<p><strong>ಬಾಗಲಕೋಟೆ:</strong> ಜಿಲ್ಲೆ ಕೂಡಲಸಂಗಮದಲ್ಲಿ ಭಾನುವಾರ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ನ ಕಾರ್ಯಕಾರಿಣಿ ಸಭೆಯಲ್ಲಿ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಚಾಟಿಸಲು ನಿರ್ಧರಿಸಲಾಗಿದೆ.</p><p>ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ, ಟ್ರಸ್ಟ್ನಲ್ಲಿ ಉಚ್ಚಾಟನೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇನ್ನು ಮುಂದೆ ಪೀಠಕ್ಕೂ, ಅವರಿಗೆ ಸಂಬಂಧವಿಲ್ಲ ಎಂದು ಅವರು ಹೇಳಿದರು.</p><p>ಹುಬ್ಬಳ್ಳಿಯಲ್ಲಿ ನಡೆದ ಜನಪ್ರತಿನಿಧಿಗಳ ಸಭೆಯಲ್ಲಿ ಧರ್ಮ ಕಾಲಂನಲ್ಲಿ ಹಿಂದೂ ಬರೆಯಿಸಲು, ಜಾತಿ ಕಾಲಂನಲ್ಲಿ ಲಿಂಗಾಯತ ಎಂದು ಬರೆಸಲು ಹೇಳಿದ್ದಾರೆ. ಟ್ರಸ್ಟ್ ಬಸವ ತತ್ವದಲ್ಲಿ ನಡೆಯುತ್ತಿರುವುದರಿಂದ ಇದು ಟ್ರಸ್ಟ್ ನಿರ್ಧಾರಕ್ಕೆ ವಿರೋಧವಾಗಿದೆ ಎಂದರು.</p><p>ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮಾತನಾಡಿ, ಸ್ವಾಮೀಜಿ ಅವರು ವೈಯಕ್ತಿಕವಾಗಿ ಯಾವುದೇ ಆಸ್ತಿ ಮಾಡಿಕೊಳ್ಳಬಾರದು ಎಂದಿದೆ. ಆದರೆ, ಅವರು ಬೆಳಗಾವಿ, ಹುಬ್ಬಳ್ಳಿ, ಬೆಂಗಳೂರಿನಲ್ಲಿ ಮನೆ ಮಾಡಿಕೊಂಡಿದ್ದಾರೆ. ಅವರ ಹೆಸರಿನಲ್ಲಿ ಆಸ್ತಿ ಮಾಡಿಕೊಂಡಿದ್ದಾರೆ. ಸಮಯ ಬಂದಾಗ ವಿವರ ಬಹಿರಂಗ ಪಡಿಸುತ್ತೇನೆ ಎಂದು ಹೇಳಿದರು. </p><p>ಸ್ವಾಭಿಮಾನವಿದ್ದರೆ ಸ್ವಾಮೀಜಿ ಪೀಠಕ್ಕೆ ಬರಬಾರದು. ಹಿಂದೂ ಎಂದು ಬರೆಯಿಸಲು ಹೇಳಿರುವುದು ಮೀಸಲಾತಿ ಹೋರಾಟ ಹತ್ತಿಕ್ಕುವ ತಂತ್ರವಾಗಿದೆ. ಇದಕ್ಕೆ ಸ್ವಾಮೀಜಿಯನ್ನು ಕೆಲವರು ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದರು.</p>.ಅಡೆತಡೆ ಬಂದಷ್ಟು ಗಟ್ಟಿ: ಬಸವ ಜಯಮೃತ್ಯುಂಜಯ ಸ್ವಾಮೀಜಿ.