<p><strong>ಬಾಗಲಕೋಟೆ:</strong> ಕಬ್ಬು ಪೂರೈಸಿದಂತಹ ರೈತರ ಬಾಕಿ ಮೊತ್ತವನ್ನು ಜೂನ್ ಮೊದಲ ವಾರದೊಳಗೆ ಪಾವತಿಸುವ ಕಾರ್ಯ ಆಗಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಯ ವಿವಿಧ ಸಕ್ಕರೆ ಕಾರ್ಖಾನೆಗಳ ಮಾಲೀಕರು, ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕಬ್ಬು ಪೂರೈಸಿದ ರೈತರ ಬಾಕಿ ಮೊತ್ತ ₹203 ಕೋಟಿಯನ್ನು ಯಾವುದೇ ಕಾರಣ ನೀಡದೇ ಶೀಘ್ರದಲ್ಲಿ ಪಾವತಿಸತಕ್ಕದ್ದು ಎಂದರು.</p>.<p>ಸರ್ಕಾರದಿಂದ ರೈತರಿಗೆ ಪ್ರತಿ ಟನ್ನಿಗೆ ₹50 ರಂತೆ ಈಗಾಗಲೇ ಬಿಡುಗಡೆ ಮಾಡಿ, ರೈತರ ಖಾತೆಗೆ ಜಮಾ ಮಾಡಲಾಗಿದೆ. ಕಾರ್ಖಾನೆ ವತಿಯಿಂದಲೂ ಪ್ರತಿ ಟನ್ಗೆ ₹50 ರಂತೆ ಅಂದಾಜು 82 ಕೋಟಿಯನ್ನು ಸಹ ಜೂನ್ ಮೊದಲ ವಾರದಲ್ಲಿಯೇ ಪಾವತಿಸಬೇಕು ಎಂದು ಎಚ್ಚರಿಸಿದರು.</p>.<p>ರೈತರಿಗೆ ಪಾವತಿಸಬೇಕಾದ ಮೊತ್ತವನ್ನು ವಿಳಂಬ ಮಾಡದೇ ಸಕಾಲದಲ್ಲಿ ಪಾವತಿಸಿ, ರೈತರೊಂದಿಗೆ ಒಳ್ಳೆಯ ಒಡನಾಟ ಇಟ್ಟುಕೊಳ್ಳಬೇಕು. ಇಲ್ಲದೇ ಹೋದರೆ ಜಿಲ್ಲಾಡಳಿತಕ್ಕೂ ಸಮಸ್ಯೆ ಉಂಟಾಗಿ ಜಿಲ್ಲೆಗೆ ಕಪ್ಪು ಚುಕ್ಕೆ ಬೀಳುತ್ತದೆ ಎಂದರು.</p>.<p>ಬಾಗಲಕೋಟೆ ಜಿಲ್ಲೆಯನ್ನು ಹಸಿರು ಜಿಲ್ಲೆಯನ್ನಾಗಿ ಮಾಡಬೇಕಾದರೆ ಕಾರ್ಖಾನೆಯವರ ಸಹಕಾರ ಅತ್ಯಗತ್ಯವಾಗಿದೆ. ಸಾಮಾಜಿಕ ಹೊಣೆಗಾರಿಕೆ ಕಾರ್ಯನೀತಿ (ಸಿಎಸ್ ಆರ್) ಯಡಿ ಎಲ್ಲ ಸಕ್ಕರೆ ಕಾರ್ಖಾನೆಗಳಲ್ಲಿ ಪರಿಸರ ದಿನವಾದ ಜೂನ್ 5 ರಂದು ಸಸಿಗಳನ್ನು ನೆಡಲು ಮುಂದಾಗಬೇಕು ಎಂದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಮಾತನಾಡಿ, ಅಕ್ಕ–ಪಕ್ಕದ ಜಿಲ್ಲೆಗಳ ಸಕ್ಕರೆ ಕಾರ್ಖಾನೆಗಳ ಮಾಲೀಕರು ಈಗಾಗಲೇ ಬಾಕಿ ಮೊತ್ತ ಪಾವತಿಸಿದ್ದು, ಜಿಲ್ಲೆಯಲ್ಲಿಯೂ ರೈತರಿಗೆ ಬಾಕಿ ಮೊತ್ತ ಶೀಘ್ರ ಪಾವತಿಸಬೇಕು. ಮುಷ್ಕರ ಮಾಡುವುದಕ್ಕೆ ಅವಕಾಶ ನೀಡಬಾರದು ಎಂದು ಹೇಳಿದರು.</p>.<p>ಆಹಾರ, ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-19-1410368891</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಕಬ್ಬು ಪೂರೈಸಿದಂತಹ ರೈತರ ಬಾಕಿ ಮೊತ್ತವನ್ನು ಜೂನ್ ಮೊದಲ ವಾರದೊಳಗೆ ಪಾವತಿಸುವ ಕಾರ್ಯ ಆಗಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಯ ವಿವಿಧ ಸಕ್ಕರೆ ಕಾರ್ಖಾನೆಗಳ ಮಾಲೀಕರು, ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕಬ್ಬು ಪೂರೈಸಿದ ರೈತರ ಬಾಕಿ ಮೊತ್ತ ₹203 ಕೋಟಿಯನ್ನು ಯಾವುದೇ ಕಾರಣ ನೀಡದೇ ಶೀಘ್ರದಲ್ಲಿ ಪಾವತಿಸತಕ್ಕದ್ದು ಎಂದರು.</p>.<p>ಸರ್ಕಾರದಿಂದ ರೈತರಿಗೆ ಪ್ರತಿ ಟನ್ನಿಗೆ ₹50 ರಂತೆ ಈಗಾಗಲೇ ಬಿಡುಗಡೆ ಮಾಡಿ, ರೈತರ ಖಾತೆಗೆ ಜಮಾ ಮಾಡಲಾಗಿದೆ. ಕಾರ್ಖಾನೆ ವತಿಯಿಂದಲೂ ಪ್ರತಿ ಟನ್ಗೆ ₹50 ರಂತೆ ಅಂದಾಜು 82 ಕೋಟಿಯನ್ನು ಸಹ ಜೂನ್ ಮೊದಲ ವಾರದಲ್ಲಿಯೇ ಪಾವತಿಸಬೇಕು ಎಂದು ಎಚ್ಚರಿಸಿದರು.</p>.<p>ರೈತರಿಗೆ ಪಾವತಿಸಬೇಕಾದ ಮೊತ್ತವನ್ನು ವಿಳಂಬ ಮಾಡದೇ ಸಕಾಲದಲ್ಲಿ ಪಾವತಿಸಿ, ರೈತರೊಂದಿಗೆ ಒಳ್ಳೆಯ ಒಡನಾಟ ಇಟ್ಟುಕೊಳ್ಳಬೇಕು. ಇಲ್ಲದೇ ಹೋದರೆ ಜಿಲ್ಲಾಡಳಿತಕ್ಕೂ ಸಮಸ್ಯೆ ಉಂಟಾಗಿ ಜಿಲ್ಲೆಗೆ ಕಪ್ಪು ಚುಕ್ಕೆ ಬೀಳುತ್ತದೆ ಎಂದರು.</p>.<p>ಬಾಗಲಕೋಟೆ ಜಿಲ್ಲೆಯನ್ನು ಹಸಿರು ಜಿಲ್ಲೆಯನ್ನಾಗಿ ಮಾಡಬೇಕಾದರೆ ಕಾರ್ಖಾನೆಯವರ ಸಹಕಾರ ಅತ್ಯಗತ್ಯವಾಗಿದೆ. ಸಾಮಾಜಿಕ ಹೊಣೆಗಾರಿಕೆ ಕಾರ್ಯನೀತಿ (ಸಿಎಸ್ ಆರ್) ಯಡಿ ಎಲ್ಲ ಸಕ್ಕರೆ ಕಾರ್ಖಾನೆಗಳಲ್ಲಿ ಪರಿಸರ ದಿನವಾದ ಜೂನ್ 5 ರಂದು ಸಸಿಗಳನ್ನು ನೆಡಲು ಮುಂದಾಗಬೇಕು ಎಂದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಮಾತನಾಡಿ, ಅಕ್ಕ–ಪಕ್ಕದ ಜಿಲ್ಲೆಗಳ ಸಕ್ಕರೆ ಕಾರ್ಖಾನೆಗಳ ಮಾಲೀಕರು ಈಗಾಗಲೇ ಬಾಕಿ ಮೊತ್ತ ಪಾವತಿಸಿದ್ದು, ಜಿಲ್ಲೆಯಲ್ಲಿಯೂ ರೈತರಿಗೆ ಬಾಕಿ ಮೊತ್ತ ಶೀಘ್ರ ಪಾವತಿಸಬೇಕು. ಮುಷ್ಕರ ಮಾಡುವುದಕ್ಕೆ ಅವಕಾಶ ನೀಡಬಾರದು ಎಂದು ಹೇಳಿದರು.</p>.<p>ಆಹಾರ, ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-19-1410368891</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>