ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ ವಿಭಜನೆಯಿಂದ ಮಂಕಾಗಿಲ್ಲ, ಚೆಂಡಿನಂತೆ ಪುಟಿದೆದ್ದು ಬರ್ತೇನೆ: ಶ್ರೀರಾಮುಲು

Last Updated 12 ಫೆಬ್ರುವರಿ 2021, 11:08 IST
ಅಕ್ಷರ ಗಾತ್ರ

ಬಾಗಲಕೋಟೆ: ಬಳ್ಳಾರಿ ಜಿಲ್ಲೆ ವಿಭಜನೆಯಿಂದ ನಾನು ಮಂಕಾಗಿಲ್ಲ. ಚೆಂಡಿನಂತೆ ಪುಟಿದು ಮೇಲೆ ಬರುವ ಶಕ್ತಿ ಈ ಶ್ರೀರಾಮುಲುಗೆ ಇದೆ ಎಂದು ಸಮಾಜಕಲ್ಯಾಣ ಸಚಿವ ಬಿ.ಶ್ರೀರಾಮುಲು ಪ್ರತಿಕ್ರಿಯಿಸಿದರು.

ಬಾದಾಮಿ ತಾಲ್ಲೂಕಿನ ಮುಷ್ಠಿಗೇರಿ ಗ್ರಾಮದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆ ವಿಭಜನೆಯಿಂದ ಸಚಿವ ಆನಂದಸಿಂಗ್ ಮೇಲುಗೈ ಸಾಧಿಸಿದ್ದಾರೆಯೇ ಎಂಬ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದರು.

ಈ ವಿಚಾರದಲ್ಲಿ ರಾಮುಲು ಹಿಂದೆ ಸರಿದಿದ್ದಾರೆ ಅಂತನೂ ಅಲ್ಲ ಎಂದು ಮಾರ್ಮಿಕವಾಗಿ ಹೇಳಿದರು.

ಕಾಂಗ್ರೆಸ್ ಭದ್ರಕೋಟೆ ಆಗಿದ್ದ ಬಳ್ಳಾರಿ ಜಿಲ್ಲೆಯಲ್ಲಿ ಇಂದು ಆ ಪಕ್ಷವನ್ನು ಒಬ್ಬ ಶ್ರೀರಾಮುಲು ಎನ್ನುವ ವ್ಯಕ್ತಿ ನೆಲಸಮ ಮಾಡಿದ್ದಾನೆ ಅಂದರೆ ಅದು ಬಿಜೆಪಿಯ ಶಕ್ತಿ ಎಂದರು.

ರಾಮುಲು ಅವರನ್ನು ಯಾರೂ ಸಹ ಕುಗ್ಗಿಸಲು ಆಗಲ್ಲ. ರಾಮುಲು ಕೇವಲ ಒಂದು ತಾಲೂಕು, ಜಿಲ್ಲೆಯ ಲೀಡರ್ ಅಲ್ಲ. ಈ ಶ್ರೀರಾಮುಲು ರಾಜ್ಯ ಮಟ್ಟದ ಲೀಡರ್ ಆಗಿದ್ದಾನೆ. ಚಂಡು ನೆಲಕ್ಕೆ ಒಗೆದಾಗ ಹೇಗೆ ಪುಟಿಯುತ್ತದೆಯೋ ಹಾಗೆಯೇ ಚೆಂಡಿನಂತೆಯೇ ವೇಗವಾಗಿ ಮೇಲೆ ಜಿಗಿಯುವ ಶಕ್ತಿಯನ್ನು ದೇವರು ಮತ್ತು ನಾಡಿನ ಜನರು ಕೊಟ್ಟಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT