ಬಿಜೆಪಿ ಜೊತೆ ಹೊಂದಾಣಿಕೆಯನ್ನು ಟೀಕಿಸುತ್ತಿರುವ ಕಾಂಗ್ರೆಸ್ ನಾಯಕರು, ಈ ಹಿಂದೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಹೊರಟ್ಟಿ ಅವರನ್ನು ಮೇಲ್ಮನೆ ಸಭಾಪತಿ ಮಾಡುವಂತೆ ಕೇಳಿದಾಗ ಏಕೆ ಒಪ್ಪಿರಲಿಲ್ಲ ಎಂದು ಪ್ರಶ್ನಿಸಿದರು. ಆಗ ಸ್ವತಃ ದೇವೇಗೌಡರೇ ಸೋನಿಯಾ ಗಾಂಧಿ ಅವರೊಂದಿಗೆ ಚರ್ಚಿಸಿದ್ದರೂ ಪ್ರಯೋಜನವಾಗಿರಲಿಲ್ಲ. ಬೇಕಾದಾಗ ಜೆಡಿಎಸ್ ಪಕ್ಷವನ್ನು ಬಳಸಿ ಬಿಸಾಕುವ ಕಾಂಗ್ರೆಸ್ ನಾಯಕರಿಗೆ ಈಗ ಮಾತನಾಡುವ ಹಕ್ಕಿಲ್ಲ ಎಂದರು.