ಮೀಸಲಾತಿಗೆ ಆಗ್ರಹಿಸಿ ಜನವರಿ 14 ರಂದು ಸ್ವಾಮೀಜಿ ನಡೆಸಲು ಉದ್ದೇಶಿಸಿದ್ದ ಪಾದಯಾತ್ರೆ ಹಾಗೂ ಹೋರಾಟ ಕೈ ಬಿಡುವಂತೆ ಮನವೊಲಿಸಲು ಸಚಿವ ಸಿ.ಸಿ.ಪಾಟೀಲ ಮುಂದಾಗಿದ್ದರು. ಹೋರಾಟ ಕೈಬಿಟ್ಟು ಬೇಡಿಕೆ ಈಡೇರಿಕೆಗೆ ಸಮಯಾವಕಾಶ ನೀಡುವಂತೆ ಸಚಿವರು ಮನವಿ ಮಾಡಿದರು. ಆದರೆ, ಹೋರಾಟದ ಪಟ್ಟು ಸಡಿಲಿಸಲು ಸ್ವಾಮೀಜಿ ಹಾಗೂ ಸಮಾಜದ ಮುಖಂಡರು ಒಪ್ಪಲಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ಮುಂದಿನ ಹಂತದಲ್ಲಿ ಮಾತುಕತೆ ನಡೆಸಲು ಹಾಗೂ ಸರ್ಕಾರದ ಸ್ಪಂದನೆಯ ಬಗ್ಗೆ ಜನವರಿ 14ರವರೆಗೆ ಕಾದು ನೋಡಲು ಸಭೆ ತೀರ್ಮಾನಿಸಿತು.