<p><strong>ಬಾಗಲಕೋಟೆ:</strong> ಕುಡಿತದ ಚಟಕ್ಕೆ ದಾಸನಾಗಿದ್ದ ಪುತ್ರ, ಹಣದ ವಿಚಾರಕ್ಕೆ ಸಂಬಂಧಿಸಿ ವಾಗ್ವಾದ ನಡೆದು ತಾಯಿಯನ್ನೇ ಆಯುಧದಿಂದ ಹೊಡೆದು ಗುರುವಾರ ಕೊಲೆ ಮಾಡಿದ್ದಾನೆ.</p>.<p>ಕಲಾದಗಿ ಪೊಲೀಸ್ ಠಾಣೆ ವ್ಯಾಪ್ತಿಯ ತುಳಸಿಗೇರಿಯಲ್ಲಿ ಕೊಲೆ ನಡೆದಿದೆ. ಶಾವಕ್ಕ ಎಂಬುವವರೇ ಕೊಲೆಗೀಡಾದವರು.</p>.<p>ಶಾವಕ್ಕ, ಅವರ ಪುತ್ರ ಯಂಕಪ್ಪ ಕೂಲಿ ಕೆಲಸ ಮಾಡಿಕೊಂಡು ತುಳಸಿಗೇರಿಯಲ್ಲಿ ವಾಸವಾಗಿದ್ದರು. ಕುಡಿಯುವ ಅಭ್ಯಾಸ ಬೆಳೆಸಿಕೊಂಡಿದ್ದ ಯಂಕಪ್ಪ, ಹಣಕ್ಕಾಗಿ ಆಗಾಗ ತಾಯಿಯೊಂದಿಗೆ ಗಲಾಟೆ ಮಾಡುತ್ತಿದ್ದ. </p>.<p>ತಾಯಿಯನ್ನು ಕೊಲೆ ಮಾಡಿದ ಆರೋಪಿ, ಮನೆ ಬಾಗಿಲಿಗೆ ಬೀಗ ಹಾಕಿಕೊಂಡು ಹೊರ ಹೋಗಿದ್ದ. ಸಂಜೆಯವರು ಯಾರೂ ಹೊರಗೆ ಬಾರದ್ದನ್ನು ಕಂಡು ಕಿಟಕಿ ಮೂಲಕ ವೀಕ್ಷಿಸಿದಾಗ ಶಾವಕ್ಕ ಕೊಲೆಯಾಗಿರುವುದು ಗೊತ್ತಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. </p>.<p>ಪರಿಶೀಲನೆ ನಡೆಸಿದ ಪೊಲೀಸರು ಸ್ಥಳದಲ್ಲಿ ಆಯುಧ ಹಾಗೂ ಆರೋಪಿಯ ರಕ್ತದ ಕಲೆಯ ಬಟ್ಟೆಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನೂ ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಸಿದ್ದಾರ್ಥ ಗೋಯಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಕುಡಿತದ ಚಟಕ್ಕೆ ದಾಸನಾಗಿದ್ದ ಪುತ್ರ, ಹಣದ ವಿಚಾರಕ್ಕೆ ಸಂಬಂಧಿಸಿ ವಾಗ್ವಾದ ನಡೆದು ತಾಯಿಯನ್ನೇ ಆಯುಧದಿಂದ ಹೊಡೆದು ಗುರುವಾರ ಕೊಲೆ ಮಾಡಿದ್ದಾನೆ.</p>.<p>ಕಲಾದಗಿ ಪೊಲೀಸ್ ಠಾಣೆ ವ್ಯಾಪ್ತಿಯ ತುಳಸಿಗೇರಿಯಲ್ಲಿ ಕೊಲೆ ನಡೆದಿದೆ. ಶಾವಕ್ಕ ಎಂಬುವವರೇ ಕೊಲೆಗೀಡಾದವರು.</p>.<p>ಶಾವಕ್ಕ, ಅವರ ಪುತ್ರ ಯಂಕಪ್ಪ ಕೂಲಿ ಕೆಲಸ ಮಾಡಿಕೊಂಡು ತುಳಸಿಗೇರಿಯಲ್ಲಿ ವಾಸವಾಗಿದ್ದರು. ಕುಡಿಯುವ ಅಭ್ಯಾಸ ಬೆಳೆಸಿಕೊಂಡಿದ್ದ ಯಂಕಪ್ಪ, ಹಣಕ್ಕಾಗಿ ಆಗಾಗ ತಾಯಿಯೊಂದಿಗೆ ಗಲಾಟೆ ಮಾಡುತ್ತಿದ್ದ. </p>.<p>ತಾಯಿಯನ್ನು ಕೊಲೆ ಮಾಡಿದ ಆರೋಪಿ, ಮನೆ ಬಾಗಿಲಿಗೆ ಬೀಗ ಹಾಕಿಕೊಂಡು ಹೊರ ಹೋಗಿದ್ದ. ಸಂಜೆಯವರು ಯಾರೂ ಹೊರಗೆ ಬಾರದ್ದನ್ನು ಕಂಡು ಕಿಟಕಿ ಮೂಲಕ ವೀಕ್ಷಿಸಿದಾಗ ಶಾವಕ್ಕ ಕೊಲೆಯಾಗಿರುವುದು ಗೊತ್ತಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. </p>.<p>ಪರಿಶೀಲನೆ ನಡೆಸಿದ ಪೊಲೀಸರು ಸ್ಥಳದಲ್ಲಿ ಆಯುಧ ಹಾಗೂ ಆರೋಪಿಯ ರಕ್ತದ ಕಲೆಯ ಬಟ್ಟೆಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನೂ ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಸಿದ್ದಾರ್ಥ ಗೋಯಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>