<p><strong>ಮಹಾಲಿಂಗಪುರ (ಬಾಗಲಕೋಟೆ ಜಿಲ್ಲೆ):</strong> ಸಮೀಪದ ಢವಳೇಶ್ವರ ಗ್ರಾಮದ ಮೊರಬದ ತೋಟದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರುವ ಬಾಲಕನಿಗೆ 1ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ಕಟ್ಟಿಗೆಯಿಂದ ಬಲಗಣ್ಣಿಗೆ ಚುಚ್ಚಿ ಗಾಯಗೊಳಿಸಿದ್ದಾನೆ.</p>.<p>ಪೆನ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಜಗಳವಾಗಿದೆ. ವಿದ್ಯಾರ್ಥಿಗಳ ಮೇಲೆ ನಿಗಾವಹಿಸದ ಮುಖ್ಯಶಿಕ್ಷಕಿ ಜಯಶ್ರೀ ನಡುವಿನಕೇರಿ ಹಾಗೂ ಅತಿಥಿ ಶಿಕ್ಷಕಿ ಶಿಲ್ಪಾ ಅಂಬಿ ಅವರ ವಿರುದ್ಧ ಗಾಯಗೊಂಡ ಬಾಲಕನ ತಂದೆ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಸೆ.4 ರಂದು ಪ್ರಕರಣ ದಾಖಲಿಸಿದ್ದಾರೆ.</p>.<p>‘ವಿದ್ಯಾರ್ಥಿ ಬಲಗಣ್ಣಿನ ಕಣ್ಣುಗುಡ್ಡೆಗೆ ಹಾನಿಯಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆದಿದೆ. 40 ದಿನದ ನಂತರ ಹಾನಿ ಸ್ವರೂಪ ತಿಳಿಯಲಿದೆ ಎಂದು ವೈದ್ಯರು ತಿಳಿಸಿದ್ದಾರೆ’ ಎಂದು ಮುಧೋಳ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಂ. ಮುಲ್ಲಾ ತಿಳಿಸಿದರು. ‘ಶಿಕ್ಷಕರಿಗೆ ನೋಟಿಸ್ ನೀಡಲಾಗಿದೆ’ ಎಂದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಲಿಂಗಪುರ (ಬಾಗಲಕೋಟೆ ಜಿಲ್ಲೆ):</strong> ಸಮೀಪದ ಢವಳೇಶ್ವರ ಗ್ರಾಮದ ಮೊರಬದ ತೋಟದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರುವ ಬಾಲಕನಿಗೆ 1ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ಕಟ್ಟಿಗೆಯಿಂದ ಬಲಗಣ್ಣಿಗೆ ಚುಚ್ಚಿ ಗಾಯಗೊಳಿಸಿದ್ದಾನೆ.</p>.<p>ಪೆನ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಜಗಳವಾಗಿದೆ. ವಿದ್ಯಾರ್ಥಿಗಳ ಮೇಲೆ ನಿಗಾವಹಿಸದ ಮುಖ್ಯಶಿಕ್ಷಕಿ ಜಯಶ್ರೀ ನಡುವಿನಕೇರಿ ಹಾಗೂ ಅತಿಥಿ ಶಿಕ್ಷಕಿ ಶಿಲ್ಪಾ ಅಂಬಿ ಅವರ ವಿರುದ್ಧ ಗಾಯಗೊಂಡ ಬಾಲಕನ ತಂದೆ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಸೆ.4 ರಂದು ಪ್ರಕರಣ ದಾಖಲಿಸಿದ್ದಾರೆ.</p>.<p>‘ವಿದ್ಯಾರ್ಥಿ ಬಲಗಣ್ಣಿನ ಕಣ್ಣುಗುಡ್ಡೆಗೆ ಹಾನಿಯಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆದಿದೆ. 40 ದಿನದ ನಂತರ ಹಾನಿ ಸ್ವರೂಪ ತಿಳಿಯಲಿದೆ ಎಂದು ವೈದ್ಯರು ತಿಳಿಸಿದ್ದಾರೆ’ ಎಂದು ಮುಧೋಳ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಂ. ಮುಲ್ಲಾ ತಿಳಿಸಿದರು. ‘ಶಿಕ್ಷಕರಿಗೆ ನೋಟಿಸ್ ನೀಡಲಾಗಿದೆ’ ಎಂದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>