<p><strong>ಬಾಗಲಕೋಟೆ:</strong> ‘ತೋಟಗಾರಿಕೆ ವಿಶ್ವವಿದ್ಯಾಲಯದ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಉಪಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಶೀಘ್ರವೇ ಅತ್ಯಾಧುನಿಕ ನಕ್ಷತ್ರ ಲೋಕ ಹಾಗೂ ಇತರೆ ಒಳಾಂಗಣ ವಿಜ್ಞಾನ ಉಪಕರಣಗಳನ್ನು ತರಿಸಲಾಗುತ್ತದೆ’ ಎಂದು ತೋಟಗಾರಿಕೆ ವಿಶ್ವ ವಿದ್ಯಾಲಯದ ಕುಲಪತಿ ಡಾ. ಕೆ.ಎಂ.ಇಂದಿರೇಶ ತಿಳಿಸಿದರು.</p>.<p>ಇಲ್ಲಿನ ತೋಟಗಾರಿಕೆ ವಿಶ್ವ ವಿದ್ಯಾಲಯದಲ್ಲಿ ಮಂಗಳವಾರ ನಡೆದ ವಿಜ್ಞಾನ ಕೇಂದ್ರದ ಸಲಹಾ ಸಮಿತಿಯ ಸಭೆಯಲ್ಲಿ ಮಾತನಾಡಿ, ‘ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ, ಜನಸಾಮಾನ್ಯರಲ್ಲಿ ವಿಜ್ಞಾನದ ಅರಿವು ಹಾಗೂ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ವಿಜ್ಞಾನ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದೆ’ ಎಂದರು.</p>.<p>‘ಈಗಾಗಲೇ ₹ 90 ಲಕ್ಷ ವೆಚ್ಚದಲ್ಲಿ ಆಧುನಿಕ ನಕ್ಷತ್ರ ಲೋಕ ಹಾಗೂ ಇತರೆ ವಿಜ್ಞಾನ ವಸ್ತುಗಳನ್ನು ಖರೀದಿಸಲು ರಾಜ್ಯ ವಿಜ್ಞಾನ ತಂತ್ರಜ್ಞಾನ ಮಂಡಳಿಯಿಂದ ಅನುಮತಿ ದೊರೆತಿದೆ’ ಎಂದರು.</p>.<p>ವಿಶ್ವವಿದ್ಯಾಲಯದ ವಿಶೇಷ ಅಧಿಕಾರಿ ಡಾ.ಅಶೋಕ ಆಲೂರ ಮಾತನಾಡಿ, ‘ಈಗಾಗಲೇ ₹ 4 ಕೋಟಿ ವೆಚ್ಚದಲ್ಲಿ ಬೃಹತ್ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ವಿಜ್ಞಾನ ಕೇಂದ್ರದ ಸುತ್ತಲೂ ಉತ್ತಮ ಉದ್ಯಾನ ನಿರ್ಮಾಣಕ್ಕೆ₹ 25 ಲಕ್ಷ ಹಾಗೂ ಪ್ರಸಕ್ತ ಸಾಲಿನ ವಿವಿಧ ಕಾರ್ಯಕ್ರಮಗಳಿಗೆ, ಸಿಬ್ಬಂದಿ ಖರ್ಚಿಗೆ₹ 30 ಲಕ್ಷ ವ್ಯಯಿಸಲಾಗುತ್ತದೆ’ ಎಂದರು.</p>.<p>‘ಕಟ್ಟಡದಲ್ಲಿ ವಿವಿಧ ಗ್ಯಾಲರಿಗಳನ್ನು ಪ್ರದರ್ಶನ ಮಳಿಗೆ, ವಿವಿಧ ವಿಷಯಗಳ ಪ್ರಾತ್ಯಕ್ಷಿಕೆಗಳನ್ನು ನಿರ್ಮಿಸಲಾಗಿದೆ. ಭಾರತೀಯ ವಿಜ್ಞಾನಗಳ ಕುರಿತು ಉಪನ್ಯಾಸ ಕಾರ್ಯಕ್ರಮಗಳನ್ನು, ಜೀವ ವೈವಿಧ್ಯ, ಪರಿಸರ, ಆಹಾರ, ವಿಜ್ಞಾನ ದಿನ, ಮಹಿಳಾ ದಿನ, ಜಲದಿನಗಳನ್ನು ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಏರ್ಪಡಿಸಲಾಗುವುದು’ ಎಂದರು.</p>.<p>ಬಿವಿವಿ ಸಂಘದ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಆರ್.ಎನ್.ಹೆರಕಲ್, ಸಲಹಾ ಸಮಿತಿ ಸದಸ್ಯ ಪ್ರೊ. ಸಿ.ಜಿ.ಹವಾಲ್ದಾರ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ‘ತೋಟಗಾರಿಕೆ ವಿಶ್ವವಿದ್ಯಾಲಯದ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಉಪಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಶೀಘ್ರವೇ ಅತ್ಯಾಧುನಿಕ ನಕ್ಷತ್ರ ಲೋಕ ಹಾಗೂ ಇತರೆ ಒಳಾಂಗಣ ವಿಜ್ಞಾನ ಉಪಕರಣಗಳನ್ನು ತರಿಸಲಾಗುತ್ತದೆ’ ಎಂದು ತೋಟಗಾರಿಕೆ ವಿಶ್ವ ವಿದ್ಯಾಲಯದ ಕುಲಪತಿ ಡಾ. ಕೆ.ಎಂ.ಇಂದಿರೇಶ ತಿಳಿಸಿದರು.</p>.<p>ಇಲ್ಲಿನ ತೋಟಗಾರಿಕೆ ವಿಶ್ವ ವಿದ್ಯಾಲಯದಲ್ಲಿ ಮಂಗಳವಾರ ನಡೆದ ವಿಜ್ಞಾನ ಕೇಂದ್ರದ ಸಲಹಾ ಸಮಿತಿಯ ಸಭೆಯಲ್ಲಿ ಮಾತನಾಡಿ, ‘ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ, ಜನಸಾಮಾನ್ಯರಲ್ಲಿ ವಿಜ್ಞಾನದ ಅರಿವು ಹಾಗೂ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ವಿಜ್ಞಾನ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದೆ’ ಎಂದರು.</p>.<p>‘ಈಗಾಗಲೇ ₹ 90 ಲಕ್ಷ ವೆಚ್ಚದಲ್ಲಿ ಆಧುನಿಕ ನಕ್ಷತ್ರ ಲೋಕ ಹಾಗೂ ಇತರೆ ವಿಜ್ಞಾನ ವಸ್ತುಗಳನ್ನು ಖರೀದಿಸಲು ರಾಜ್ಯ ವಿಜ್ಞಾನ ತಂತ್ರಜ್ಞಾನ ಮಂಡಳಿಯಿಂದ ಅನುಮತಿ ದೊರೆತಿದೆ’ ಎಂದರು.</p>.<p>ವಿಶ್ವವಿದ್ಯಾಲಯದ ವಿಶೇಷ ಅಧಿಕಾರಿ ಡಾ.ಅಶೋಕ ಆಲೂರ ಮಾತನಾಡಿ, ‘ಈಗಾಗಲೇ ₹ 4 ಕೋಟಿ ವೆಚ್ಚದಲ್ಲಿ ಬೃಹತ್ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ವಿಜ್ಞಾನ ಕೇಂದ್ರದ ಸುತ್ತಲೂ ಉತ್ತಮ ಉದ್ಯಾನ ನಿರ್ಮಾಣಕ್ಕೆ₹ 25 ಲಕ್ಷ ಹಾಗೂ ಪ್ರಸಕ್ತ ಸಾಲಿನ ವಿವಿಧ ಕಾರ್ಯಕ್ರಮಗಳಿಗೆ, ಸಿಬ್ಬಂದಿ ಖರ್ಚಿಗೆ₹ 30 ಲಕ್ಷ ವ್ಯಯಿಸಲಾಗುತ್ತದೆ’ ಎಂದರು.</p>.<p>‘ಕಟ್ಟಡದಲ್ಲಿ ವಿವಿಧ ಗ್ಯಾಲರಿಗಳನ್ನು ಪ್ರದರ್ಶನ ಮಳಿಗೆ, ವಿವಿಧ ವಿಷಯಗಳ ಪ್ರಾತ್ಯಕ್ಷಿಕೆಗಳನ್ನು ನಿರ್ಮಿಸಲಾಗಿದೆ. ಭಾರತೀಯ ವಿಜ್ಞಾನಗಳ ಕುರಿತು ಉಪನ್ಯಾಸ ಕಾರ್ಯಕ್ರಮಗಳನ್ನು, ಜೀವ ವೈವಿಧ್ಯ, ಪರಿಸರ, ಆಹಾರ, ವಿಜ್ಞಾನ ದಿನ, ಮಹಿಳಾ ದಿನ, ಜಲದಿನಗಳನ್ನು ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಏರ್ಪಡಿಸಲಾಗುವುದು’ ಎಂದರು.</p>.<p>ಬಿವಿವಿ ಸಂಘದ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಆರ್.ಎನ್.ಹೆರಕಲ್, ಸಲಹಾ ಸಮಿತಿ ಸದಸ್ಯ ಪ್ರೊ. ಸಿ.ಜಿ.ಹವಾಲ್ದಾರ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>