<p><strong>ಬಾಗಲಕೋಟೆ</strong>: ‘ವೀರ ವನಿತೆಯರ ಇತಿಹಾಸವಿರುವ ಭಾರತದ ಮಣ್ಣಿನ ಅಸ್ಮಿತೆಯ ಪರಿಚಯ ಇಂದಿನ ಯುವ ಪೀಳಿಗೆಗೆ ಅಗತ್ಯವಾಗಿದೆ’ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಮಾಜಿ ರಾಷ್ಟ್ರೀಯ ಕಾರ್ಯದರ್ಶಿ ಹರ್ಷ ನಾರಾಯಣ ಹೇಳಿದರು.</p>.<p>ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ವೀರ ವನಿತೆ ಕಿತ್ತೂರ ಚೆನ್ನಮ್ಮ 200ನೇ ವರ್ಷದ ವಿಜಯೋತ್ಸವ ಹಾಗೂ ಅಭಯ ರಾಣಿ ಅಬ್ಬಕ್ಕ 500ನೇ ಜಯಂತ್ಯುತ್ಸವ ಅಂಗವಾಗಿ ಬಾಗಲಕೋಟೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಥಯಾತ್ರೆ ಹಾಗೂ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಇಬ್ಬರ ಸಾಧನೆ ಕುರಿತು ವಿದ್ಯಾರ್ಥಿಗಳಿಗೆ ಹಾಗೂ ಯುವ ಜನರಿಗೆ ತಿಳಿಸುವ ಉದ್ದೇಶದಿಂದ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ. ರಾಣಿ ಚೆನ್ನಮ್ಮನ ಕಿಚ್ಚು, ಅಬ್ಬಕ್ಕನ ಸ್ಫೂರ್ತಿ ಪ್ರತಿ ಮನೆ, ಮನೆಗಳಲ್ಲಿ ಬೆಳಗಬೇಕಿದೆ. ಪೂರ್ವಜರು ಹಾಕಿ ಕೊಟ್ಟ ಸಂಸ್ಕೃತಿ, ಸಂಸ್ಕಾರ ಉಳಿಸಿ ಬೆಳೆಸಬೇಕಿದೆ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಮಾತನಾಡಿ, ‘ರಾಣಿ ಚೆನ್ನಮ್ಮ ಹಾಗೂ ರಾಣಿ ಅಬ್ಬಕ್ಕರ ಸಾಧನೆ ಇನ್ನೂ ಮಾಸಿಲ್ಲ. ಅವರ ದೇಶಭಕ್ತಿ ಅಜರಾಮರವಾಗಿರುತ್ತದೆ. ದೇಶದ ಬೆಳವಣಿಗೆಯಲ್ಲಿ ವಿದ್ಯಾರ್ಥಿ ಹಾಗೂ ಶಿಕ್ಷಕರ ಪಾತ್ರ ಮಹತ್ವದಾಗಿದೆ’ ಎಂದು ಹೇಳಿದರು.</p>.<p>ಸಾನ್ನಿಧ್ಯ ವಹಿಸಿದ್ದ ಗುಳೇದಗುಡ್ಡದ ಮುರಘಾಮಠದ ಅಭಿನವ ಕಾಡ ಸಿದ್ಧೇಶ್ವರ ಸ್ವಾಮೀಜಿ ಮಾತನಾಡಿ, ‘ದೇಶಕ್ಕಾಗಿ ನಾವು ಯಾವ ತ್ಯಾಗಕ್ಕೂ ಸಿದ್ದರಾಗಿರಬೇಕು. ದೇಶ ನಮಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ದೇಶಕ್ಕೆ ನಮ್ಮ ಕೊಡುಗೆ ಏನು ಎಂಬುದು ಮುಖ್ಯ’ ಎಂದರು.</p>.