ಎಲ್ಲ ಪೂಜಾ ಕಾರ್ಯಕ್ರಮಗಳನ್ನು ಪೂರೈಸಿದ ನಂತರ ಪಾಲ್ಗೊಂಡಿರುವ ಸಮಸ್ತ ಭಕ್ತರು ಸಾಮೂಹಿಕವಾಗಿ ಕಿಚಡಿ ಹಾಗೂ ಕಟ್ಟಿನ ಸಾರು ಮತ್ತು ಮಜ್ಜಿಗೆ ಸಾರಿನ ಸವಿ ಸವಿದರು. ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಹೇಮರಡ್ಡಿ ಮಲ್ಲಮ್ಮ ಹಾಗೂ ಮಹಾಯೋಗಿ ವೇಮನ ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಯುವಕರು,ಶಾಲಾ ಮಕ್ಕಳು ಸೇರಿದಂತೆ ಅಪಾರ ಸಂಖ್ಯೆಯ ಜನ ಪಾಲ್ಗೊಂಡಿದ್ದರು.