<p><strong>ಬಾಗಲಕೋಟೆ:</strong> ‘ಕಲ್ಲು ತೂರಾಟದ ಸಂದರ್ಭದಲ್ಲಿ ಪಂಕಾ ಮಸೀದಿಯಲ್ಲಿ ಸೇರಿದ್ದ ಎಲ್ಲರ ವಿರುದ್ಧ ಪ್ರಕರಣ ದಾಖಲಿಸಬೇಕು. ಮಸೀದಿಯನ್ನು 15 ದಿನಗಳಲ್ಲಿ ಬಂದ್ ಮಾಡಬೇಕು’ ಎಂದು ಆಗ್ರಹಿಸಿ ಹಿಂದೂ ಹಿತರಕ್ಷಣಾ ಸಮಿತಿ ಸದಸ್ಯರು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.</p>.<p>ಹಿಂದೂ ಜಾಗರಣ ವೇದಿಕೆ ಉತ್ತರ ಪ್ರಾಂತ ಸಹ ಸಂಚಾಲಕ ಶ್ರೀಕಾಂತ ಹೊಸಕೆರೆ ಮಾತನಾಡಿ, ‘ನಾಲ್ಕು ದಶಕಗಳಿಂದಲೂ ಅದೇ ಮಸೀದಿಯಿಂದ ಕಲ್ಲು, ಚಪ್ಪಲಿ ಎಸೆದ ಘಟನೆಗಳು ಹಲವಾರು ಬಾರಿ ನಡೆದಿವೆ. ಆದ್ದರಿಂದ ಆ ಮಸೀದಿಯನ್ನು ಶಾಶ್ವತವಾಗಿ ಬಂದ್ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>‘ಮಸೀದಿ ಸಮಿತಿ ಮತ್ತು ಘಟನೆ ನಡೆದಾಗ, ಮಸೀದಿಯಲ್ಲಿದ್ದವರ ವಿರುದ್ಧ ಪ್ರಕರಣ ದಾಖಲಿಸಬೇಕು. ಪೊಲೀಸರು ಅಹಿತಕರ ಘಟನೆ ಕಾರಣವಾದ ಮಸೀದಿ ಬಂದ್ ಮಾಡುವ ಬದಲು ಇಡೀ ಊರನ್ನೇ ಬಂದ್ ಮಾಡಿದ್ದಾರೆ’ ಎಂದು ಆರೋಪಿಸಿದರು. </p>.<p>ಬಸವಾನಂದ ಸ್ವಾಮೀಜಿ, ಹಿಂದೂ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎಂ.ಆರ್. ಶಿಂಧೆ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ‘ಕಲ್ಲು ತೂರಾಟದ ಸಂದರ್ಭದಲ್ಲಿ ಪಂಕಾ ಮಸೀದಿಯಲ್ಲಿ ಸೇರಿದ್ದ ಎಲ್ಲರ ವಿರುದ್ಧ ಪ್ರಕರಣ ದಾಖಲಿಸಬೇಕು. ಮಸೀದಿಯನ್ನು 15 ದಿನಗಳಲ್ಲಿ ಬಂದ್ ಮಾಡಬೇಕು’ ಎಂದು ಆಗ್ರಹಿಸಿ ಹಿಂದೂ ಹಿತರಕ್ಷಣಾ ಸಮಿತಿ ಸದಸ್ಯರು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.</p>.<p>ಹಿಂದೂ ಜಾಗರಣ ವೇದಿಕೆ ಉತ್ತರ ಪ್ರಾಂತ ಸಹ ಸಂಚಾಲಕ ಶ್ರೀಕಾಂತ ಹೊಸಕೆರೆ ಮಾತನಾಡಿ, ‘ನಾಲ್ಕು ದಶಕಗಳಿಂದಲೂ ಅದೇ ಮಸೀದಿಯಿಂದ ಕಲ್ಲು, ಚಪ್ಪಲಿ ಎಸೆದ ಘಟನೆಗಳು ಹಲವಾರು ಬಾರಿ ನಡೆದಿವೆ. ಆದ್ದರಿಂದ ಆ ಮಸೀದಿಯನ್ನು ಶಾಶ್ವತವಾಗಿ ಬಂದ್ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>‘ಮಸೀದಿ ಸಮಿತಿ ಮತ್ತು ಘಟನೆ ನಡೆದಾಗ, ಮಸೀದಿಯಲ್ಲಿದ್ದವರ ವಿರುದ್ಧ ಪ್ರಕರಣ ದಾಖಲಿಸಬೇಕು. ಪೊಲೀಸರು ಅಹಿತಕರ ಘಟನೆ ಕಾರಣವಾದ ಮಸೀದಿ ಬಂದ್ ಮಾಡುವ ಬದಲು ಇಡೀ ಊರನ್ನೇ ಬಂದ್ ಮಾಡಿದ್ದಾರೆ’ ಎಂದು ಆರೋಪಿಸಿದರು. </p>.<p>ಬಸವಾನಂದ ಸ್ವಾಮೀಜಿ, ಹಿಂದೂ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎಂ.ಆರ್. ಶಿಂಧೆ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>