<p>ಇದೇ ಸಂದರ್ಭದಲ್ಲಿ ಅಂಬಾಜಿ ಸುಗತೇಕರ ಅವರನ್ನು ಗೌರವಿಸಲಾಯಿತು. ಎಬಿವಿಪಿ ಉತ್ತರ ಪ್ರಾಂತ ಉಪಾಧ್ಯಕ್ಷರಾದ ಸುಮಾ ಬೊಳರೆಡ್ಡಿ, ಜಿಲ್ಲಾ ಸಂಚಾಲಕ ವಿಪುಲ್ ಪೇಟಕರ, ನಗರ ಅಧ್ಯಕ್ಷ ಬಸವರಾಜ ಕುಂಬಾರ, ನಗರ ಕಾರ್ಯದರ್ಶಿ ರವಿ ದಂಡಗಿ ಇದ್ದರು.</p>.<p><strong>ಗಮನ ಸೆಳೆದ ರಥಯಾತ್ರೆ</strong></p><p><strong>ಬಾಗಲಕೋಟೆ:</strong> ರಾಣಿ ಚೆನ್ನಮ್ಮ ಹಾಗೂ ರಾಣಿ ಅಬ್ಬಕನ ಮೂರ್ತಿ ಹಾಗೂ ಸಾಧನೆಯ ಮಾಹಿತಿಯಿರುವ ರಥಯಾತ್ರೆ ನೋಡುಗರ ಗಮನ ಸೆಳೆಯಿತು. ಬೀಳೂರ ಅಜ್ಜನ ಗುಡಿ ಆವರಣದಲ್ಲಿ ರಥಯಾತ್ರೆಗೆ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಚಾಲನೆ ನೀಡಿದರು.</p><p>ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದರು. ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆಣ್ಣವರ ಶ್ರೀಲತಾ ಹೆರಂಜಲ್ ಬಸವರಾಜ ಹುನಗುಂದ ಜ್ಯೋತಿ ಕದಾಂಪುರ ಶ್ರೀದೇವಿ ಪವಾಡಶೆಟ್ಟರ್ ಸುಷ್ಮಾದೇವಿ ವಡೆಯರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ವೀರ ವನಿತೆಯರ ಇತಿಹಾಸವಿರುವ ಭಾರತದ ಮಣ್ಣಿನ ಅಸ್ಮಿತೆಯ ಪರಿಚಯ ಇಂದಿನ ಯುವ ಪೀಳಿಗೆಗೆ ಅಗತ್ಯವಾಗಿದೆ’ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಮಾಜಿ ರಾಷ್ಟ್ರೀಯ ಕಾರ್ಯದರ್ಶಿ ಹರ್ಷ ನಾರಾಯಣ ಹೇಳಿದರು.</p>.<p>ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ವೀರ ವನಿತೆ ಕಿತ್ತೂರ ಚೆನ್ನಮ್ಮ 200ನೇ ವರ್ಷದ ವಿಜಯೋತ್ಸವ ಹಾಗೂ ಅಭಯ ರಾಣಿ ಅಬ್ಬಕ್ಕ 500ನೇ ಜಯಂತ್ಯುತ್ಸವ ಅಂಗವಾಗಿ ಬಾಗಲಕೋಟೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಥಯಾತ್ರೆ ಹಾಗೂ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಇಬ್ಬರ ಸಾಧನೆ ಕುರಿತು ವಿದ್ಯಾರ್ಥಿಗಳಿಗೆ ಹಾಗೂ ಯುವ ಜನರಿಗೆ ತಿಳಿಸುವ ಉದ್ದೇಶದಿಂದ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ. ರಾಣಿ ಚೆನ್ನಮ್ಮನ ಕಿಚ್ಚು, ಅಬ್ಬಕ್ಕನ ಸ್ಫೂರ್ತಿ ಪ್ರತಿ ಮನೆ, ಮನೆಗಳಲ್ಲಿ ಬೆಳಗಬೇಕಿದೆ. ಪೂರ್ವಜರು ಹಾಕಿ ಕೊಟ್ಟ ಸಂಸ್ಕೃತಿ, ಸಂಸ್ಕಾರ ಉಳಿಸಿ ಬೆಳೆಸಬೇಕಿದೆ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಮಾತನಾಡಿ, ‘ರಾಣಿ ಚೆನ್ನಮ್ಮ ಹಾಗೂ ರಾಣಿ ಅಬ್ಬಕ್ಕರ ಸಾಧನೆ ಇನ್ನೂ ಮಾಸಿಲ್ಲ. ಅವರ ದೇಶಭಕ್ತಿ ಅಜರಾಮರವಾಗಿರುತ್ತದೆ. ದೇಶದ ಬೆಳವಣಿಗೆಯಲ್ಲಿ ವಿದ್ಯಾರ್ಥಿ ಹಾಗೂ ಶಿಕ್ಷಕರ ಪಾತ್ರ ಮಹತ್ವದಾಗಿದೆ’ ಎಂದು ಹೇಳಿದರು.</p>.<p>ಸಾನ್ನಿಧ್ಯ ವಹಿಸಿದ್ದ ಗುಳೇದಗುಡ್ಡದ ಮುರಘಾಮಠದ ಅಭಿನವ ಕಾಡ ಸಿದ್ಧೇಶ್ವರ ಸ್ವಾಮೀಜಿ ಮಾತನಾಡಿ, ‘ದೇಶಕ್ಕಾಗಿ ನಾವು ಯಾವ ತ್ಯಾಗಕ್ಕೂ ಸಿದ್ದರಾಗಿರಬೇಕು. ದೇಶ ನಮಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ದೇಶಕ್ಕೆ ನಮ್ಮ ಕೊಡುಗೆ ಏನು ಎಂಬುದು ಮುಖ್ಯ’ ಎಂದರು.</p>.<p>ಇದೇ ಸಂದರ್ಭದಲ್ಲಿ ಅಂಬಾಜಿ ಸುಗತೇಕರ ಅವರನ್ನು ಗೌರವಿಸಲಾಯಿತು. ಎಬಿವಿಪಿ ಉತ್ತರ ಪ್ರಾಂತ ಉಪಾಧ್ಯಕ್ಷರಾದ ಸುಮಾ ಬೊಳರೆಡ್ಡಿ, ಜಿಲ್ಲಾ ಸಂಚಾಲಕ ವಿಪುಲ್ ಪೇಟಕರ, ನಗರ ಅಧ್ಯಕ್ಷ ಬಸವರಾಜ ಕುಂಬಾರ, ನಗರ ಕಾರ್ಯದರ್ಶಿ ರವಿ ದಂಡಗಿ ಇದ್ದರು.</p>.<p><strong>ಗಮನ ಸೆಳೆದ ರಥಯಾತ್ರೆ</strong></p><p><strong>ಬಾಗಲಕೋಟೆ:</strong> ರಾಣಿ ಚೆನ್ನಮ್ಮ ಹಾಗೂ ರಾಣಿ ಅಬ್ಬಕನ ಮೂರ್ತಿ ಹಾಗೂ ಸಾಧನೆಯ ಮಾಹಿತಿಯಿರುವ ರಥಯಾತ್ರೆ ನೋಡುಗರ ಗಮನ ಸೆಳೆಯಿತು. ಬೀಳೂರ ಅಜ್ಜನ ಗುಡಿ ಆವರಣದಲ್ಲಿ ರಥಯಾತ್ರೆಗೆ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಚಾಲನೆ ನೀಡಿದರು.</p><p>ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದರು. ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆಣ್ಣವರ ಶ್ರೀಲತಾ ಹೆರಂಜಲ್ ಬಸವರಾಜ ಹುನಗುಂದ ಜ್ಯೋತಿ ಕದಾಂಪುರ ಶ್ರೀದೇವಿ ಪವಾಡಶೆಟ್ಟರ್ ಸುಷ್ಮಾದೇವಿ ವಡೆಯರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>