<p><strong>ಬಾಗಲಕೋಟೆ</strong>: ಶೈಕ್ಷಣಿಕ ವರ್ಷದ ಆರಂಭದ ಅಂಗವಾಗಿ ಜೂನ್ 1 ರಿಂದ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ ಆಂದೋಲನ ಹಮ್ಮಿಕೊಳ್ಳಲಾಗಿದೆ. ಜೊತೆಗೆ ಶಾಲೆಗೆ ಮಕ್ಕಳನ್ನು ಸಂಭ್ರಮದಿಂದ ಬರಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.</p>.<p>ಜಿಲ್ಲೆಯಲ್ಲಿ 2,252 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿವೆ. 1.82 ಲಕ್ಷ ವಿದ್ಯಾರ್ಥಿಗಳಿದ್ದು, ಬಹುತೇಕ ಶಾಲೆಗಳು ಸೋಮವಾರದಿಂದಲೇ ಆರಂಭಗೊಳ್ಳಲಿವೆ. ಈಗಾಗಲೇ ಶಾಲೆಯ ಕೊಠಡಿ, ಶಾಲಾ ಆವರಣವನ್ನು ಸ್ವಚ್ಛಗೊಳಿಸಲಾಗಿದೆ. ಬಿಸಿಯೂಟಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಉಚಿತ ಪಠ್ಯಪುಸ್ತಕಗಳನ್ನು ಮೊದಲ ದಿನವೇ ವಿತರಿಸಲಾಗುತ್ತದೆ.</p>.<p>‘ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪೋಷಕರ ಸಹಭಾಗಿತ್ವದಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಗಿದೆ’ ಎಂದು ಡಿಡಿಪಿಐ ಎ.ಜಿ. ಮನ್ನಿಕೇರಿ ತಿಳಿಸಿದರು.</p>.<p>ಮಕ್ಕಳನ್ನು ಆತ್ಮೀಯವಾಗಿ ಶಾಲೆಗೆ ಬರಮಾಡಿಕೊಳ್ಳಲು ವಿಶೇಷ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಶಾಲಾ ಆವರಣವನ್ನು ತೋರಣ, ಬಲೂನ್ಗಳಿಂದ ಅಲಂಕಾರಗೊಳಿಸಲಾಗುತ್ತಿದೆ.</p>.<p>ವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಲಭ್ಯಗಳೊಂದಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಉತ್ತಮ ಗುಣಮಟ್ಟದ ಶೂ ಹಾಗೂ ಸಾಕ್ಸ್ ನೀಡಲಾಗುತ್ತಿದೆ. ಈ ವರ್ಷದಿಂದ ಜಿಲ್ಲೆಯ ಎಲ್ಲ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಕಲಿಕೆ ಪ್ರಾರಂಭಿಸಲಾಗುತ್ತಿದೆ.</p>.<p>ಕೆ.ಜಿ.ಎಸ್, ಪಿ.ಎಂ.ಶ್ರೀ, ಆದರ್ಶ ವಿದ್ಯಾಲಯ ಹಾಗೂ ಕೆ.ಜಿ.ಬಿ.ವಿ ಗಳಂತಹ ಮಾದರಿ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗಿದೆ. ರಾಗಿ ಮಾಲ್ಟ್, ಸಕ್ಕರೆ ಮಿಶ್ರಿತ ಹಾಲು, ಮಧ್ಯಾಹ್ನ ಬಿಸಿಯೂಟ, ಮೊಟ್ಟೆ, ಬಾಳೆಹಣ್ಣುಗಳನ್ನು ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.</p>.<p>ಗ್ರಂಥಾಲಯ, ಪ್ರಯೋಗಾಲಯ, ಸ್ಮಾರ್ಟ್ ಕ್ಲಾಸ್ ಸೌಲಭ್ಯವನ್ನು ಶಾಲೆಗಳಲ್ಲಿ ಕಲ್ಪಿಸಲಾಗಿದೆ.</p>.<p>ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಓದಿಸುವ ಪಾಲಕರಿಗೆ ಆರ್ಥಿಕ ಹೊರೆ ಇರುವುದಿಲ್ಲ. ಆದ್ದರಿಂದ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎ.ಸಿ.ಮನ್ನಿಕೇರಿ ತಮ್ಮ ತಂಡದೊಂದಿಗೆ ಮನೆ, ಮನೆಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-19-1425519465</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಶೈಕ್ಷಣಿಕ ವರ್ಷದ ಆರಂಭದ ಅಂಗವಾಗಿ ಜೂನ್ 1 ರಿಂದ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ ಆಂದೋಲನ ಹಮ್ಮಿಕೊಳ್ಳಲಾಗಿದೆ. ಜೊತೆಗೆ ಶಾಲೆಗೆ ಮಕ್ಕಳನ್ನು ಸಂಭ್ರಮದಿಂದ ಬರಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.</p>.<p>ಜಿಲ್ಲೆಯಲ್ಲಿ 2,252 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿವೆ. 1.82 ಲಕ್ಷ ವಿದ್ಯಾರ್ಥಿಗಳಿದ್ದು, ಬಹುತೇಕ ಶಾಲೆಗಳು ಸೋಮವಾರದಿಂದಲೇ ಆರಂಭಗೊಳ್ಳಲಿವೆ. ಈಗಾಗಲೇ ಶಾಲೆಯ ಕೊಠಡಿ, ಶಾಲಾ ಆವರಣವನ್ನು ಸ್ವಚ್ಛಗೊಳಿಸಲಾಗಿದೆ. ಬಿಸಿಯೂಟಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಉಚಿತ ಪಠ್ಯಪುಸ್ತಕಗಳನ್ನು ಮೊದಲ ದಿನವೇ ವಿತರಿಸಲಾಗುತ್ತದೆ.</p>.<p>‘ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪೋಷಕರ ಸಹಭಾಗಿತ್ವದಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಗಿದೆ’ ಎಂದು ಡಿಡಿಪಿಐ ಎ.ಜಿ. ಮನ್ನಿಕೇರಿ ತಿಳಿಸಿದರು.</p>.<p>ಮಕ್ಕಳನ್ನು ಆತ್ಮೀಯವಾಗಿ ಶಾಲೆಗೆ ಬರಮಾಡಿಕೊಳ್ಳಲು ವಿಶೇಷ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಶಾಲಾ ಆವರಣವನ್ನು ತೋರಣ, ಬಲೂನ್ಗಳಿಂದ ಅಲಂಕಾರಗೊಳಿಸಲಾಗುತ್ತಿದೆ.</p>.<p>ವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಲಭ್ಯಗಳೊಂದಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಉತ್ತಮ ಗುಣಮಟ್ಟದ ಶೂ ಹಾಗೂ ಸಾಕ್ಸ್ ನೀಡಲಾಗುತ್ತಿದೆ. ಈ ವರ್ಷದಿಂದ ಜಿಲ್ಲೆಯ ಎಲ್ಲ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಕಲಿಕೆ ಪ್ರಾರಂಭಿಸಲಾಗುತ್ತಿದೆ.</p>.<p>ಕೆ.ಜಿ.ಎಸ್, ಪಿ.ಎಂ.ಶ್ರೀ, ಆದರ್ಶ ವಿದ್ಯಾಲಯ ಹಾಗೂ ಕೆ.ಜಿ.ಬಿ.ವಿ ಗಳಂತಹ ಮಾದರಿ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗಿದೆ. ರಾಗಿ ಮಾಲ್ಟ್, ಸಕ್ಕರೆ ಮಿಶ್ರಿತ ಹಾಲು, ಮಧ್ಯಾಹ್ನ ಬಿಸಿಯೂಟ, ಮೊಟ್ಟೆ, ಬಾಳೆಹಣ್ಣುಗಳನ್ನು ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.</p>.<p>ಗ್ರಂಥಾಲಯ, ಪ್ರಯೋಗಾಲಯ, ಸ್ಮಾರ್ಟ್ ಕ್ಲಾಸ್ ಸೌಲಭ್ಯವನ್ನು ಶಾಲೆಗಳಲ್ಲಿ ಕಲ್ಪಿಸಲಾಗಿದೆ.</p>.<p>ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಓದಿಸುವ ಪಾಲಕರಿಗೆ ಆರ್ಥಿಕ ಹೊರೆ ಇರುವುದಿಲ್ಲ. ಆದ್ದರಿಂದ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎ.ಸಿ.ಮನ್ನಿಕೇರಿ ತಮ್ಮ ತಂಡದೊಂದಿಗೆ ಮನೆ, ಮನೆಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-19-1425519465</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>