<p><strong>ಬಾಗಲಕೋಟೆ</strong>: ಬೀದಿ ನಾಯಿ ಕಚ್ಚಿ ಗಂಭೀರವಾಗಿ ಗಾಯಗೊಂಡಿದ್ದ 10 ವರ್ಷದ ಬಾಲಕಿ ಅಲಿನಾ ಲೋಕಾಪುರ, ಬುಧವಾರ ಹುಬ್ಬಳ್ಳಿಯ ಕೆಎಂಸಿಆರ್ಐ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.</p>.<p>ನವನಗರದ ಸೆಕ್ಟರ್ ನಂಬರ್ 15ರಲ್ಲಿ ವಾಸವಿದ್ದ ಅಲಿನಾಗೆ ಡಿಸೆಂಬರ್ 29ರಂದು ಮನೆಯ ಎದುರು ಬೀದಿ ನಾಯಿ ಕಚ್ಚಿತ್ತು. ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ, ನಂತರ ಹುಬ್ಬಳ್ಳಿಯ ಕೆಎಂಸಿಆರ್ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>‘ಕುರಿ, ದನಗಳಿಗೆ ನಾಯಿಗಳು ಕಡಿದಾಗಲೇ ದೂರು ನೀಡಲಾಗಿತ್ತು. ಆದರೆ, ಅಧಿಕಾರಿಗಳು ಕ್ರಮ ಕೈಗೊಳ್ಳಲಿಲ್ಲ. ಮಗಳ ಸಾವಿಗೇ ಅಧಿಕಾರಿಗಳೇ ಕಾರಣ’ ಎಂದು ಅಲಿನಾ ತಂದೆ ರಾಜಸಾಬ್ ಲೋಕಾಪುರ ದೂರಿದರು. ‘ಮೃತ ಬಾಲಕಿ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದರು.</p>.<p><span class="bold"><strong>ಚಿಕ್ಕೋಡಿ ವರದಿ:</strong></span> ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ವೆಂಕಟೇಶ್ವರ ಗಲ್ಲಿಯಲ್ಲಿ 2 ವರ್ಷದ ಋತ್ವಿಕ ಆನಂದ ಕುದುರೆ ಎಂಬ ಮಗುವಿನ ಮೇಲೆ ಬುಧವಾರ ಬೀದಿ ನಾಯಿಗಳು ದಾಳಿ ಮಾಡಿ, ಗಾಯಗೊಳಿಸಿವೆ. ಮಗುವನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಮಗು ಚೇತರಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಬೀದಿ ನಾಯಿ ಕಚ್ಚಿ ಗಂಭೀರವಾಗಿ ಗಾಯಗೊಂಡಿದ್ದ 10 ವರ್ಷದ ಬಾಲಕಿ ಅಲಿನಾ ಲೋಕಾಪುರ, ಬುಧವಾರ ಹುಬ್ಬಳ್ಳಿಯ ಕೆಎಂಸಿಆರ್ಐ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.</p>.<p>ನವನಗರದ ಸೆಕ್ಟರ್ ನಂಬರ್ 15ರಲ್ಲಿ ವಾಸವಿದ್ದ ಅಲಿನಾಗೆ ಡಿಸೆಂಬರ್ 29ರಂದು ಮನೆಯ ಎದುರು ಬೀದಿ ನಾಯಿ ಕಚ್ಚಿತ್ತು. ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ, ನಂತರ ಹುಬ್ಬಳ್ಳಿಯ ಕೆಎಂಸಿಆರ್ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>‘ಕುರಿ, ದನಗಳಿಗೆ ನಾಯಿಗಳು ಕಡಿದಾಗಲೇ ದೂರು ನೀಡಲಾಗಿತ್ತು. ಆದರೆ, ಅಧಿಕಾರಿಗಳು ಕ್ರಮ ಕೈಗೊಳ್ಳಲಿಲ್ಲ. ಮಗಳ ಸಾವಿಗೇ ಅಧಿಕಾರಿಗಳೇ ಕಾರಣ’ ಎಂದು ಅಲಿನಾ ತಂದೆ ರಾಜಸಾಬ್ ಲೋಕಾಪುರ ದೂರಿದರು. ‘ಮೃತ ಬಾಲಕಿ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದರು.</p>.<p><span class="bold"><strong>ಚಿಕ್ಕೋಡಿ ವರದಿ:</strong></span> ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ವೆಂಕಟೇಶ್ವರ ಗಲ್ಲಿಯಲ್ಲಿ 2 ವರ್ಷದ ಋತ್ವಿಕ ಆನಂದ ಕುದುರೆ ಎಂಬ ಮಗುವಿನ ಮೇಲೆ ಬುಧವಾರ ಬೀದಿ ನಾಯಿಗಳು ದಾಳಿ ಮಾಡಿ, ಗಾಯಗೊಳಿಸಿವೆ. ಮಗುವನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಮಗು ಚೇತರಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>