<p><strong>ಬಾಗಲಕೋಟೆ: </strong>ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದಿಂದ ಪ್ರತಿ ವರ್ಷ ನೀಡುವ ಬಸವ ಕೃಷಿ ರಾಷ್ಟ್ರೀಯ ಪ್ರಶಸ್ತಿಯನ್ನು ಈ ಬಾರಿ ದೆಹಲಿಯ ರೈತ ಹೋರಾಟಗಾರರಿಗೆ ಅರ್ಪಿಸಲಾಗಿದೆ ಎಂದು ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶಸ್ತಿ ಮೊತ್ತ ₹ 1 ಲಕ್ಷ ನಗದು, ಪುರಸ್ಕಾರ ಹಾಗೂ ತಾಮ್ರ ಪತ್ರ ಒಳಗೊಂಡಿದೆ. ಪ್ರತಿ ವರ್ಷ ಸಂಕ್ರಾಂತಿ ದಿನ ಪ್ರಶಸ್ತಿ ವಿತರಣೆ ನಡೆಯುತ್ತಿತ್ತು. ಈ ಬಾರಿ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಅಡಿ ಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಂಡಿರುವ ಕಾರಣ ಪ್ರಶಸ್ತಿ ವಿತರಣೆ ಸಮಾರಂಭ ಮುಂದೂಡಲಾಗಿದೆ. ದೆಹಲಿಯಲ್ಲಿ ರೈತರ ಹೋರಾಟ ಮುಗಿದ ಮೇಲೆ ಅದರ ನಾಯಕರನ್ನು ಶ್ರೀ ಪೀಠಕ್ಕೆ ಕರೆದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.</p>.<p>ಬಸವ ಕೃಷಿ ರಾಷ್ಟ್ರೀಯ ಪ್ರಶಸ್ತಿಗೆ ಈ ಮೊದಲು ಜಲತಜ್ಞ ರಾಜೇಂದ್ರ ಸಿಂಗ್, ಗಾಂಧಿವಾದಿ ಅಣ್ಣಾ ಹಜಾರೆ, ಪರಿಸರವಾದಿ ಮೇಧಾ ಪಾಟ್ಕರ್, ಡಾ.ಬಾಬಾ ಅಢಾವೆ, ತ್ರಿಪುರಾ ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್, ಡಾ.ಎಂ.ಎಸ್.ಸ್ವಾಮಿನಾಥನ್, ತೆಲಂಗಾಣದ ಮಿಷನ್ ಭಗೀರಥ ಕುಡಿಯುವ ನೀರಿನ ರುವಾರಿ ಪ್ರಕಾಶರಾವ್ ವೀರಮಲ್ಲ ಭಾಜನರಾಗಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದಿಂದ ಪ್ರತಿ ವರ್ಷ ನೀಡುವ ಬಸವ ಕೃಷಿ ರಾಷ್ಟ್ರೀಯ ಪ್ರಶಸ್ತಿಯನ್ನು ಈ ಬಾರಿ ದೆಹಲಿಯ ರೈತ ಹೋರಾಟಗಾರರಿಗೆ ಅರ್ಪಿಸಲಾಗಿದೆ ಎಂದು ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶಸ್ತಿ ಮೊತ್ತ ₹ 1 ಲಕ್ಷ ನಗದು, ಪುರಸ್ಕಾರ ಹಾಗೂ ತಾಮ್ರ ಪತ್ರ ಒಳಗೊಂಡಿದೆ. ಪ್ರತಿ ವರ್ಷ ಸಂಕ್ರಾಂತಿ ದಿನ ಪ್ರಶಸ್ತಿ ವಿತರಣೆ ನಡೆಯುತ್ತಿತ್ತು. ಈ ಬಾರಿ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಅಡಿ ಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಂಡಿರುವ ಕಾರಣ ಪ್ರಶಸ್ತಿ ವಿತರಣೆ ಸಮಾರಂಭ ಮುಂದೂಡಲಾಗಿದೆ. ದೆಹಲಿಯಲ್ಲಿ ರೈತರ ಹೋರಾಟ ಮುಗಿದ ಮೇಲೆ ಅದರ ನಾಯಕರನ್ನು ಶ್ರೀ ಪೀಠಕ್ಕೆ ಕರೆದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.</p>.<p>ಬಸವ ಕೃಷಿ ರಾಷ್ಟ್ರೀಯ ಪ್ರಶಸ್ತಿಗೆ ಈ ಮೊದಲು ಜಲತಜ್ಞ ರಾಜೇಂದ್ರ ಸಿಂಗ್, ಗಾಂಧಿವಾದಿ ಅಣ್ಣಾ ಹಜಾರೆ, ಪರಿಸರವಾದಿ ಮೇಧಾ ಪಾಟ್ಕರ್, ಡಾ.ಬಾಬಾ ಅಢಾವೆ, ತ್ರಿಪುರಾ ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್, ಡಾ.ಎಂ.ಎಸ್.ಸ್ವಾಮಿನಾಥನ್, ತೆಲಂಗಾಣದ ಮಿಷನ್ ಭಗೀರಥ ಕುಡಿಯುವ ನೀರಿನ ರುವಾರಿ ಪ್ರಕಾಶರಾವ್ ವೀರಮಲ್ಲ ಭಾಜನರಾಗಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>