<p><strong>ಬಾಗಲಕೋಟೆ</strong>: ನಗರದ ವಿವಿಧೆಡೆ ಪೊಲೀಸ್ ಬಂದೋಬಸ್ತ್ ಬಿಗಿಗೊಳಿಸಲಾಗಿದೆ. ಕಿಲ್ಲಾ ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಈ ನಡುವೆ ಕೆಲ ಹಿಂದೂ ಮುಖಂಡರಿಗೆ ಪ್ರತಿಭಟನೆ ಕೈಗೊಂಡಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ನೋಟಿಸ್ ಜಾರಿಗೊಳಿಸಲಾಗಿದೆ.</p>.<p>ವಿವಿಧೆಡೆ ಮಂಗಳವಾರ ರಕ್ಷಣಾ ಪಡೆಗಳವರು ಪಥ ಸಂಚಲನ ನಡೆಸಿದರು. ಪಂಕಾ ಮಸೀದಿ ಬಳಿಯ ಬಂದೋಬಸ್ತ್ ಮುಂದುವರೆಸಲಾಗಿದೆ. ಸಾರ್ವಜನಿಕ ಸಂಚಾರಕ್ಕೆ ಎಲ್ಲ ರಸ್ತೆಗಳನ್ನು ಮುಕ್ತಗೊಳಿಸಲಾಗಿತ್ತು.</p>.<p>ಫೆ.28ರವರೆಗೆ ಬಾಗಲಕೋಟೆಯಲ್ಲಿ ನಿಷೇಧಾಜ್ಞೆಯನ್ನು ಮುಂದುವರೆಸಲಾಗಿದೆ. ಶಾಂತಿ ಕಾಪಾಡುವ ದೃಷ್ಟಿಯಿಂದ, ಹೋಳಿ, ಯುಗಾದಿ, ರಂಜಾನ್ ಹಬ್ಬಗಳು ಬರುವುದರಿಂದ ಯಾವುದೇ ಪ್ರತಿಭಟನೆ ಮಾಡದಂತೆ ಮನವಿ ಮಾಡಲಾಗಿದೆ.</p>.<p>ನಿಷೇಧಾಜ್ಞೆ ಮೀರಿ ಯಾವುದೇ ಸಂಘಟನೆಗಳು ಬಂದ್ ಅಥವಾ ಪ್ರತಿಭಟನೆ ಕೈಗೊಂಡಲ್ಲಿ, ನಗರದಲ್ಲಿ ಅಶಾಂತಿ ಮೂಡಿಸಿದಲ್ಲಿ ಅದಕ್ಕೆ ಸಂಘಟಕರನ್ನೇ ನೇರವಾಗಿ ಹೊಣೆಗಾರರನ್ನಾಗಿಸಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಅವರಿಗೆ ನೀಡಿದ ನೋಟಿಸ್ನಲ್ಲಿ ಎಚ್ಚರಿಸಲಾಗಿದೆ.</p>.<p>16 ಪ್ರಕರಣ ದಾಖಲು: ಯಾವುದೇ ಸಮಾಜ ವಿರೋಧಿ ವ್ಯಕ್ತಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ವಿಷಯ ಪೋಸ್ಟ್ ಮಾಡಲು ಅವಕಾಶ ನೀಡುವುದಿಲ್ಲ. ಆಕ್ಷೇಪಾರ್ಹ ಪೋಸ್ಟ್ಗಳಿಗೆ ಸಂಬಂಧಿಸಿದಂತೆ 16 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಸಿದ್ದಾರ್ಥ ಗೋಯಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ವಿಷಯಗಳನ್ನು ಹಂಚುವವರು ತಕ್ಷಣವೇ ಇಂತಹ ಕೃತ್ಯಗಳನ್ನು ನಿಲ್ಲಿಸಬೇಕು ಎಂದು ಸೂಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ನಗರದ ವಿವಿಧೆಡೆ ಪೊಲೀಸ್ ಬಂದೋಬಸ್ತ್ ಬಿಗಿಗೊಳಿಸಲಾಗಿದೆ. ಕಿಲ್ಲಾ ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಈ ನಡುವೆ ಕೆಲ ಹಿಂದೂ ಮುಖಂಡರಿಗೆ ಪ್ರತಿಭಟನೆ ಕೈಗೊಂಡಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ನೋಟಿಸ್ ಜಾರಿಗೊಳಿಸಲಾಗಿದೆ.</p>.<p>ವಿವಿಧೆಡೆ ಮಂಗಳವಾರ ರಕ್ಷಣಾ ಪಡೆಗಳವರು ಪಥ ಸಂಚಲನ ನಡೆಸಿದರು. ಪಂಕಾ ಮಸೀದಿ ಬಳಿಯ ಬಂದೋಬಸ್ತ್ ಮುಂದುವರೆಸಲಾಗಿದೆ. ಸಾರ್ವಜನಿಕ ಸಂಚಾರಕ್ಕೆ ಎಲ್ಲ ರಸ್ತೆಗಳನ್ನು ಮುಕ್ತಗೊಳಿಸಲಾಗಿತ್ತು.</p>.<p>ಫೆ.28ರವರೆಗೆ ಬಾಗಲಕೋಟೆಯಲ್ಲಿ ನಿಷೇಧಾಜ್ಞೆಯನ್ನು ಮುಂದುವರೆಸಲಾಗಿದೆ. ಶಾಂತಿ ಕಾಪಾಡುವ ದೃಷ್ಟಿಯಿಂದ, ಹೋಳಿ, ಯುಗಾದಿ, ರಂಜಾನ್ ಹಬ್ಬಗಳು ಬರುವುದರಿಂದ ಯಾವುದೇ ಪ್ರತಿಭಟನೆ ಮಾಡದಂತೆ ಮನವಿ ಮಾಡಲಾಗಿದೆ.</p>.<p>ನಿಷೇಧಾಜ್ಞೆ ಮೀರಿ ಯಾವುದೇ ಸಂಘಟನೆಗಳು ಬಂದ್ ಅಥವಾ ಪ್ರತಿಭಟನೆ ಕೈಗೊಂಡಲ್ಲಿ, ನಗರದಲ್ಲಿ ಅಶಾಂತಿ ಮೂಡಿಸಿದಲ್ಲಿ ಅದಕ್ಕೆ ಸಂಘಟಕರನ್ನೇ ನೇರವಾಗಿ ಹೊಣೆಗಾರರನ್ನಾಗಿಸಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಅವರಿಗೆ ನೀಡಿದ ನೋಟಿಸ್ನಲ್ಲಿ ಎಚ್ಚರಿಸಲಾಗಿದೆ.</p>.<p>16 ಪ್ರಕರಣ ದಾಖಲು: ಯಾವುದೇ ಸಮಾಜ ವಿರೋಧಿ ವ್ಯಕ್ತಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ವಿಷಯ ಪೋಸ್ಟ್ ಮಾಡಲು ಅವಕಾಶ ನೀಡುವುದಿಲ್ಲ. ಆಕ್ಷೇಪಾರ್ಹ ಪೋಸ್ಟ್ಗಳಿಗೆ ಸಂಬಂಧಿಸಿದಂತೆ 16 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಸಿದ್ದಾರ್ಥ ಗೋಯಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ವಿಷಯಗಳನ್ನು ಹಂಚುವವರು ತಕ್ಷಣವೇ ಇಂತಹ ಕೃತ್ಯಗಳನ್ನು ನಿಲ್ಲಿಸಬೇಕು ಎಂದು ಸೂಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>