ಲೋಕಸಭೆಗೆ ಪ್ರಬಲ ಆಕಾಂಕ್ಷಿ ಬಾಗಲಕೋಟೆ:
ಮುಂಬರುವ ಲೋಕಸಭಾ ಚುನಾವಣೆಗೆ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಚಿವ ಅಜಯಕುಮಾರ ಸರನಾಯಕ ಹೇಳಿದರು. ಸ್ಪರ್ಧೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಸ್ಪರ್ಧೆಗೆ ಅಗತ್ಯವಿರುವ ಕೆಲ ಸಿದ್ಧತೆ ಮಾಡಿಕೊಂಡಿದ್ದೇನೆ. ಕೆಲ ನಾಯಕರನ್ನೂ ಭೇಟಿಯಾಗಿ ಚರ್ಚಿಸಿದ್ದೇನೆ. ಪಕ್ಷಕ್ಕೆ ಗೆಲ್ಲುವ ಅಭ್ಯರ್ಥಿ ಬೇಕು. ಹಾಗಾಗಿ ನನಗೆ ಟಿಕೆಟ್ ನೀಡುವ ವಿಶ್ವಾಸವಿದೆ ಎಂದರು.