ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು- ಒಂದೇ ಮದುವೆ, ಎರಡು ಮಕ್ಕಳಿರಬೇಕು: ಯತ್ನಾಳ

Last Updated 3 ಅಕ್ಟೋಬರ್ 2022, 9:14 IST
ಅಕ್ಷರ ಗಾತ್ರ

ಬಾಗಲಕೋಟೆ: ದೇಶದಲ್ಲಿ ಎಲ್ಲರೂ ಒಂದೇ ಮದುವೆಯಾಗಬೇಕು. ಎರಡು ಮಕ್ಕಳನ್ನು ಹಡಿಯಬೇಕು. ಇದನ್ನು ಒಪ್ಪದವರಿಗೆ ಮಹಾತ್ಮ ಗಾಂಧಿ ಪಾಲು ಮಾಡಿಕೊಟ್ಟಿದ್ದಾರೆ. ಅಲ್ಲಿಗೆ ಹೊಯಕೊಂತ ಹೋಗರಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಬಾಗಲಕೋಟೆಯ ನವನಗರದಲ್ಲಿ ಭಾನುವಾರ ರಾತ್ರಿ ಹಮ್ಮಿಕೊಂಡಿದ್ದ ದಸರಾ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಡನಾಡಿದ ಅವರು, ದೇಶದಲ್ಲಿ ಕಾಮನ್‌ ಸಿವಿಲ್‌ ಕೋಡ್‌ ಜಾರಿಗೊಳಿಸಲಾಗುವುದು ಎಂದರು.

ವಕ್ಫ್‌ ಕಾನೂನು ರದ್ದು ಮಾಡಲಾಗುವುದು. ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುತ್ತಿದ್ದೇವೆ. ಮಥುರಾದಲ್ಲಿ ಕೃಷ್ಣ ಮಂದಿರ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.

ಗಣಪತಿ ಕೂಡಿಸಲು ಅನುಮತಿ ಪಡೆದರೆ ಭಾರತ, ಪಾಕಿಸ್ತಾನಕ್ಕಿಂತ ಕನಿಷ್ಠ ಆಗುತ್ತದೆ. ರಾಜ್ಯ ಹಾಗೂ ಕೇಂದ್ರದಲ್ಲಿ ನಮ್ಮದೇ ಸರ್ಕಾರವಿದೆ. ನಾನು ವಿಜಯಪುರದಲ್ಲಿ ಶಾಸಕನಿದ್ದೇನೆ. ಹೀಗಿದ್ದಾಗ, ಅನುಮತಿ ಏಕೆ ಬೇಕು. ಎಲ್ಲಿ ಬೇಕಾದರೂ ಕೂಡಿಸಬಹುದು ಎಂದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT