾದ ಸರ್ಕಾರ, ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಪ್ರತಿನಿಧಿಗಳಾಗುವ ಅವಕಾಶ ನೀಡಬೇಕಾದ ಶಾಸಕರು ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂಬುದು ಕಾರ್ಯಕರ್ತರ ಆರೋಪ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>