ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವ ಜಯಂತಿ: ಜೋಡೆತ್ತುಗಳ ಮೆರವಣಿಗೆ

Published 24 ಏಪ್ರಿಲ್ 2023, 11:21 IST
Last Updated 24 ಏಪ್ರಿಲ್ 2023, 11:21 IST
ಅಕ್ಷರ ಗಾತ್ರ

ಕಮತಗಿ(ಅಮೀನಗಡ): ಪಟ್ಟಣದ ಹೊಳೆ ಹುಚ್ಚೇಶ್ವರ ಗೆಳೆಯರ ಬಳಗದ ವತಿಯಿಂದ ಬಸವ ಜಯಂತಿ ಪ್ರಯುಕ್ತ ಜೋಡೆತ್ತುಗಳ ಮೆರವಣಿಗೆ ನಡೆಯಿತು.

ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ ಹುಚ್ಚೇಶ್ವರ ಸ್ವಾಮೀಜಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಜೋಡೆತ್ತುಗಳ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯಲ್ಲಿ 30ಕ್ಕೂ ಹೆಚ್ಚು ಜೋಡೆತ್ತುಗಳು ಭಾಗವಹಿಸಿದ್ದವು. ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರಗೇಶ ಕಡ್ಲಿಮಟ್ಟಿ, ಉದ್ಯಮಿ ವಿದ್ಯಾಧರ ಮಳ್ಳಿ, ಪಪಂ ಸದಸ್ಯ ಗುರುಲಿಂಗಪ್ಪ ಪಾಟೀಲ, ಹುಚ್ಚಪ್ಪ ಸಿಂಹಾಸನ, ಹುಚ್ಚಪ್ಪ ಶಿರಗುಂಪಿ, ಗಂಗಪ್ಪ ಭೂತಲ ಸೇರಿದಂತೆ ಅನೇಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT