ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿಗಾಗಿ ಹೋರಾಟ: ಸಂಧಾನ ವಿಫಲ

ಸಿಎಂ ಜೊತೆ ಮುಂದಿನ ಚರ್ಚೆ
Last Updated 9 ಜನವರಿ 2021, 14:43 IST
ಅಕ್ಷರ ಗಾತ್ರ

ಬಾಗಲಕೋಟೆ: ಪಂಚಮಸಾಲಿ ಸಮುದಾಯಕ್ಕೆ 2ಎ ಪ್ರವರ್ಗದ ಮೀಸಲಾತಿ ನೀಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೂಡಲಸಂಗಮದಲ್ಲಿ ಸಚಿವ ಸಿ.ಸಿ.ಪಾಟೀಲ ಹಾಗೂ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಶನಿವಾರ ನಡೆದ ಸಂಧಾನ ಸಭೆಯ ಮಾತುಕತೆ ವಿಫಲವಾಯಿತು.

ಮೀಸಲಾತಿಗೆ ಆಗ್ರಹಿಸಿ ಜನವರಿ 14 ರಂದು ಸ್ವಾಮೀಜಿ ನಡೆಸಲು ಉದ್ದೇಶಿಸಿದ್ದ ಪಾದಯಾತ್ರೆ ಹಾಗೂ ಹೋರಾಟ ಕೈ ಬಿಡುವಂತೆ ಮನವೊಲಿಸಲು ಸಚಿವ ಸಿ.ಸಿ.ಪಾಟೀಲ ಮುಂದಾಗಿದ್ದರು. ಹೋರಾಟ ಕೈಬಿಟ್ಟು ಬೇಡಿಕೆ ಈಡೇರಿಕೆಗೆ ಸಮಯಾವಕಾಶ ನೀಡುವಂತೆ ಸಚಿವರು ಮನವಿ ಮಾಡಿದರು. ಆದರೆ, ಹೋರಾಟದ ಪಟ್ಟು ಸಡಿಲಿಸಲು ಸ್ವಾಮೀಜಿ ಹಾಗೂ ಸಮಾಜದ ಮುಖಂಡರು ಒಪ್ಪಲಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ಮುಂದಿನ ಹಂತದಲ್ಲಿ ಮಾತುಕತೆ ನಡೆಸಲು ಹಾಗೂ ಸರ್ಕಾರದ ಸ್ಪಂದನೆಯ ಬಗ್ಗೆ ಜನವರಿ 14ರವರೆಗೆ ಕಾದು ನೋಡಲು ಸಭೆ ತೀರ್ಮಾನಿಸಿತು.

ಇಂದಿನ ಸಭೆಯ ನಿಣ೯ಯಗಳನ್ನು ಭಾನುವಾರ ಸಿಎಂ ಜೊತೆ ಚಚಿ೯ಸಲಿದ್ದೇನೆ. ಬಳಿಕ ಸಿಎಂ ಜೊತೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಮಾತುಕತೆಗೆ ಆಹ್ವಾನಿಸಲಾಗುವುದು ಎಂದು ಸಚಿವ ಸಿ.ಸಿ.ಪಾಟೀಲ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT