<p><strong>ರಬಕವಿ ಬನಹಟ್ಟಿ:</strong> ಭಜಂತ್ರಿ ಸಮುದಾಯವು ಅತ್ಯಂತ ಹಿಂದುಳಿದ ಸಮಾಜವಾಗಿದೆ. ಮುಂದಿನ ದಿನಗಳಲ್ಲಿ ಅವರಿಗೆ ಸೂಕ್ತ ಸ್ಥಾನ ಮಾನಗಳನ್ನು ನೀಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.</p>.<p>ಸಮೀಪದ ರಾಮಪುರದ ದಾನೇಶ್ವರ ಸಮುದಾಯ ಭವನದಲ್ಲಿ ರಬಕವಿ ಬನಹಟ್ಟಿ ತಾಲ್ಲೂಕು ನೂಲಿ ಚಂದಯ್ಯ ಜಯಂತಿ ಉತ್ಸವ ಸಮಿತಿ ಭಾನುವಾರ ಹಮ್ಮಿಕೊಂಡಿದ್ದ ಚಂದಯ್ಯನವರ 918 ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಶಿಕ್ಷಣದಿಂದ ಮಾತ್ರ ಸಮಾಜ ಸುಧಾರಣೆ ಸಾಧ್ಯ. ಶಿಕ್ಷಣದಿಂದ ಸಂಘಟನೆ ಬೆಳೆಯುತ್ತದೆ. ಶಿಕ್ಷಣ ಸಂಘಟನೆಯ ಹೋರಾಟವು ಸಮಾಜದ ಧ್ಯೇಯವಾಗಬೇಕು ಎಂದು ತಿಳಿಸಿದರು.</p>.<p>ಶಾಸಕ ಸಿದ್ದು ಸವದಿ ಮಾತನಾಡಿ, ನೂಲಿ ಚಂದಯ್ಯನವರು ಕಾಯಕದ ಮಹತ್ವವನ್ನು ನಾಡಿಗೆ ತಿಳಿಸಿದವರು. ಹನ್ನೆರಡನೆಯ ಶತಮಾನದ ಶರಣರ ತತ್ವ ಸಿದ್ಧಾಂತಗಳು ಇಂದಿನ ದಿನಗಳಲ್ಲಿಯೂ ಹೆಚ್ಚು ಪ್ರಸ್ತುತವಾಗಿವೆ. ಪ್ರತಿಯೊಬ್ಬರೂ ಶರಣರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದು ತಿಳಿಸಿದರು.</p>.<p>ಅಲೆಮಾರಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೀಣಾ ಕಾಶಪ್ಪನವರ, ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ, ಜಿ. ಮಾದೇಶ ಮಾತನಾಡಿದರು.</p>.<p>ರಬಕವಿಯ ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಸ್ವಾಮೀಜಿ, ಬೆಳಗಲಿಯ ಸಿದ್ಧರಾಮ ಶಿವಯೋಗಿಗಳು, ಕಣದಾಳದ ರಾಮಣ್ಣ ಮಹಾರಾಜರು, ನಿಹಾಲ ಅಪ್ಪಾಜಿ ಪೂಜ್ಯರು ಸಾನ್ನಿಧ್ಯ ವಹಿಸಿದ್ದರು.</p>.<p>ಭಜಂತ್ರಿ ಸಮುದಾಯದ ಸಾಧರಕರನ್ನು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ರಬಕವಿ ಬನಹಟ್ಟಿ ನಗರಸಭೆಯ ಅಧ್ಯಕ್ಷೆ ವಿದ್ಯಾ ಧಬಾಡಿ, ಉಪಾಧ್ಯಕ್ಷೆ ದೀಪಾ ಗಾಡಿವಡ್ಡರ, ತಹಶೀಲ್ದಾರ್ ಗಿರೀಶ ಸ್ವಾದಿ, ಬೆಂಗಳೂರಿನ ಸಿಪಿಐ ಹನಮಂತ ಭಜಂತ್ರಿ, ಅರುಣ ಬುದ್ನಿ, ರಾಘವೇಂದ್ರ ನೀಲನ್ನವರ, ಯಶವಂತ ವಾಜಂತ್ರಿ, ಚಂದ್ರಕಾಂತ ಹೊಸೂರ, ನಾಗರಾಜ ಭಜಂತ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಬಕವಿ ಬನಹಟ್ಟಿ:</strong> ಭಜಂತ್ರಿ ಸಮುದಾಯವು ಅತ್ಯಂತ ಹಿಂದುಳಿದ ಸಮಾಜವಾಗಿದೆ. ಮುಂದಿನ ದಿನಗಳಲ್ಲಿ ಅವರಿಗೆ ಸೂಕ್ತ ಸ್ಥಾನ ಮಾನಗಳನ್ನು ನೀಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.</p>.<p>ಸಮೀಪದ ರಾಮಪುರದ ದಾನೇಶ್ವರ ಸಮುದಾಯ ಭವನದಲ್ಲಿ ರಬಕವಿ ಬನಹಟ್ಟಿ ತಾಲ್ಲೂಕು ನೂಲಿ ಚಂದಯ್ಯ ಜಯಂತಿ ಉತ್ಸವ ಸಮಿತಿ ಭಾನುವಾರ ಹಮ್ಮಿಕೊಂಡಿದ್ದ ಚಂದಯ್ಯನವರ 918 ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಶಿಕ್ಷಣದಿಂದ ಮಾತ್ರ ಸಮಾಜ ಸುಧಾರಣೆ ಸಾಧ್ಯ. ಶಿಕ್ಷಣದಿಂದ ಸಂಘಟನೆ ಬೆಳೆಯುತ್ತದೆ. ಶಿಕ್ಷಣ ಸಂಘಟನೆಯ ಹೋರಾಟವು ಸಮಾಜದ ಧ್ಯೇಯವಾಗಬೇಕು ಎಂದು ತಿಳಿಸಿದರು.</p>.<p>ಶಾಸಕ ಸಿದ್ದು ಸವದಿ ಮಾತನಾಡಿ, ನೂಲಿ ಚಂದಯ್ಯನವರು ಕಾಯಕದ ಮಹತ್ವವನ್ನು ನಾಡಿಗೆ ತಿಳಿಸಿದವರು. ಹನ್ನೆರಡನೆಯ ಶತಮಾನದ ಶರಣರ ತತ್ವ ಸಿದ್ಧಾಂತಗಳು ಇಂದಿನ ದಿನಗಳಲ್ಲಿಯೂ ಹೆಚ್ಚು ಪ್ರಸ್ತುತವಾಗಿವೆ. ಪ್ರತಿಯೊಬ್ಬರೂ ಶರಣರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದು ತಿಳಿಸಿದರು.</p>.<p>ಅಲೆಮಾರಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೀಣಾ ಕಾಶಪ್ಪನವರ, ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ, ಜಿ. ಮಾದೇಶ ಮಾತನಾಡಿದರು.</p>.<p>ರಬಕವಿಯ ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಸ್ವಾಮೀಜಿ, ಬೆಳಗಲಿಯ ಸಿದ್ಧರಾಮ ಶಿವಯೋಗಿಗಳು, ಕಣದಾಳದ ರಾಮಣ್ಣ ಮಹಾರಾಜರು, ನಿಹಾಲ ಅಪ್ಪಾಜಿ ಪೂಜ್ಯರು ಸಾನ್ನಿಧ್ಯ ವಹಿಸಿದ್ದರು.</p>.<p>ಭಜಂತ್ರಿ ಸಮುದಾಯದ ಸಾಧರಕರನ್ನು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ರಬಕವಿ ಬನಹಟ್ಟಿ ನಗರಸಭೆಯ ಅಧ್ಯಕ್ಷೆ ವಿದ್ಯಾ ಧಬಾಡಿ, ಉಪಾಧ್ಯಕ್ಷೆ ದೀಪಾ ಗಾಡಿವಡ್ಡರ, ತಹಶೀಲ್ದಾರ್ ಗಿರೀಶ ಸ್ವಾದಿ, ಬೆಂಗಳೂರಿನ ಸಿಪಿಐ ಹನಮಂತ ಭಜಂತ್ರಿ, ಅರುಣ ಬುದ್ನಿ, ರಾಘವೇಂದ್ರ ನೀಲನ್ನವರ, ಯಶವಂತ ವಾಜಂತ್ರಿ, ಚಂದ್ರಕಾಂತ ಹೊಸೂರ, ನಾಗರಾಜ ಭಜಂತ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>