‘ಭಿನ್ನಾಭಿಪ್ರಾಯ ಬಿಟ್ಟು ಸಮಾಜ ಸಂಘಟಿಸಿ‘: ಬಸವ ಜಯಮೃತ್ಯುಂಜಯ ಸ್ವಾಮೀಜಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಜಿಲ್ಲೆ ಕೂಡಲಸಂಗಮದಲ್ಲಿ ಭಾನುವಾರ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ನ ಕಾರ್ಯಕಾರಿಣಿ ಸಭೆಯಲ್ಲಿ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಚಾಟಿಸಲು ನಿರ್ಧರಿಸಲಾಗಿದೆ.</p><p>ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ, ಟ್ರಸ್ಟ್ನಲ್ಲಿ ಉಚ್ಚಾಟನೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇನ್ನು ಮುಂದೆ ಪೀಠಕ್ಕೂ, ಅವರಿಗೆ ಸಂಬಂಧವಿಲ್ಲ ಎಂದು ಅವರು ಹೇಳಿದರು.</p><p>ಹುಬ್ಬಳ್ಳಿಯಲ್ಲಿ ನಡೆದ ಜನಪ್ರತಿನಿಧಿಗಳ ಸಭೆಯಲ್ಲಿ ಧರ್ಮ ಕಾಲಂನಲ್ಲಿ ಹಿಂದೂ ಬರೆಯಿಸಲು, ಜಾತಿ ಕಾಲಂನಲ್ಲಿ ಲಿಂಗಾಯತ ಎಂದು ಬರೆಸಲು ಹೇಳಿದ್ದಾರೆ. ಟ್ರಸ್ಟ್ ಬಸವ ತತ್ವದಲ್ಲಿ ನಡೆಯುತ್ತಿರುವುದರಿಂದ ಇದು ಟ್ರಸ್ಟ್ ನಿರ್ಧಾರಕ್ಕೆ ವಿರೋಧವಾಗಿದೆ ಎಂದರು.</p><p>ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮಾತನಾಡಿ, ಸ್ವಾಮೀಜಿ ಅವರು ವೈಯಕ್ತಿಕವಾಗಿ ಯಾವುದೇ ಆಸ್ತಿ ಮಾಡಿಕೊಳ್ಳಬಾರದು ಎಂದಿದೆ. ಆದರೆ, ಅವರು ಬೆಳಗಾವಿ, ಹುಬ್ಬಳ್ಳಿ, ಬೆಂಗಳೂರಿನಲ್ಲಿ ಮನೆ ಮಾಡಿಕೊಂಡಿದ್ದಾರೆ. ಅವರ ಹೆಸರಿನಲ್ಲಿ ಆಸ್ತಿ ಮಾಡಿಕೊಂಡಿದ್ದಾರೆ. ಸಮಯ ಬಂದಾಗ ವಿವರ ಬಹಿರಂಗ ಪಡಿಸುತ್ತೇನೆ ಎಂದು ಹೇಳಿದರು. </p><p>ಸ್ವಾಭಿಮಾನವಿದ್ದರೆ ಸ್ವಾಮೀಜಿ ಪೀಠಕ್ಕೆ ಬರಬಾರದು. ಹಿಂದೂ ಎಂದು ಬರೆಯಿಸಲು ಹೇಳಿರುವುದು ಮೀಸಲಾತಿ ಹೋರಾಟ ಹತ್ತಿಕ್ಕುವ ತಂತ್ರವಾಗಿದೆ. ಇದಕ್ಕೆ ಸ್ವಾಮೀಜಿಯನ್ನು ಕೆಲವರು ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದರು.</p>.ಅಡೆತಡೆ ಬಂದಷ್ಟು ಗಟ್ಟಿ: ಬಸವ ಜಯಮೃತ್ಯುಂಜಯ ಸ್ವಾಮೀಜಿ.‘ಭಿನ್ನಾಭಿಪ್ರಾಯ ಬಿಟ್ಟು ಸಮಾಜ ಸಂಘಟಿಸಿ‘: ಬಸವ ಜಯಮೃತ್ಯುಂಜಯ ಸ್ವಾಮೀಜಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>