<p><strong>ಬಾಗಲಕೋಟೆ</strong>: ‘ಸಾಧನೆಯ ಕನಸು ಕಾಣಲು ಹಣ ಬೇಕಿಲ್ಲ, ಕನಸು ನನಸಾಗಲು ಪಣ ಬೇಕು. ಅಂದಾಗ ಸಾಧನೆ ನಮ್ಮದಾಗುತ್ತದೆ’ ಎಂದು ಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಆರ್. ಮೂಗನೂರಮಠ ಹೇಳಿದರು.</p>.<p>ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಈಚೆಗೆ ನಡೆದ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಮತ್ತು ಹಾಗೂ ಬಿ.ಕಾಂ., ಬಿ.ಬಿ.ಎ, ಎ.ಕಾಂ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಮಾತನಾಡಿದರು.</p>.<p>ಇದೇ ಸಂದರ್ಭದಲ್ಲಿ ‘ವಾಣಿಜ್ಯ ಚಂದನ’ ವಾರ್ಷಿಕ ಸಂಚಿಕೆ ಬಿಡುಗಡೆ ಮಾಡಲಾಯಿತು. ಸಾಹಿತ್ಯ ರತ್ನ ಪ್ರಶಸ್ತಿ ಪಡೆದ ಪ್ರಾಧ್ಯಾಪಕ ಬಸವರಾಜ ಖೋತ ಹಾಗೂ ಕೆಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಸ್.ಐ.ಪತ್ತಾರ ಅವರನ್ನು ಸತ್ಕರಿಸಲಾಯಿತು.</p>.<p>ವಿವಿಧ ವಿಭಾಗಳಲ್ಲಿ ರ್ಯಾಂಕ್ ಪಡೆದ, ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಮಹಾವಿದ್ಯಾಲಯದ ಪ್ರಾಚಾರ್ಯ ಜಗನ್ನಾಥ ಚವ್ಹಾಣ ಅಧ್ಯಕ್ಷತೆ ವಹಿಸಿದ್ದರು.</p>.<p>ರಾಜು ಮೇಲಿನಮನಿ, ಬಿ.ವಿ.ಖೋತ, ಕೆ.ಜಿ.ಮಳಜಿ, ಎಸ್.ಎಸ್.ಕೋಟ್ಯಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ಸಾಧನೆಯ ಕನಸು ಕಾಣಲು ಹಣ ಬೇಕಿಲ್ಲ, ಕನಸು ನನಸಾಗಲು ಪಣ ಬೇಕು. ಅಂದಾಗ ಸಾಧನೆ ನಮ್ಮದಾಗುತ್ತದೆ’ ಎಂದು ಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಆರ್. ಮೂಗನೂರಮಠ ಹೇಳಿದರು.</p>.<p>ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಈಚೆಗೆ ನಡೆದ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಮತ್ತು ಹಾಗೂ ಬಿ.ಕಾಂ., ಬಿ.ಬಿ.ಎ, ಎ.ಕಾಂ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಮಾತನಾಡಿದರು.</p>.<p>ಇದೇ ಸಂದರ್ಭದಲ್ಲಿ ‘ವಾಣಿಜ್ಯ ಚಂದನ’ ವಾರ್ಷಿಕ ಸಂಚಿಕೆ ಬಿಡುಗಡೆ ಮಾಡಲಾಯಿತು. ಸಾಹಿತ್ಯ ರತ್ನ ಪ್ರಶಸ್ತಿ ಪಡೆದ ಪ್ರಾಧ್ಯಾಪಕ ಬಸವರಾಜ ಖೋತ ಹಾಗೂ ಕೆಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಸ್.ಐ.ಪತ್ತಾರ ಅವರನ್ನು ಸತ್ಕರಿಸಲಾಯಿತು.</p>.<p>ವಿವಿಧ ವಿಭಾಗಳಲ್ಲಿ ರ್ಯಾಂಕ್ ಪಡೆದ, ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಮಹಾವಿದ್ಯಾಲಯದ ಪ್ರಾಚಾರ್ಯ ಜಗನ್ನಾಥ ಚವ್ಹಾಣ ಅಧ್ಯಕ್ಷತೆ ವಹಿಸಿದ್ದರು.</p>.<p>ರಾಜು ಮೇಲಿನಮನಿ, ಬಿ.ವಿ.ಖೋತ, ಕೆ.ಜಿ.ಮಳಜಿ, ಎಸ್.ಎಸ್.ಕೋಟ್ಯಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>