ಬಾಗಲಕೋಟೆ: ತಮ್ಮ 41ನೇ ಹುಟ್ಟುಹಬ್ಬದ ನಿಮಿತ್ತ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ರಕ್ತದಾನ ಮಾಡಿದರು.
ಬಾಗಲಕೋಟೆ ನಗರದ ಗೂರನವರ ಆಸ್ಪತ್ರೆಯಲ್ಲಿ ಸ್ವಾಮೀಜಿ ರಕ್ತದಾನ ಮಾಡಿದರು.
ಶ್ರೀಗಳ ಹುಟ್ಟುಹಬ್ಬ ಹಾಗೂ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2 ಎ ಮೀಸಲಾತಿ ನೀಡಬೇಕು ಎಂಬ ಹೋರಾಟದ ಹಿನ್ನೆಲೆಯಲ್ಲಿ ರಾಜ್ಯದ 22 ಜಿಲ್ಲೆಗಳಲ್ಲಿ ಪಂಚಮಸಾಲಿ ಸಮಾಜದ ಯುವ ಘಟಕ ರಕ್ತದಾನ ಶಿಬಿರ ಆಯೋಜಿಸಿದೆ.
ಸ್ವಾಮೀಜಿ ಜೊತೆಗೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದಲ್ಲಿ ಅವರ ಭಕ್ತರೂ ರಕ್ತದಾನ ಮಾಡಿದರು.